ಜಿಲ್ಲೆಗಳು

ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

ಮೈಸೂರು: ನಾನಾ ಕ್ಷೇತ್ರದಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ ಗಣ್ಯರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅರಮನೆ ವೇದಿಕೆಯಲ್ಲಿ ನಡೆದ ಸಮಾರಂಭದಲ್ಲಿ ಗಣ್ಯರನ್ನು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಮಾರಂಭದಲ್ಲಿ ಮಾತನಾಡಿದ ಸಚಿವ ಸೋಮಶೇಖರ್ ಅವರು, ಕಳೆದ ವರ್ಷದಂತೆ ಈ ವರ್ಷ ಕೂಡ ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹನೀಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಯ್ಕೆ ಸಮಿತಿ ಹತ್ತು ಸಾಧಕರನ್ನು ಆಯ್ಕೆ ಮಾಡಿದ್ದು ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು ಎಂದು ಹೇಳಿದರು.

ಉನ್ನತ ಶಿಕ್ಷಣ ಸಚಿವರಾದ ಅಶ್ವತ್ಥ ನಾರಾಯಣ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆಗಳನ್ನು ನೆನೆಯುವುದರ ಜೊತೆಗೆ ಅವರನ್ನು ಸ್ಪೂರ್ತಿಯಾಗಿ ತೆಗೆದುಕೊಳ್ಳಬೇಕು ಎಂದರು.

ವರ್ಣಚಿತ್ರಕಾರರಾದ ಎಲ್.ಶಿವಲಿಂಗಪ್ಪ, ರೋಗಿಗಳ ಶುಶ್ರೂಷೆ, ಮಮತೆಯ ಮಡಿಲು ಮೂಲಕ ಸೇವೆ ಸಲ್ಲಿಸುತ್ತಿರುವ ಕೆ.‍ಪಿ.ಅರುಣಾಕುಮಾರಿ, ಸಮಾಜಸೇವೆಯಲ್ಲಿ ತೊಡಗಿಕೊಂಡಿರುವ ಜಿ.ಮಹಾಂತಪ್ಪ, ಜನಪದ ಗಾಯಕರಾದ ಸಿ.ಎಂ.ನರಸಿಂಹಮೂರ್ತಿ, ಹಿರಿಯ ಪತ್ರಕರ್ತ ಬಿ.ಎಸ್.ಹರೀಶ್, ವಿಶೇಷ ಮಕ್ಕಳ ಸೇವೆ ಮಾಡುತ್ತಿರುವ ರತ್ನಾ ಬಿ.ಶೆಟ್ಟಿ, ಸಮಾಜಸೇವೆಯಲ್ಲಿ ತೊಡಗಿರುವ ಡಿ.ಮಾದೇಗೌಡ, ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀಧರರಾಜೇ ಅರಸು ಹಾಗೂ ಮೈಸೂರಿನ ‘ಶಕ್ತಿಧಾಮ’ ಸಂಸ್ಥೆಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಅನಿವಾರ್ಯ ಕಾರಣಗಳಿಂದ ಸಮಾರಂಭಕ್ಕೆ ಗೈರಾದ ಸಾಹಿತಿ ಮಲೆಯೂರು ಗುರುಸ್ವಾಮಿ ಅವರ ನಿವಾಸಕ್ಕೆ ತೆರಳಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ ಅವರ ಅಪೇಕ್ಷೆ ಮೇರೆಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ವಿವಿಧ ಕ್ಷೇತ್ರದಲ್ಲಿ ಸಾಧನೆ ತೋರಿದವರನ್ನು ಸಮಿತಿ ಆಯ್ಕೆ ಮಾಡಿತ್ತು. ಜಾನಪದ ತಜ್ಞ ಹಿ.ಶಿ.ರಾಮಚಂದ್ರೇಗೌಡ, ನಾಗಣ್ಣ ಮೈಸೂರು ವಿ.ವಿ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್ ಮೊದಲಾದವರು ಸಮಿತಿಯಲ್ಲಿದ್ದರು.

ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೇ ಶ್ರೀನಿವಾಸ್ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಮೂಡಾ ಮಾಜಿ ಅಧ್ಯಕ್ಷರಾದ ರಾಜೀವ್, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

andolanait

Recent Posts

ತಮಿಳುನಾಡು ಸ್ಪೀಕರ್‌ ಆಗಿ ಶಾಸಕ ಪ್ರಭಾಕರ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್‌ ಆಗಿ ಶಾಸಕ ಜೆಸಿಡಿ ಪ್ರಭಾಕರ್‌ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್‌ ಅವರು ಪ್ರಭಾಕರ್‌…

50 mins ago

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

1 hour ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

2 hours ago

ಓದುಗರ ಪತ್ರ: ಮಾದರಿಯ ನಡೆ!

ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…

3 hours ago

ಓದುಗರ ಪತ್ರ: ಅರಮನೆ ಸುತ್ತಲಿನ ಪಾದಚಾರಿ ಮಾರ್ಗ ದುರಸ್ತಿ ಮಾಡಿ

ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…

3 hours ago

ಓದುಗರ ಪತ್ರ: ಕೆರೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ತುಂಬಿಸಿ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…

3 hours ago