ಜಿಲ್ಲೆಗಳು

ನಾಗರಹೊಳೆಯಲ್ಲಿ ಉರುಳು ಪತ್ತೆ ಕಾರ್ಯಾಚರಣೆ ಚುರುಕು

ಕಾಡಂಚಿನ ಗ್ರಾಮಗಳಲ್ಲಿ ಉರುಳು ಕುರಿತು ಜಾಗೃತಿ ಮೂಡಿಸಲು ಅರಣ್ಯ ಇಲಾಖೆ ಜಾಥಾ

ಅಂತರಸಂತೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಂತರಸಂತೆ ವನ್ಯಜೀವಿ ವಲಯದ ವ್ಯಾಪ್ತಿಯ ತಾರಕ ಗಸ್ತಿನ ಬಳಿ ಹುಲಿಯೊಂದು ಉರುಳಿಗೆ ಸಿಲುಕಿ ಮರಿಗಳನ್ನು ಅಗಲಿ ಸಾವನ್ನಪ್ಪಿದ ಬಳಿಕ ಅರಣ್ಯ ಇಲಾಖೆ ಉರುಳು ಪತ್ತೇ ಕಾರ್ಯಚರಣೆಯನ್ನು ಚುರುಕುಗೊಳಿಸಿದ್ದು, ಇದೀಗಾ ಕಾಡಂಚಿನ ಗ್ರಾಮಗಳಲ್ಲಿ ಉರುಳು ಕುರಿತು ಜಾಗೃತಿ ಮೂಡಿಸುವ ಜಾಥವನ್ನು ನಡೆಸಿ ಉರುಳು ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ.


ತಾಲ್ಲೂಕಿನ ನಾಗರಹೊಳೆ ಅರಣ್ಯ ವ್ಯಾಪ್ತಿಯ ಅಂತರಸಂತೆ ವಲಯದ ತಾರಕ ಬಳಿ ಹುಲಿಯೊಂದು ಉರುಳಿಗೆ ಸಿಲುಕಿ ಸಾವನ್ನಪ್ಪಿ ಅದರ ಮರಿಗಳು ಅನಾಥವಾಗಿದ್ದವು. ಈ ವೇಳೆ ಅರಣ್ಯ ಇಲಾಖೆಯು ತನ್ನ ಸಿಬ್ಬಂದಿಗಳಿಗೆ ಕಾಡಂಚಿನ ೩ ಕಿಮೀ ವ್ಯಾಪ್ತಿ ಜೊತೆಗೆ ನೀರು ಹರಿಯುವ ಸ್ಥಳದಲ್ಲಿ ಉರುಳು ಪತ್ತೇ ಕಾರ್ಯಚರಣೆ ನಡೆಸುವಂತೆ ಸೂಚಿಸಿತ್ತು. ಜೊತೆಗೆ ಇದೀಗಾ ಅರಣ್ಯ ಇಲಾಖೆಯೂ ಸ್ವಯಂ ಸೇವಕರನ್ನೊಳಗೊಂಡಂತೆ ಕಾಡಂಚಿನ ಗ್ರಾಮಗಳಾದ ದಮ್ಮನಕಟ್ಟೆ, ಹುಣಸೇಕುಪ್ಪೆ, ಸತ್ತಿಗೆಹುಂಡಿ, ತಾರಕ ಹಾಗೂ ಕೊತ್ತನಹಳ್ಳಿ ಗ್ರಾಮಗಳಲ್ಲಿ ‘ವನ್ಯಜೀವಿಗಳಿಗೂ ಬದುಕುವ ಹಕ್ಕಿದೆ ಅವುಗಳನ್ನು ಕೊಲ್ಲುವುದಕ್ಕೆ ಸಹಕರಿಸಬೇಡಿ’ ಎಂಬ ಶೀರ್ಷಿಕೆಯ ಚಿತ್ರಗಳನ್ನು ಹಿಡಿದು ಉರುಳು ಬಗ್ಗೆ ಜಾಗೃತಿ ಜಾಥ ನಡೆಸಿದರು. ಹಾಗೂ ಧ್ವನಿವರ್ಧಕಗಳ ಮೂಲಕ ಉರುಳು ಹಾಕುವುದು ಅಪರಾಧವಾಗಿರುತ್ತದೆ. ಆದ್ದರಿಂದ ಉರುಳು ಹಾಕುವವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಅಥವ ಉರುಳು ಕಂಡುಬಂದಲ್ಲಿ ಕೂಡಲೇ ಅರಣ್ಯ ಇಲಾಖೆಯ ಸಹಾಯವಾಣಿ ೧೯೨೬ ಅಥವ ೯೪೮೨೦೧೧೫೪೩ ಗೆ ಕರೆ ಮಾಡುವಂತೆ ಸೂಚಿಸಲಾಯಿತು.
ಸ್ಥಳದಲ್ಲಿ ವಲಯ ಅರಣ್ಯಾಧಿಕಾರಿಗಳಾದ ಎಸ್.ಎಸ್.ಸಿದ್ದರಾಜು, ಹರ್ಷಿತ್, ಪಿಎಸ್‌ಐ ಜಯಪ್ರಕಾಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಬ್ರಮಣ್ಯ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿಗಳು, ಗ್ರಾಮಸ್ಥರು, ಸ್ವಯಂ ಸೇವಕರು ಹಾಜರಿದ್ದರು.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

7 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

11 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

12 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

13 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

13 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

13 hours ago