ಕೊಳ್ಳೇಗಾಲ : ನಗರಸಭೆ 7 ವಾರ್ಡ್ ಗಳಿಗೆ ನಡೆದ ಉಪ ಚುನಾವಣೆ ಯಲ್ಲಿ ಎನ್ ಮಹೇಶ್ ಬೆಂಬಲಿಗರು ಜಯ ಗಳಿಸಿದ್ದಾರೆ..
ಉಪಚುನಾವಣೆ ಮಾಸ್ಟರ್ ಮೈಂಡ್ ಎಂದೇ ಪ್ರಸಿದ್ಧಿ ಪಡೆದಿರುವ ಸಚಿವ ವಿ ಸೋಮಣ್ಣ ರವರ ಎಲ್ಲಚುನಾವಣಾ ತಂತ್ರಗಳು ನಗರಸಭೆ ಉಪಚುನಾವಣೆ ಯಶಸ್ಸು ಕಂಡಿದೆ.
ಬಿಎಸ್ಪಿ ಪಕ್ಷದಿಂದ ಚುನಾಯಿತರಾಗಿ ಆಯ್ಕೆಯಾಗಿದ್ದ ಸದಸ್ಯರುಗಳು ನಗರಸಭೆಗೆ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಬಿಎಸ್ ಪಿ ಪಕ್ಷದಿಂದ ಸ್ಪರ್ಧಿಸಿದ್ದ ಜಯಮೇರಿ ಅವರನ್ನು ಬೆಂಬಲಿಸಲಿಲ್ಲ ಎಂದು ಜಿಲ್ಲಾಧಿಕಾರಿಗಳ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆ ಜಿಲ್ಲಾಧಿಕಾರಿಗಳ ಕೋರ್ಟ್ ನಲ್ಲಿ 7 ಬಿಎಸ್ಪಿ ಸದಸ್ಯರನ್ನು ಅನರ್ಹಗೊಳಿಸಲಾಗಿತ್ತು. ಅನರ್ಹ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು ಸಹ ಜಿಲ್ಲಾಧಿಕಾರಿಗಳ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದರಿಂದ ಇವರ ಸದಸ್ಯತ್ವ ವಜಾಗೊಂಡಿತ್ತು. ಸದಸ್ಯತ್ವ ವಜಾಗೊಂಡ ಹಿನ್ನೆಲೆ ನಡೆದ ಕೊಳ್ಳೇಗಾಲ ನಗರಸಭೆ ಉಪಚುನಾವಣೆ 7ಸ್ಥಾನಗಳಿಗೆ ಶಾಸಕ ಎನ್ ಮಹೇಶ್ ಬೆಂಬಲಿತ ಸದಸ್ಯರುಗಳಿಗೆ ಬಿಜೆಪಿ ಟಿಕೆಟ್ ನೀಡಲಾಗಿತ್ತು. ಇವರೆಲ್ಲರನ್ನು ಗೆಲ್ಲಿಸಿಕೊಂಡು ಬರಲು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ನವರ ಮಾರ್ಗದರ್ಶನದಲ್ಲಿ ಶಾಸಕ ಎನ್ ಮಹೇಶ್ ಹಾಗೂ ಮಾಜಿ ಶಾಸಕ ನಂಜುಂಡಸ್ವಾಮಿ ಒಗ್ಗಟ್ಟು ಪ್ರದರ್ಶಿಸಿ ಸಂಘಟನೆಗೆ ಒತ್ತು ನೀಡಿದ್ದರಿಂದ ಉಪಚುನಾವಣೆ ಯಲ್ಲಿ 6 ಬಿಜೆಪಿ ಸದಸ್ಯರು ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಗೆ ಮುಖಭಂಗ : ನಗರಸಭೆ 7ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನ ಒಬ್ಬ ಅಭ್ಯರ್ಥಿ ಜಯ ಗಳಿಸಿ ಉಳಿದ 6 ಅಭ್ಯರ್ಥಿಗಳು ಪರಾಭವಗೊಂಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಸೇರಿದಂತೆ ಮೂವರು ಮಾಜಿ ಶಾಸಕರುಗಳಿಗೆ ಈ ಉಪಚುನಾವಣೆಯಲ್ಲಿ ಮುಖಭಂಗವಾಗಿದೆ.
ಬಣ ರಾಜಕೀಯ ಶಮನ : ಬಣ ರಾಜಕಾರಣದಿಂದಾಗಿ ಹಲವು ಗುಂಪುಗಳಾಗಿದ್ದ ಎಲ್ಲಾ ಬಣಗಳನ್ನು ಮಧುವನಹಳ್ಳಿ ರೆಸಾರ್ಟ ನಲ್ಲಿ ಒಂದುಗೂಡಿಸಿ ಒಗ್ಗಟ್ಟಿನ ಮಂತ್ರ ಜಪಿಸುವಂತೆ ಸೂಚನೆ ನೀಡಿದ್ದು ಬಿಜೆಪಿ ಗೆಲುವಿಗೆ ವರದಾನವಾಗಿದೆ .
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…