ಜಿಲ್ಲೆಗಳು

ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

ಮೈಸೂರು: ನಾನಾ ಕ್ಷೇತ್ರದಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ ಗಣ್ಯರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅರಮನೆ ವೇದಿಕೆಯಲ್ಲಿ ನಡೆದ ಸಮಾರಂಭದಲ್ಲಿ ಗಣ್ಯರನ್ನು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಮಾರಂಭದಲ್ಲಿ ಮಾತನಾಡಿದ ಸಚಿವ ಸೋಮಶೇಖರ್ ಅವರು, ಕಳೆದ ವರ್ಷದಂತೆ ಈ ವರ್ಷ ಕೂಡ ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹನೀಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಯ್ಕೆ ಸಮಿತಿ ಹತ್ತು ಸಾಧಕರನ್ನು ಆಯ್ಕೆ ಮಾಡಿದ್ದು ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು ಎಂದು ಹೇಳಿದರು.

ಉನ್ನತ ಶಿಕ್ಷಣ ಸಚಿವರಾದ ಅಶ್ವತ್ಥ ನಾರಾಯಣ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆಗಳನ್ನು ನೆನೆಯುವುದರ ಜೊತೆಗೆ ಅವರನ್ನು ಸ್ಪೂರ್ತಿಯಾಗಿ ತೆಗೆದುಕೊಳ್ಳಬೇಕು ಎಂದರು.

ವರ್ಣಚಿತ್ರಕಾರರಾದ ಎಲ್.ಶಿವಲಿಂಗಪ್ಪ, ರೋಗಿಗಳ ಶುಶ್ರೂಷೆ, ಮಮತೆಯ ಮಡಿಲು ಮೂಲಕ ಸೇವೆ ಸಲ್ಲಿಸುತ್ತಿರುವ ಕೆ.‍ಪಿ.ಅರುಣಾಕುಮಾರಿ, ಸಮಾಜಸೇವೆಯಲ್ಲಿ ತೊಡಗಿಕೊಂಡಿರುವ ಜಿ.ಮಹಾಂತಪ್ಪ, ಜನಪದ ಗಾಯಕರಾದ ಸಿ.ಎಂ.ನರಸಿಂಹಮೂರ್ತಿ, ಹಿರಿಯ ಪತ್ರಕರ್ತ ಬಿ.ಎಸ್.ಹರೀಶ್, ವಿಶೇಷ ಮಕ್ಕಳ ಸೇವೆ ಮಾಡುತ್ತಿರುವ ರತ್ನಾ ಬಿ.ಶೆಟ್ಟಿ, ಸಮಾಜಸೇವೆಯಲ್ಲಿ ತೊಡಗಿರುವ ಡಿ.ಮಾದೇಗೌಡ, ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀಧರರಾಜೇ ಅರಸು ಹಾಗೂ ಮೈಸೂರಿನ ‘ಶಕ್ತಿಧಾಮ’ ಸಂಸ್ಥೆಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಅನಿವಾರ್ಯ ಕಾರಣಗಳಿಂದ ಸಮಾರಂಭಕ್ಕೆ ಗೈರಾದ ಸಾಹಿತಿ ಮಲೆಯೂರು ಗುರುಸ್ವಾಮಿ ಅವರ ನಿವಾಸಕ್ಕೆ ತೆರಳಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ ಅವರ ಅಪೇಕ್ಷೆ ಮೇರೆಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ವಿವಿಧ ಕ್ಷೇತ್ರದಲ್ಲಿ ಸಾಧನೆ ತೋರಿದವರನ್ನು ಸಮಿತಿ ಆಯ್ಕೆ ಮಾಡಿತ್ತು. ಜಾನಪದ ತಜ್ಞ ಹಿ.ಶಿ.ರಾಮಚಂದ್ರೇಗೌಡ, ನಾಗಣ್ಣ ಮೈಸೂರು ವಿ.ವಿ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್ ಮೊದಲಾದವರು ಸಮಿತಿಯಲ್ಲಿದ್ದರು.

ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೇ ಶ್ರೀನಿವಾಸ್ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಮೂಡಾ ಮಾಜಿ ಅಧ್ಯಕ್ಷರಾದ ರಾಜೀವ್, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

andolanait

Recent Posts

ರಾಜ್ಯಪಾಲರಿಗೆ ದಿಲ್ಲಿಯಿಂದ ಫೋನ್‌? : ಫೋನ್‌ ಟ್ಯಾಪಿಂಗ್‌ ಬಗ್ಗೆ ವಿಧಾನಸಭೆಯಲ್ಲಿ ಗದ್ದಲ

ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…

23 mins ago

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

2 hours ago

ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…

2 hours ago

ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದಿಂದ ಸನ್ಮಾನ

ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…

2 hours ago

ಅಜಿತ್‌ ಪವಾರ್‌ ಸಾವು: ತನಿಖೆಗೆ ಆಗ್ರಹಿಸಿದ ಮಮತಾ ಬ್ಯಾನರ್ಜಿ

ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ…

2 hours ago

ಹಿರಿಯ ಸಹೋದರನನ್ನು ಕಳೆದುಕೊಂಡಂತಾಗಿದೆ: ಡಿಸಿಎಂ ಏಕನಾಥ್‌ ಶಿಂಧೆ

ಮಹಾರಾಷ್ಟ್ರ: ಡಿಸಿಎಂ ಅಜಿತ್‌ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು…

3 hours ago