ಜಿಲ್ಲೆಗಳು

ನಾಗರಹೊಳೆಯಲ್ಲಿ ಉರುಳು ಪತ್ತೆ ಕಾರ್ಯಾಚರಣೆ ಚುರುಕು

ಕಾಡಂಚಿನ ಗ್ರಾಮಗಳಲ್ಲಿ ಉರುಳು ಕುರಿತು ಜಾಗೃತಿ ಮೂಡಿಸಲು ಅರಣ್ಯ ಇಲಾಖೆ ಜಾಥಾ

ಅಂತರಸಂತೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಂತರಸಂತೆ ವನ್ಯಜೀವಿ ವಲಯದ ವ್ಯಾಪ್ತಿಯ ತಾರಕ ಗಸ್ತಿನ ಬಳಿ ಹುಲಿಯೊಂದು ಉರುಳಿಗೆ ಸಿಲುಕಿ ಮರಿಗಳನ್ನು ಅಗಲಿ ಸಾವನ್ನಪ್ಪಿದ ಬಳಿಕ ಅರಣ್ಯ ಇಲಾಖೆ ಉರುಳು ಪತ್ತೇ ಕಾರ್ಯಚರಣೆಯನ್ನು ಚುರುಕುಗೊಳಿಸಿದ್ದು, ಇದೀಗಾ ಕಾಡಂಚಿನ ಗ್ರಾಮಗಳಲ್ಲಿ ಉರುಳು ಕುರಿತು ಜಾಗೃತಿ ಮೂಡಿಸುವ ಜಾಥವನ್ನು ನಡೆಸಿ ಉರುಳು ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ.


ತಾಲ್ಲೂಕಿನ ನಾಗರಹೊಳೆ ಅರಣ್ಯ ವ್ಯಾಪ್ತಿಯ ಅಂತರಸಂತೆ ವಲಯದ ತಾರಕ ಬಳಿ ಹುಲಿಯೊಂದು ಉರುಳಿಗೆ ಸಿಲುಕಿ ಸಾವನ್ನಪ್ಪಿ ಅದರ ಮರಿಗಳು ಅನಾಥವಾಗಿದ್ದವು. ಈ ವೇಳೆ ಅರಣ್ಯ ಇಲಾಖೆಯು ತನ್ನ ಸಿಬ್ಬಂದಿಗಳಿಗೆ ಕಾಡಂಚಿನ ೩ ಕಿಮೀ ವ್ಯಾಪ್ತಿ ಜೊತೆಗೆ ನೀರು ಹರಿಯುವ ಸ್ಥಳದಲ್ಲಿ ಉರುಳು ಪತ್ತೇ ಕಾರ್ಯಚರಣೆ ನಡೆಸುವಂತೆ ಸೂಚಿಸಿತ್ತು. ಜೊತೆಗೆ ಇದೀಗಾ ಅರಣ್ಯ ಇಲಾಖೆಯೂ ಸ್ವಯಂ ಸೇವಕರನ್ನೊಳಗೊಂಡಂತೆ ಕಾಡಂಚಿನ ಗ್ರಾಮಗಳಾದ ದಮ್ಮನಕಟ್ಟೆ, ಹುಣಸೇಕುಪ್ಪೆ, ಸತ್ತಿಗೆಹುಂಡಿ, ತಾರಕ ಹಾಗೂ ಕೊತ್ತನಹಳ್ಳಿ ಗ್ರಾಮಗಳಲ್ಲಿ ‘ವನ್ಯಜೀವಿಗಳಿಗೂ ಬದುಕುವ ಹಕ್ಕಿದೆ ಅವುಗಳನ್ನು ಕೊಲ್ಲುವುದಕ್ಕೆ ಸಹಕರಿಸಬೇಡಿ’ ಎಂಬ ಶೀರ್ಷಿಕೆಯ ಚಿತ್ರಗಳನ್ನು ಹಿಡಿದು ಉರುಳು ಬಗ್ಗೆ ಜಾಗೃತಿ ಜಾಥ ನಡೆಸಿದರು. ಹಾಗೂ ಧ್ವನಿವರ್ಧಕಗಳ ಮೂಲಕ ಉರುಳು ಹಾಕುವುದು ಅಪರಾಧವಾಗಿರುತ್ತದೆ. ಆದ್ದರಿಂದ ಉರುಳು ಹಾಕುವವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಅಥವ ಉರುಳು ಕಂಡುಬಂದಲ್ಲಿ ಕೂಡಲೇ ಅರಣ್ಯ ಇಲಾಖೆಯ ಸಹಾಯವಾಣಿ ೧೯೨೬ ಅಥವ ೯೪೮೨೦೧೧೫೪೩ ಗೆ ಕರೆ ಮಾಡುವಂತೆ ಸೂಚಿಸಲಾಯಿತು.
ಸ್ಥಳದಲ್ಲಿ ವಲಯ ಅರಣ್ಯಾಧಿಕಾರಿಗಳಾದ ಎಸ್.ಎಸ್.ಸಿದ್ದರಾಜು, ಹರ್ಷಿತ್, ಪಿಎಸ್‌ಐ ಜಯಪ್ರಕಾಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಬ್ರಮಣ್ಯ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿಗಳು, ಗ್ರಾಮಸ್ಥರು, ಸ್ವಯಂ ಸೇವಕರು ಹಾಜರಿದ್ದರು.

andolanait

Recent Posts

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಒಪ್ಪಂದ : ಎಚ್‌ಡಿಕೆ ನೇತೃತ್ವದಲ್ಲಿ ದ್ವಿಪಕ್ಷೀಯ ಚರ್ಚೆ

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…

46 mins ago

ಮುಡಾ ಕೇಸ್‌ನಲ್ಲಿ ಸಿಎಂʼಗೆ ನಿರಾಳ : ʻಸತ್ಯ ಮೇವ ಜಯತೆʻ ಫ್ಲೇ ಕಾರ್ಡ್‌ ಹಿಡಿದು ಕಾಂಗ್ರೆಸ್‌ ಸಂಭ್ರಮ

ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…

58 mins ago

ಕೆ.ಜೆ.ಜಾರ್ಜ್‌ ರಾಜೀನಾಮೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆ ನೀಡಿದ್ದರು ಎಂಬ…

3 hours ago

ವಿಕಲಚೇತನರಿಗಾಗಿಯೇ ಬೃಹತ್‌ ಉದ್ಯೋಗ ಮೇಳ ಆಯೋಜನೆ: ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…

3 hours ago

ಕೊಡಗಿನಲ್ಲಿ ಮುಂದುವರೆದ ಆನೆ–ಮಾನವ ಸಂಘರ್ಷ: ಕಾಡಾನೆ ದಾಳಿಗೆ ವ್ಯಕ್ತಿ ದಾರುಣ ಸಾವು

ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…

3 hours ago

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ಸಾವು ಪ್ರಕರಣ: ದುರಂತದ ಸಂಪೂರ್ಣ ತನಿಖೆಯಾಗಲಿದೆ ಎಂದ ಯದುವೀರ್‌ ಒಡೆಯರ್‌

ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…

4 hours ago