ಜಿಲ್ಲೆಗಳು

ನಗರ ಸಭೆ ಉಪ ಚುನಾವಣೆಯಲ್ಲಿ ಎನ್ ಮಹೇಶ್ ಬೆಂಬಲಿಗರ ಮೇಲುಗೈ

ಕೊಳ್ಳೇಗಾಲ : ನಗರಸಭೆ 7 ವಾರ್ಡ್ ಗಳಿಗೆ ನಡೆದ ಉಪ ಚುನಾವಣೆ ಯಲ್ಲಿ ಎನ್ ಮಹೇಶ್ ಬೆಂಬಲಿಗರು ಜಯ ಗಳಿಸಿದ್ದಾರೆ..

ಉಪಚುನಾವಣೆ ಮಾಸ್ಟರ್ ಮೈಂಡ್ ಎಂದೇ ಪ್ರಸಿದ್ಧಿ ಪಡೆದಿರುವ ಸಚಿವ ವಿ ಸೋಮಣ್ಣ ರವರ ಎಲ್ಲಚುನಾವಣಾ ತಂತ್ರಗಳು ನಗರಸಭೆ ಉಪಚುನಾವಣೆ ಯಶಸ್ಸು ಕಂಡಿದೆ.

ಬಿಎಸ್ಪಿ ಪಕ್ಷದಿಂದ ಚುನಾಯಿತರಾಗಿ ಆಯ್ಕೆಯಾಗಿದ್ದ ಸದಸ್ಯರುಗಳು ನಗರಸಭೆಗೆ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಬಿಎಸ್ ಪಿ ಪಕ್ಷದಿಂದ ಸ್ಪರ್ಧಿಸಿದ್ದ ಜಯಮೇರಿ ಅವರನ್ನು ಬೆಂಬಲಿಸಲಿಲ್ಲ ಎಂದು ಜಿಲ್ಲಾಧಿಕಾರಿಗಳ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆ ಜಿಲ್ಲಾಧಿಕಾರಿಗಳ ಕೋರ್ಟ್ ನಲ್ಲಿ 7 ಬಿಎಸ್ಪಿ ಸದಸ್ಯರನ್ನು ಅನರ್ಹಗೊಳಿಸಲಾಗಿತ್ತು. ಅನರ್ಹ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು ಸಹ ಜಿಲ್ಲಾಧಿಕಾರಿಗಳ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದರಿಂದ ಇವರ ಸದಸ್ಯತ್ವ ವಜಾಗೊಂಡಿತ್ತು. ಸದಸ್ಯತ್ವ ವಜಾಗೊಂಡ ಹಿನ್ನೆಲೆ ನಡೆದ ಕೊಳ್ಳೇಗಾಲ ನಗರಸಭೆ ಉಪಚುನಾವಣೆ 7ಸ್ಥಾನಗಳಿಗೆ ಶಾಸಕ ಎನ್ ಮಹೇಶ್ ಬೆಂಬಲಿತ ಸದಸ್ಯರುಗಳಿಗೆ ಬಿಜೆಪಿ ಟಿಕೆಟ್ ನೀಡಲಾಗಿತ್ತು. ಇವರೆಲ್ಲರನ್ನು ಗೆಲ್ಲಿಸಿಕೊಂಡು ಬರಲು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ನವರ ಮಾರ್ಗದರ್ಶನದಲ್ಲಿ ಶಾಸಕ ಎನ್ ಮಹೇಶ್ ಹಾಗೂ ಮಾಜಿ ಶಾಸಕ ನಂಜುಂಡಸ್ವಾಮಿ ಒಗ್ಗಟ್ಟು ಪ್ರದರ್ಶಿಸಿ ಸಂಘಟನೆಗೆ ಒತ್ತು ನೀಡಿದ್ದರಿಂದ ಉಪಚುನಾವಣೆ ಯಲ್ಲಿ 6 ಬಿಜೆಪಿ ಸದಸ್ಯರು ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಗೆ ಮುಖಭಂಗ : ನಗರಸಭೆ 7ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನ ಒಬ್ಬ ಅಭ್ಯರ್ಥಿ ಜಯ ಗಳಿಸಿ ಉಳಿದ 6 ಅಭ್ಯರ್ಥಿಗಳು ಪರಾಭವಗೊಂಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಸೇರಿದಂತೆ ಮೂವರು ಮಾಜಿ ಶಾಸಕರುಗಳಿಗೆ ಈ ಉಪಚುನಾವಣೆಯಲ್ಲಿ ಮುಖಭಂಗವಾಗಿದೆ.

ಬಣ ರಾಜಕೀಯ ಶಮನ : ಬಣ ರಾಜಕಾರಣದಿಂದಾಗಿ ಹಲವು ಗುಂಪುಗಳಾಗಿದ್ದ ಎಲ್ಲಾ ಬಣಗಳನ್ನು ಮಧುವನಹಳ್ಳಿ ರೆಸಾರ್ಟ ನಲ್ಲಿ ಒಂದುಗೂಡಿಸಿ ಒಗ್ಗಟ್ಟಿನ ಮಂತ್ರ ಜಪಿಸುವಂತೆ ಸೂಚನೆ ನೀಡಿದ್ದು ಬಿಜೆಪಿ ಗೆಲುವಿಗೆ ವರದಾನವಾಗಿದೆ .

andolanait

Recent Posts

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು : ಸಂಸದ ಯದುವೀರ್‌

ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು.…

52 mins ago

ಬಾಲವಿಕಾಸ ಅಕಾಡೆಮಿಯ ಬಾಲಗೌರವ ಪ್ರಶಸ್ತಿ : ಮೈಸೂರಿನ ತಬಲಾ ಬಾಲ ಪ್ರತಿಭೆ ಪಂಚಮಿ ಬಿದನೂರು ಸೇರಿದಂತೆ ಅನೇಕರಿಗೆ ಪ್ರಶಸ್ತಿ

ಬೆಳಗಾವಿ : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದ ಉತ್ತರ ಪ್ರವೇಶ ದ್ವಾರದ ಬಳಿ ಇರುವ…

54 mins ago

ಅಕ್ರಮ ಗಾಂಜಾ ಮಾರಾಟ : ಮಹಿಳೆ ಪೊಲೀಸ್ ವಶಕ್ಕೆ

ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…

2 hours ago

ಮತಗಳ್ಳತನದ ಹೋರಾಟದಲ್ಲಿ ರಾಜಕೀಯ ಉದ್ದೇಶವಿಲ್ಲ : ಡಿ.ಕೆ.ಶಿವಕುಮಾರ್

ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…

3 hours ago

10 ವರ್ಷದ ಪ್ರೀತಿಗೆ ಮೋಸ,ಹಣವೂ ದೋಖಾ : ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ

ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…

5 hours ago

ವರ್ಷಾಂತ್ಯಕ್ಕೂ ಸಫಾರಿ ಪುನಾರಂಭ ಸಾಧ್ಯತೆ ಕ್ಷೀಣ

ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…

5 hours ago