ಜಿಲ್ಲೆಗಳು

ನಾಗಮಂಗಲ : ಮಳೆಗೆ KSRTC ಬಸ್ ನಿಲ್ದಾಣ ಮುಳುಗಡೆ

ನಾಗಮಂಗಲ: ನಿನ್ನೆ ರಾತ್ರಿ ಸುರಿದ ಮಳೆಗೆ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ ನೀರಿನಲ್ಲಿ ಮುಳುಗಡೆಯಾಗಿದೆ. ಈ ಸಂಬಧ
ಎಚ್ಚೆತ್ತುಕೊಳ್ಳದ ತಾಲ್ಲೂಕು ಆಡಳಿತ, ಪುರಸಭೆ ಮತ್ತು ಜನಪ್ರತಿನಿಧಿಗಳು.
ಖಾಯಂ ವ್ಯವಸ್ಥೆ ಕಲ್ಪಿಸದೆ ಕಾಲಹರಣ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ರಾತ್ರಿ ಸುರಿದ ಭಾರಿ ಮಳೆಗೆ ಪಟ್ಟಣಕ್ಕೆ ಹೊಂದಿಕೊಂಡಿರುವ ಹಿರಿಕೆರೆಯಲ್ಲಿ ಹೆಚ್ಚಿದ ನೀರು. ಕೋಡಿಯಲ್ಲಿ ಉಕ್ಕಿ ಹರಿದ ನೀರಿನ ಪರಿಣಾಮ ಬಸ್ ನಿಲ್ದಾಣ, ಪೆಟ್ರೋಲ್ ಬಂಕ್ ಜಮೀನುಗಳು ನೀರಿನಿಂದ ಜಲಾವೃತವಾಗಿದೆ.
ಮಳೆ ಆರಂಭವಾದ ಕೂಡಲೇ ಎಚ್ಚೆತ್ತ ಕೆಎಸ್ ಆರ್ ಟಿಸಿ ಸಿಬ್ಬಂದಿ ಡಿಪೋದಲ್ಲಿದ್ದ 60ಕ್ಕೂ ಹೆಚ್ಚು ಬಸ್ ಗಳನ್ನು ಬೀದರ್- ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಚಾಲಕರು ವಾಹನಗಳನ್ನು ನಿಲ್ಲಿಸುವಂತಾಗಿದೆ.

ಕೋಡಿ ನೀರು ಸರಾಗವಾಗಿ ಹರಿದು ಹೋಗಲು ಹಲವು ಅಡೆತಡೆ ರಾಜ ಕಾಲುವೆಗಳ ಒತ್ತುವರಿ. ಯಾವುದರ ಬಗ್ಗೆಯೂ ತಲೆಕೆಡಿಸಿಕೊಳ್ಳದ ಪುರಸಭೆ, ನೀರಾವರಿ ಇಲಾಖೆಯ ಅಧಿಕಾರಿ ವರ್ಗದ ವಿರುದ್ಧ ಬೇಸರ ಹೊರಹಾಕಿದ್ದಾರೆ.
ಬಳಿಕ ಶಾಸಕ ಸುರೇಶ್ ಗೌಡ ಸ್ಥಳಕ್ಕೆ ಭೇಟಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಚೀಫ್ ಇಂಜಿನಿಯರ್ ರವೀಂದ್ರ ರಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ ಶಾಸಕ. ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ತೋರಿಸಿದ ಶಾಸಕ. ರಾಜಕಾಲುವೆಯನ್ನು ರಾಷ್ಟ್ರೀಯ ಹೆದ್ದಾರಿಯವರು ಕಿರಿದು ಮಾಡಿದ ಪರಿಣಾಮ ಸಮಸ್ಯೆ ಎದುರಾಗಿದೆ. ಈ ಬಗ್ಗೆ ಕ್ರಮವಹಿಸಲಾಗುವುದು ಎಂದು ಹೇಳಿದ್ದಾರೆ.

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

7 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

20 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

20 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

20 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

20 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

21 hours ago