ಜಿಲ್ಲೆಗಳು

ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

ಮೈಸೂರು: ನಾನಾ ಕ್ಷೇತ್ರದಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ ಗಣ್ಯರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅರಮನೆ ವೇದಿಕೆಯಲ್ಲಿ ನಡೆದ ಸಮಾರಂಭದಲ್ಲಿ ಗಣ್ಯರನ್ನು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಮಾರಂಭದಲ್ಲಿ ಮಾತನಾಡಿದ ಸಚಿವ ಸೋಮಶೇಖರ್ ಅವರು, ಕಳೆದ ವರ್ಷದಂತೆ ಈ ವರ್ಷ ಕೂಡ ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹನೀಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಯ್ಕೆ ಸಮಿತಿ ಹತ್ತು ಸಾಧಕರನ್ನು ಆಯ್ಕೆ ಮಾಡಿದ್ದು ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು ಎಂದು ಹೇಳಿದರು.

ಉನ್ನತ ಶಿಕ್ಷಣ ಸಚಿವರಾದ ಅಶ್ವತ್ಥ ನಾರಾಯಣ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆಗಳನ್ನು ನೆನೆಯುವುದರ ಜೊತೆಗೆ ಅವರನ್ನು ಸ್ಪೂರ್ತಿಯಾಗಿ ತೆಗೆದುಕೊಳ್ಳಬೇಕು ಎಂದರು.

ವರ್ಣಚಿತ್ರಕಾರರಾದ ಎಲ್.ಶಿವಲಿಂಗಪ್ಪ, ರೋಗಿಗಳ ಶುಶ್ರೂಷೆ, ಮಮತೆಯ ಮಡಿಲು ಮೂಲಕ ಸೇವೆ ಸಲ್ಲಿಸುತ್ತಿರುವ ಕೆ.‍ಪಿ.ಅರುಣಾಕುಮಾರಿ, ಸಮಾಜಸೇವೆಯಲ್ಲಿ ತೊಡಗಿಕೊಂಡಿರುವ ಜಿ.ಮಹಾಂತಪ್ಪ, ಜನಪದ ಗಾಯಕರಾದ ಸಿ.ಎಂ.ನರಸಿಂಹಮೂರ್ತಿ, ಹಿರಿಯ ಪತ್ರಕರ್ತ ಬಿ.ಎಸ್.ಹರೀಶ್, ವಿಶೇಷ ಮಕ್ಕಳ ಸೇವೆ ಮಾಡುತ್ತಿರುವ ರತ್ನಾ ಬಿ.ಶೆಟ್ಟಿ, ಸಮಾಜಸೇವೆಯಲ್ಲಿ ತೊಡಗಿರುವ ಡಿ.ಮಾದೇಗೌಡ, ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀಧರರಾಜೇ ಅರಸು ಹಾಗೂ ಮೈಸೂರಿನ ‘ಶಕ್ತಿಧಾಮ’ ಸಂಸ್ಥೆಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಅನಿವಾರ್ಯ ಕಾರಣಗಳಿಂದ ಸಮಾರಂಭಕ್ಕೆ ಗೈರಾದ ಸಾಹಿತಿ ಮಲೆಯೂರು ಗುರುಸ್ವಾಮಿ ಅವರ ನಿವಾಸಕ್ಕೆ ತೆರಳಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ ಅವರ ಅಪೇಕ್ಷೆ ಮೇರೆಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ವಿವಿಧ ಕ್ಷೇತ್ರದಲ್ಲಿ ಸಾಧನೆ ತೋರಿದವರನ್ನು ಸಮಿತಿ ಆಯ್ಕೆ ಮಾಡಿತ್ತು. ಜಾನಪದ ತಜ್ಞ ಹಿ.ಶಿ.ರಾಮಚಂದ್ರೇಗೌಡ, ನಾಗಣ್ಣ ಮೈಸೂರು ವಿ.ವಿ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್ ಮೊದಲಾದವರು ಸಮಿತಿಯಲ್ಲಿದ್ದರು.

ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೇ ಶ್ರೀನಿವಾಸ್ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಮೂಡಾ ಮಾಜಿ ಅಧ್ಯಕ್ಷರಾದ ರಾಜೀವ್, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

andolanait

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

53 mins ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

3 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

4 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

4 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

7 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

8 hours ago