ಜಿಲ್ಲೆಗಳು

ನಾಗಮಂಗಲ : ಮಳೆಗೆ KSRTC ಬಸ್ ನಿಲ್ದಾಣ ಮುಳುಗಡೆ

ನಾಗಮಂಗಲ: ನಿನ್ನೆ ರಾತ್ರಿ ಸುರಿದ ಮಳೆಗೆ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ ನೀರಿನಲ್ಲಿ ಮುಳುಗಡೆಯಾಗಿದೆ. ಈ ಸಂಬಧ
ಎಚ್ಚೆತ್ತುಕೊಳ್ಳದ ತಾಲ್ಲೂಕು ಆಡಳಿತ, ಪುರಸಭೆ ಮತ್ತು ಜನಪ್ರತಿನಿಧಿಗಳು.
ಖಾಯಂ ವ್ಯವಸ್ಥೆ ಕಲ್ಪಿಸದೆ ಕಾಲಹರಣ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ರಾತ್ರಿ ಸುರಿದ ಭಾರಿ ಮಳೆಗೆ ಪಟ್ಟಣಕ್ಕೆ ಹೊಂದಿಕೊಂಡಿರುವ ಹಿರಿಕೆರೆಯಲ್ಲಿ ಹೆಚ್ಚಿದ ನೀರು. ಕೋಡಿಯಲ್ಲಿ ಉಕ್ಕಿ ಹರಿದ ನೀರಿನ ಪರಿಣಾಮ ಬಸ್ ನಿಲ್ದಾಣ, ಪೆಟ್ರೋಲ್ ಬಂಕ್ ಜಮೀನುಗಳು ನೀರಿನಿಂದ ಜಲಾವೃತವಾಗಿದೆ.
ಮಳೆ ಆರಂಭವಾದ ಕೂಡಲೇ ಎಚ್ಚೆತ್ತ ಕೆಎಸ್ ಆರ್ ಟಿಸಿ ಸಿಬ್ಬಂದಿ ಡಿಪೋದಲ್ಲಿದ್ದ 60ಕ್ಕೂ ಹೆಚ್ಚು ಬಸ್ ಗಳನ್ನು ಬೀದರ್- ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಚಾಲಕರು ವಾಹನಗಳನ್ನು ನಿಲ್ಲಿಸುವಂತಾಗಿದೆ.

ಕೋಡಿ ನೀರು ಸರಾಗವಾಗಿ ಹರಿದು ಹೋಗಲು ಹಲವು ಅಡೆತಡೆ ರಾಜ ಕಾಲುವೆಗಳ ಒತ್ತುವರಿ. ಯಾವುದರ ಬಗ್ಗೆಯೂ ತಲೆಕೆಡಿಸಿಕೊಳ್ಳದ ಪುರಸಭೆ, ನೀರಾವರಿ ಇಲಾಖೆಯ ಅಧಿಕಾರಿ ವರ್ಗದ ವಿರುದ್ಧ ಬೇಸರ ಹೊರಹಾಕಿದ್ದಾರೆ.
ಬಳಿಕ ಶಾಸಕ ಸುರೇಶ್ ಗೌಡ ಸ್ಥಳಕ್ಕೆ ಭೇಟಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಚೀಫ್ ಇಂಜಿನಿಯರ್ ರವೀಂದ್ರ ರಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ ಶಾಸಕ. ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ತೋರಿಸಿದ ಶಾಸಕ. ರಾಜಕಾಲುವೆಯನ್ನು ರಾಷ್ಟ್ರೀಯ ಹೆದ್ದಾರಿಯವರು ಕಿರಿದು ಮಾಡಿದ ಪರಿಣಾಮ ಸಮಸ್ಯೆ ಎದುರಾಗಿದೆ. ಈ ಬಗ್ಗೆ ಕ್ರಮವಹಿಸಲಾಗುವುದು ಎಂದು ಹೇಳಿದ್ದಾರೆ.

andolanait

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

60 mins ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

8 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

8 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

8 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

8 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

8 hours ago