ಕಾಡಂಚಿನ ಗ್ರಾಮಗಳಲ್ಲಿ ಉರುಳು ಕುರಿತು ಜಾಗೃತಿ ಮೂಡಿಸಲು ಅರಣ್ಯ ಇಲಾಖೆ ಜಾಥಾ
ಅಂತರಸಂತೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಂತರಸಂತೆ ವನ್ಯಜೀವಿ ವಲಯದ ವ್ಯಾಪ್ತಿಯ ತಾರಕ ಗಸ್ತಿನ ಬಳಿ ಹುಲಿಯೊಂದು ಉರುಳಿಗೆ ಸಿಲುಕಿ ಮರಿಗಳನ್ನು ಅಗಲಿ ಸಾವನ್ನಪ್ಪಿದ ಬಳಿಕ ಅರಣ್ಯ ಇಲಾಖೆ ಉರುಳು ಪತ್ತೇ ಕಾರ್ಯಚರಣೆಯನ್ನು ಚುರುಕುಗೊಳಿಸಿದ್ದು, ಇದೀಗಾ ಕಾಡಂಚಿನ ಗ್ರಾಮಗಳಲ್ಲಿ ಉರುಳು ಕುರಿತು ಜಾಗೃತಿ ಮೂಡಿಸುವ ಜಾಥವನ್ನು ನಡೆಸಿ ಉರುಳು ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ.
ತಾಲ್ಲೂಕಿನ ನಾಗರಹೊಳೆ ಅರಣ್ಯ ವ್ಯಾಪ್ತಿಯ ಅಂತರಸಂತೆ ವಲಯದ ತಾರಕ ಬಳಿ ಹುಲಿಯೊಂದು ಉರುಳಿಗೆ ಸಿಲುಕಿ ಸಾವನ್ನಪ್ಪಿ ಅದರ ಮರಿಗಳು ಅನಾಥವಾಗಿದ್ದವು. ಈ ವೇಳೆ ಅರಣ್ಯ ಇಲಾಖೆಯು ತನ್ನ ಸಿಬ್ಬಂದಿಗಳಿಗೆ ಕಾಡಂಚಿನ ೩ ಕಿಮೀ ವ್ಯಾಪ್ತಿ ಜೊತೆಗೆ ನೀರು ಹರಿಯುವ ಸ್ಥಳದಲ್ಲಿ ಉರುಳು ಪತ್ತೇ ಕಾರ್ಯಚರಣೆ ನಡೆಸುವಂತೆ ಸೂಚಿಸಿತ್ತು. ಜೊತೆಗೆ ಇದೀಗಾ ಅರಣ್ಯ ಇಲಾಖೆಯೂ ಸ್ವಯಂ ಸೇವಕರನ್ನೊಳಗೊಂಡಂತೆ ಕಾಡಂಚಿನ ಗ್ರಾಮಗಳಾದ ದಮ್ಮನಕಟ್ಟೆ, ಹುಣಸೇಕುಪ್ಪೆ, ಸತ್ತಿಗೆಹುಂಡಿ, ತಾರಕ ಹಾಗೂ ಕೊತ್ತನಹಳ್ಳಿ ಗ್ರಾಮಗಳಲ್ಲಿ ‘ವನ್ಯಜೀವಿಗಳಿಗೂ ಬದುಕುವ ಹಕ್ಕಿದೆ ಅವುಗಳನ್ನು ಕೊಲ್ಲುವುದಕ್ಕೆ ಸಹಕರಿಸಬೇಡಿ’ ಎಂಬ ಶೀರ್ಷಿಕೆಯ ಚಿತ್ರಗಳನ್ನು ಹಿಡಿದು ಉರುಳು ಬಗ್ಗೆ ಜಾಗೃತಿ ಜಾಥ ನಡೆಸಿದರು. ಹಾಗೂ ಧ್ವನಿವರ್ಧಕಗಳ ಮೂಲಕ ಉರುಳು ಹಾಕುವುದು ಅಪರಾಧವಾಗಿರುತ್ತದೆ. ಆದ್ದರಿಂದ ಉರುಳು ಹಾಕುವವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಅಥವ ಉರುಳು ಕಂಡುಬಂದಲ್ಲಿ ಕೂಡಲೇ ಅರಣ್ಯ ಇಲಾಖೆಯ ಸಹಾಯವಾಣಿ ೧೯೨೬ ಅಥವ ೯೪೮೨೦೧೧೫೪೩ ಗೆ ಕರೆ ಮಾಡುವಂತೆ ಸೂಚಿಸಲಾಯಿತು.
ಸ್ಥಳದಲ್ಲಿ ವಲಯ ಅರಣ್ಯಾಧಿಕಾರಿಗಳಾದ ಎಸ್.ಎಸ್.ಸಿದ್ದರಾಜು, ಹರ್ಷಿತ್, ಪಿಎಸ್ಐ ಜಯಪ್ರಕಾಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಬ್ರಮಣ್ಯ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿಗಳು, ಗ್ರಾಮಸ್ಥರು, ಸ್ವಯಂ ಸೇವಕರು ಹಾಜರಿದ್ದರು.
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ. ಜಿಬಿಎ ಚುನಾವಣೆಗೆ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.20ರಿಂದ 26ರವರೆಗೆ ರಾಜ್ಯದ…