ಜಿಲ್ಲೆಗಳು

ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

ಮೈಸೂರು: ನಾನಾ ಕ್ಷೇತ್ರದಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ ಗಣ್ಯರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅರಮನೆ ವೇದಿಕೆಯಲ್ಲಿ ನಡೆದ ಸಮಾರಂಭದಲ್ಲಿ ಗಣ್ಯರನ್ನು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಮಾರಂಭದಲ್ಲಿ ಮಾತನಾಡಿದ ಸಚಿವ ಸೋಮಶೇಖರ್ ಅವರು, ಕಳೆದ ವರ್ಷದಂತೆ ಈ ವರ್ಷ ಕೂಡ ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹನೀಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಯ್ಕೆ ಸಮಿತಿ ಹತ್ತು ಸಾಧಕರನ್ನು ಆಯ್ಕೆ ಮಾಡಿದ್ದು ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು ಎಂದು ಹೇಳಿದರು.

ಉನ್ನತ ಶಿಕ್ಷಣ ಸಚಿವರಾದ ಅಶ್ವತ್ಥ ನಾರಾಯಣ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆಗಳನ್ನು ನೆನೆಯುವುದರ ಜೊತೆಗೆ ಅವರನ್ನು ಸ್ಪೂರ್ತಿಯಾಗಿ ತೆಗೆದುಕೊಳ್ಳಬೇಕು ಎಂದರು.

ವರ್ಣಚಿತ್ರಕಾರರಾದ ಎಲ್.ಶಿವಲಿಂಗಪ್ಪ, ರೋಗಿಗಳ ಶುಶ್ರೂಷೆ, ಮಮತೆಯ ಮಡಿಲು ಮೂಲಕ ಸೇವೆ ಸಲ್ಲಿಸುತ್ತಿರುವ ಕೆ.‍ಪಿ.ಅರುಣಾಕುಮಾರಿ, ಸಮಾಜಸೇವೆಯಲ್ಲಿ ತೊಡಗಿಕೊಂಡಿರುವ ಜಿ.ಮಹಾಂತಪ್ಪ, ಜನಪದ ಗಾಯಕರಾದ ಸಿ.ಎಂ.ನರಸಿಂಹಮೂರ್ತಿ, ಹಿರಿಯ ಪತ್ರಕರ್ತ ಬಿ.ಎಸ್.ಹರೀಶ್, ವಿಶೇಷ ಮಕ್ಕಳ ಸೇವೆ ಮಾಡುತ್ತಿರುವ ರತ್ನಾ ಬಿ.ಶೆಟ್ಟಿ, ಸಮಾಜಸೇವೆಯಲ್ಲಿ ತೊಡಗಿರುವ ಡಿ.ಮಾದೇಗೌಡ, ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀಧರರಾಜೇ ಅರಸು ಹಾಗೂ ಮೈಸೂರಿನ ‘ಶಕ್ತಿಧಾಮ’ ಸಂಸ್ಥೆಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಅನಿವಾರ್ಯ ಕಾರಣಗಳಿಂದ ಸಮಾರಂಭಕ್ಕೆ ಗೈರಾದ ಸಾಹಿತಿ ಮಲೆಯೂರು ಗುರುಸ್ವಾಮಿ ಅವರ ನಿವಾಸಕ್ಕೆ ತೆರಳಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ ಅವರ ಅಪೇಕ್ಷೆ ಮೇರೆಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ವಿವಿಧ ಕ್ಷೇತ್ರದಲ್ಲಿ ಸಾಧನೆ ತೋರಿದವರನ್ನು ಸಮಿತಿ ಆಯ್ಕೆ ಮಾಡಿತ್ತು. ಜಾನಪದ ತಜ್ಞ ಹಿ.ಶಿ.ರಾಮಚಂದ್ರೇಗೌಡ, ನಾಗಣ್ಣ ಮೈಸೂರು ವಿ.ವಿ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್ ಮೊದಲಾದವರು ಸಮಿತಿಯಲ್ಲಿದ್ದರು.

ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೇ ಶ್ರೀನಿವಾಸ್ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಮೂಡಾ ಮಾಜಿ ಅಧ್ಯಕ್ಷರಾದ ರಾಜೀವ್, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago