ಕಾಡಂಚಿನ ಗ್ರಾಮಗಳಲ್ಲಿ ಉರುಳು ಕುರಿತು ಜಾಗೃತಿ ಮೂಡಿಸಲು ಅರಣ್ಯ ಇಲಾಖೆ ಜಾಥಾ
ಅಂತರಸಂತೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಂತರಸಂತೆ ವನ್ಯಜೀವಿ ವಲಯದ ವ್ಯಾಪ್ತಿಯ ತಾರಕ ಗಸ್ತಿನ ಬಳಿ ಹುಲಿಯೊಂದು ಉರುಳಿಗೆ ಸಿಲುಕಿ ಮರಿಗಳನ್ನು ಅಗಲಿ ಸಾವನ್ನಪ್ಪಿದ ಬಳಿಕ ಅರಣ್ಯ ಇಲಾಖೆ ಉರುಳು ಪತ್ತೇ ಕಾರ್ಯಚರಣೆಯನ್ನು ಚುರುಕುಗೊಳಿಸಿದ್ದು, ಇದೀಗಾ ಕಾಡಂಚಿನ ಗ್ರಾಮಗಳಲ್ಲಿ ಉರುಳು ಕುರಿತು ಜಾಗೃತಿ ಮೂಡಿಸುವ ಜಾಥವನ್ನು ನಡೆಸಿ ಉರುಳು ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ.
ತಾಲ್ಲೂಕಿನ ನಾಗರಹೊಳೆ ಅರಣ್ಯ ವ್ಯಾಪ್ತಿಯ ಅಂತರಸಂತೆ ವಲಯದ ತಾರಕ ಬಳಿ ಹುಲಿಯೊಂದು ಉರುಳಿಗೆ ಸಿಲುಕಿ ಸಾವನ್ನಪ್ಪಿ ಅದರ ಮರಿಗಳು ಅನಾಥವಾಗಿದ್ದವು. ಈ ವೇಳೆ ಅರಣ್ಯ ಇಲಾಖೆಯು ತನ್ನ ಸಿಬ್ಬಂದಿಗಳಿಗೆ ಕಾಡಂಚಿನ ೩ ಕಿಮೀ ವ್ಯಾಪ್ತಿ ಜೊತೆಗೆ ನೀರು ಹರಿಯುವ ಸ್ಥಳದಲ್ಲಿ ಉರುಳು ಪತ್ತೇ ಕಾರ್ಯಚರಣೆ ನಡೆಸುವಂತೆ ಸೂಚಿಸಿತ್ತು. ಜೊತೆಗೆ ಇದೀಗಾ ಅರಣ್ಯ ಇಲಾಖೆಯೂ ಸ್ವಯಂ ಸೇವಕರನ್ನೊಳಗೊಂಡಂತೆ ಕಾಡಂಚಿನ ಗ್ರಾಮಗಳಾದ ದಮ್ಮನಕಟ್ಟೆ, ಹುಣಸೇಕುಪ್ಪೆ, ಸತ್ತಿಗೆಹುಂಡಿ, ತಾರಕ ಹಾಗೂ ಕೊತ್ತನಹಳ್ಳಿ ಗ್ರಾಮಗಳಲ್ಲಿ ‘ವನ್ಯಜೀವಿಗಳಿಗೂ ಬದುಕುವ ಹಕ್ಕಿದೆ ಅವುಗಳನ್ನು ಕೊಲ್ಲುವುದಕ್ಕೆ ಸಹಕರಿಸಬೇಡಿ’ ಎಂಬ ಶೀರ್ಷಿಕೆಯ ಚಿತ್ರಗಳನ್ನು ಹಿಡಿದು ಉರುಳು ಬಗ್ಗೆ ಜಾಗೃತಿ ಜಾಥ ನಡೆಸಿದರು. ಹಾಗೂ ಧ್ವನಿವರ್ಧಕಗಳ ಮೂಲಕ ಉರುಳು ಹಾಕುವುದು ಅಪರಾಧವಾಗಿರುತ್ತದೆ. ಆದ್ದರಿಂದ ಉರುಳು ಹಾಕುವವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಅಥವ ಉರುಳು ಕಂಡುಬಂದಲ್ಲಿ ಕೂಡಲೇ ಅರಣ್ಯ ಇಲಾಖೆಯ ಸಹಾಯವಾಣಿ ೧೯೨೬ ಅಥವ ೯೪೮೨೦೧೧೫೪೩ ಗೆ ಕರೆ ಮಾಡುವಂತೆ ಸೂಚಿಸಲಾಯಿತು.
ಸ್ಥಳದಲ್ಲಿ ವಲಯ ಅರಣ್ಯಾಧಿಕಾರಿಗಳಾದ ಎಸ್.ಎಸ್.ಸಿದ್ದರಾಜು, ಹರ್ಷಿತ್, ಪಿಎಸ್ಐ ಜಯಪ್ರಕಾಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಬ್ರಮಣ್ಯ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿಗಳು, ಗ್ರಾಮಸ್ಥರು, ಸ್ವಯಂ ಸೇವಕರು ಹಾಜರಿದ್ದರು.
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್ನಲ್ಲಿ ಮೂಡಿಬಂದಿರುವ…