ಕಾಡಂಚಿನ ಗ್ರಾಮಗಳಲ್ಲಿ ಉರುಳು ಕುರಿತು ಜಾಗೃತಿ ಮೂಡಿಸಲು ಅರಣ್ಯ ಇಲಾಖೆ ಜಾಥಾ
ಅಂತರಸಂತೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಂತರಸಂತೆ ವನ್ಯಜೀವಿ ವಲಯದ ವ್ಯಾಪ್ತಿಯ ತಾರಕ ಗಸ್ತಿನ ಬಳಿ ಹುಲಿಯೊಂದು ಉರುಳಿಗೆ ಸಿಲುಕಿ ಮರಿಗಳನ್ನು ಅಗಲಿ ಸಾವನ್ನಪ್ಪಿದ ಬಳಿಕ ಅರಣ್ಯ ಇಲಾಖೆ ಉರುಳು ಪತ್ತೇ ಕಾರ್ಯಚರಣೆಯನ್ನು ಚುರುಕುಗೊಳಿಸಿದ್ದು, ಇದೀಗಾ ಕಾಡಂಚಿನ ಗ್ರಾಮಗಳಲ್ಲಿ ಉರುಳು ಕುರಿತು ಜಾಗೃತಿ ಮೂಡಿಸುವ ಜಾಥವನ್ನು ನಡೆಸಿ ಉರುಳು ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ.
ತಾಲ್ಲೂಕಿನ ನಾಗರಹೊಳೆ ಅರಣ್ಯ ವ್ಯಾಪ್ತಿಯ ಅಂತರಸಂತೆ ವಲಯದ ತಾರಕ ಬಳಿ ಹುಲಿಯೊಂದು ಉರುಳಿಗೆ ಸಿಲುಕಿ ಸಾವನ್ನಪ್ಪಿ ಅದರ ಮರಿಗಳು ಅನಾಥವಾಗಿದ್ದವು. ಈ ವೇಳೆ ಅರಣ್ಯ ಇಲಾಖೆಯು ತನ್ನ ಸಿಬ್ಬಂದಿಗಳಿಗೆ ಕಾಡಂಚಿನ ೩ ಕಿಮೀ ವ್ಯಾಪ್ತಿ ಜೊತೆಗೆ ನೀರು ಹರಿಯುವ ಸ್ಥಳದಲ್ಲಿ ಉರುಳು ಪತ್ತೇ ಕಾರ್ಯಚರಣೆ ನಡೆಸುವಂತೆ ಸೂಚಿಸಿತ್ತು. ಜೊತೆಗೆ ಇದೀಗಾ ಅರಣ್ಯ ಇಲಾಖೆಯೂ ಸ್ವಯಂ ಸೇವಕರನ್ನೊಳಗೊಂಡಂತೆ ಕಾಡಂಚಿನ ಗ್ರಾಮಗಳಾದ ದಮ್ಮನಕಟ್ಟೆ, ಹುಣಸೇಕುಪ್ಪೆ, ಸತ್ತಿಗೆಹುಂಡಿ, ತಾರಕ ಹಾಗೂ ಕೊತ್ತನಹಳ್ಳಿ ಗ್ರಾಮಗಳಲ್ಲಿ ‘ವನ್ಯಜೀವಿಗಳಿಗೂ ಬದುಕುವ ಹಕ್ಕಿದೆ ಅವುಗಳನ್ನು ಕೊಲ್ಲುವುದಕ್ಕೆ ಸಹಕರಿಸಬೇಡಿ’ ಎಂಬ ಶೀರ್ಷಿಕೆಯ ಚಿತ್ರಗಳನ್ನು ಹಿಡಿದು ಉರುಳು ಬಗ್ಗೆ ಜಾಗೃತಿ ಜಾಥ ನಡೆಸಿದರು. ಹಾಗೂ ಧ್ವನಿವರ್ಧಕಗಳ ಮೂಲಕ ಉರುಳು ಹಾಕುವುದು ಅಪರಾಧವಾಗಿರುತ್ತದೆ. ಆದ್ದರಿಂದ ಉರುಳು ಹಾಕುವವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಅಥವ ಉರುಳು ಕಂಡುಬಂದಲ್ಲಿ ಕೂಡಲೇ ಅರಣ್ಯ ಇಲಾಖೆಯ ಸಹಾಯವಾಣಿ ೧೯೨೬ ಅಥವ ೯೪೮೨೦೧೧೫೪೩ ಗೆ ಕರೆ ಮಾಡುವಂತೆ ಸೂಚಿಸಲಾಯಿತು.
ಸ್ಥಳದಲ್ಲಿ ವಲಯ ಅರಣ್ಯಾಧಿಕಾರಿಗಳಾದ ಎಸ್.ಎಸ್.ಸಿದ್ದರಾಜು, ಹರ್ಷಿತ್, ಪಿಎಸ್ಐ ಜಯಪ್ರಕಾಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಬ್ರಮಣ್ಯ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿಗಳು, ಗ್ರಾಮಸ್ಥರು, ಸ್ವಯಂ ಸೇವಕರು ಹಾಜರಿದ್ದರು.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…