ಜಿಲ್ಲೆಗಳು

ನಾಗರಹೊಳೆ, ಬಂಡೀಪುರದಲ್ಲಿ ಡಬಲ್‌ ಧಮಾಕಾ…!

ಕಬಿನಿ ಹಿನ್ನೀರಿನಲ್ಲಿ 4 ಮರಿಗಳ ಜತೆ ಹುಲಿ ದರ್ಶನ, ಬಂಡೀಪುರಕ್ಕೆ ಮತ್ತೆ ಬಂದಿದ್ದಾಳೆ ಸುಂದರಿ…

ಮೈಸೂರು: ಬಂಡೀಪುರ ಮತ್ತು ನಾಗರಹೊಳೆಯ ವನ್ಯಪ್ರೇಮಿಗಳಿಗೆ ಈಗ ಖುಷಿಯೋ ಖುಷಿ. ಕಾರಣವಿಷ್ಟೆ. ಅಪರೂಪಕ್ಕೆ ಕಾಣ ಸಿಗುವ ಹುಲಿಗಳು ಈಗ ಮರಿಗಳ ಜತೆ ದರ್ಶನ ನೀಡುತ್ತಿವೆ. ಬಂಡೀಪುರ ಬಿಟ್ಟು ಮಧುಮಲೈ ಅರಣ್ಯಕ್ಕೆ ಹೋಗಿದ್ದ ಸುಂದರಿ 18 ತಿಂಗಳ ಬಳಿಕ ಮರಿಯ ಜತೆ ಮರಳಿ ಬಂದಿದ್ದಾಳೆ. ಇತ್ತ ನಾಗರಹೊಳೆಯ ಅಂತರ ಸಂತೆ ವಲಯದಲ್ಲಿ ಎರಡು ಹುಲಿಗಳು ನಾಲ್ಕು-, ನಾಲ್ಕು ಮರಿಗಳೊಂದಿಗೆ ಕಾಣಿಸಿಕೊಳ್ಳುತ್ತಿವೆ. ತಾಯಿ ಮತ್ತು ಮರಿಗಳ ಜತೆ ಎರಡು ಗಂಡು ಹುಲಿಗಳೂ ಸೇರಿಕೊಂಡಿವೆ. ಸಫಾರಿ ಪ್ರಿಯರು ಅತ್ಯಪರೂಪದ ಈ ಗ್ರೂಪ್‌ ಫೋಟೊಗಳನ್ನು ಕ್ಲಿಕ್ಕಿಸಿ ಖುಷಿಪಡುತ್ತಿದ್ದಾರೆ.

ಎಚ್.‌ ಡಿ. ಕೋಟೆ ತಾಲ್ಲೂಕಿನ ಕಬಿನಿ ಹಿನ್ನೀರಿನ ಬಳಿ ಡಿಸೆಂಬರ್‌ 10ರ ಬೆಳಿಗ್ಗೆ ವನ್ಯಜೀವಿ ಸಫಾರಿಯಲ್ಲಿ ತಾಯಿ ಹುಲಿ ಮತ್ತು ನಾಲ್ಕು ಮರಿಗಳ ದರ್ಶನವಾಗಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಎರಡು ಹೆಣ್ಣು ಹುಲಿಗಳು ತಲಾ ನಾಲ್ಕು ಮರಿಗಳಿಗೆ ಜನ್ಮ ನೀಡಿರುವುದು ಇದೇ ಪ್ರಥಮ ಬಾರಿ ಎಂದು ಅಂತರಸಂತೆ ವನ್ಯಜೀವಿ ವಲಯ ಅರಣ್ಯ ಅಧಿಕಾರಿ ಎಸ್.ಎಸ್. ಸಿದ್ದರಾಜು ಸಂತಸ ಹಂಚಿಕೊಂಡಿದ್ದಾರೆ.


ಎಚ್.‌ಡಿ.ಕೋಟೆಯ ತಾರಕ ಹಿನ್ನೀರು ವ್ಯಾಪ್ತಿಯಲ್ಲಿ ರಸೂಲ್ ಲೈನ್ ಫೀಮೇಲ್ ಹೆಸರಿನಿಂದ ಗುರುತಿಸಿಕೊಂಡಿರುವ ಹೆಣ್ಣು ಹುಲಿಯು 11 ತಿಂಗಳ ಹಿಂದೆ ನಾಲ್ಕು ಮರಿಗಳಿಗೆ ಜನ್ಮ ನೀಡಿತ್ತು. ಈ ಹೆಣ್ಣು ಹುಲಿಗೆ ಸೀಳುತುಟಿ ಎಂಬ ಗಂಡುಹುಲಿ ಜೋಡಿಯಾಗಿದೆ. ಕಳೆದ ಅಕ್ಟೋಬರ್ 12ರಂದು ಕಬಿನಿ ಹಿನ್ನೀರಿನ ವ್ಯಾಪ್ತಿಯಲ್ಲಿ ಈ ಹೆಣ್ಣು ಹುಲಿಯು ತನ್ನ ನಾಲ್ಕು ಮರಿಗಳೊಂದಿಗೆ ವನ್ಯಪ್ರಿಯರಿಗೆ ದರ್ಶನ ನೀಡಿತ್ತು.

ಅಂತರ ಸಂತೆಯ ಕಬಿನಿ ಹಿನ್ನೀರು ಪ್ರದೇಶದ ವನ್ಯಪ್ರಿಯರು ಬ್ಯಾಕ್ ವಾಟರ್ ಫೀಮೇಲ್ ಎಂದು ಕರೆಯುತ್ತಿರುವ ಹೆಣ್ಣು ಹುಲಿಯು ಆರು ತಿಂಗಳ ಹಿಂದೆ ನಾಲ್ಕು ಮರಿಗಳಿಗೆ ಜನ್ಮ ನೀಡಿದೆ. ಈ ಹೆಣ್ಣು ಹುಲಿಗೆ ಈಗ ಟೈಗರ್ ಟ್ಯಾಂಕ್ ಗಂಡುಹುಲಿ ಜೋಡಿಯಾಗಿದೆ. ಈ ಹುಲಿಯೂ ಇತ್ತೀಚೆಗೆ ತನ್ನ ನಾಲ್ಕು ಮರಿಗಳೊಂದಿಗೆ ಕಾಣಿಸಿಕೊಂಡಿದೆ.

ಇನ್ನು ಬಂಡೀಪುರದ ರಾಯಭಾರಿ ಎಂದು ಕರೆಸಿಕೊಳ್ಳುತ್ತಿದ್ದ ” ಪ್ರಿನ್ಸ್‌ʼ ಹುಲಿಯ ಮರಣದ ಬಳಿಕ ಹುಲಿ ದರ್ಶನ ವಿರಳವಾಗಿತ್ತು. ಈ ಕೊರತೆಯನ್ನು ನೀಗಿಸಿದ್ದು ಸುಂದರಿ. ಎರಡು ಹುಲಿ ಮರಿಗಳಿಗೆ ಜನ್ಮ ನೀಡಿದ್ದ ಸುಂದರಿ ಸುಮಾರು ಎರಡು ವರ್ಷಗಳ ಕಾಲ ಆಗಾಗ ಸಫಾರಿ ಹಾದಿಯಲ್ಲಿ ದರ್ಶನ ಕೊಡುತ್ತಿದ್ದಳು. ಇದ್ದಕ್ಕಿದ್ದಂತೆ ಅದೇನಾಯಿತೋ ಗೊತ್ತಿಲ್ಲ. ಸುಂದರಿ ತನ್ನ ಮರಿಗಳನ್ನು ತೊರೆದು ಮಧುಮಲೈ ಅರಣ್ಯಕ್ಕೆ ವಾಸ್ತವ್ಯ ಬದಲಿಸಿದ್ದಳು. ಈ ಮಧ್ಯೆ ಕೆಕ್ಕನಹಳ್ಳಿ ಸಮೀಪ ಮಾಯಾರ್ ರಾಣಿ ಎಂಬ ಹುಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದಳು. ಇತ್ತೀಚೆಗೆ ಆಕೆ ಕಾಣಿಸುತ್ತಿಲ್ಲ.

ಈ ಮಧ್ಯೆ 18 ತಿಂಗಳ ಬಳಿಕ ಸುಂದರಿ ತನ್ನ ಮರಿ ಜತೆ ಬಂಡೀಪುರಕ್ಕೆ ಮರಳಿದ್ದಾಳೆ. ಮೊನ್ನೆ ತನ್ನ ಕಂದನಿಗೆ ರಸ್ತೆ ದಾಟುವ ಬಗೆಯನ್ನು ಹೇಳಿಕೊಡುತ್ತಿದ್ದ ಸುಂದರಿ ಸಫಾರಿಗೆ ಹೊರಟವರ ಕ್ಯಾಮೆರಾದಲ್ಲಿ ಸೆರೆಯಾಗಿದ್ದಾಳೆ. ಅವಳದು ಈಗಲೂ ಅದೇ ನಿರ್ಭೀತ, ಸ್ವಚ್ಛಂದ ನೋಟ. ಆರೇಳು ತಿಂಗಳು ಪ್ರಾಯದ ಮರಿ ಜತೆ ಸುಂದರಿ ವಾಕ್‌ ಮಾಡುತ್ತಿದ್ದರೆ ಬಂಡೀಪುರದ ಸೌಂದರ್ಯ ಇಮ್ಮಡಿಸಿದಂತೆ ಕಾಣುತ್ತಿದೆ. ಒಟ್ಟಾರೆಯಾಗಿ ನಾಗರಹೊಳೆ ಮತ್ತು ಬಂಡೀಪುರಕ್ಕೆ ಸಫಾರಿಗೆ ಬಂದರೆ, ನಿಮ್ಮ ಅದೃಷ್ಟ ಚೆನ್ನಾಗಿದ್ದರೆ ಡಬಲ್‌ ಧಮಾಕಾ ಗ್ಯಾರಂಟಿ..

andolanait

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

10 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

10 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

10 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

11 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

11 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

11 hours ago