ಜಿಲ್ಲೆಗಳು

ನಗರ ಸಭೆ ಉಪ ಚುನಾವಣೆಯಲ್ಲಿ ಎನ್ ಮಹೇಶ್ ಬೆಂಬಲಿಗರ ಮೇಲುಗೈ

ಕೊಳ್ಳೇಗಾಲ : ನಗರಸಭೆ 7 ವಾರ್ಡ್ ಗಳಿಗೆ ನಡೆದ ಉಪ ಚುನಾವಣೆ ಯಲ್ಲಿ ಎನ್ ಮಹೇಶ್ ಬೆಂಬಲಿಗರು ಜಯ ಗಳಿಸಿದ್ದಾರೆ..

ಉಪಚುನಾವಣೆ ಮಾಸ್ಟರ್ ಮೈಂಡ್ ಎಂದೇ ಪ್ರಸಿದ್ಧಿ ಪಡೆದಿರುವ ಸಚಿವ ವಿ ಸೋಮಣ್ಣ ರವರ ಎಲ್ಲಚುನಾವಣಾ ತಂತ್ರಗಳು ನಗರಸಭೆ ಉಪಚುನಾವಣೆ ಯಶಸ್ಸು ಕಂಡಿದೆ.

ಬಿಎಸ್ಪಿ ಪಕ್ಷದಿಂದ ಚುನಾಯಿತರಾಗಿ ಆಯ್ಕೆಯಾಗಿದ್ದ ಸದಸ್ಯರುಗಳು ನಗರಸಭೆಗೆ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಬಿಎಸ್ ಪಿ ಪಕ್ಷದಿಂದ ಸ್ಪರ್ಧಿಸಿದ್ದ ಜಯಮೇರಿ ಅವರನ್ನು ಬೆಂಬಲಿಸಲಿಲ್ಲ ಎಂದು ಜಿಲ್ಲಾಧಿಕಾರಿಗಳ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆ ಜಿಲ್ಲಾಧಿಕಾರಿಗಳ ಕೋರ್ಟ್ ನಲ್ಲಿ 7 ಬಿಎಸ್ಪಿ ಸದಸ್ಯರನ್ನು ಅನರ್ಹಗೊಳಿಸಲಾಗಿತ್ತು. ಅನರ್ಹ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು ಸಹ ಜಿಲ್ಲಾಧಿಕಾರಿಗಳ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದರಿಂದ ಇವರ ಸದಸ್ಯತ್ವ ವಜಾಗೊಂಡಿತ್ತು. ಸದಸ್ಯತ್ವ ವಜಾಗೊಂಡ ಹಿನ್ನೆಲೆ ನಡೆದ ಕೊಳ್ಳೇಗಾಲ ನಗರಸಭೆ ಉಪಚುನಾವಣೆ 7ಸ್ಥಾನಗಳಿಗೆ ಶಾಸಕ ಎನ್ ಮಹೇಶ್ ಬೆಂಬಲಿತ ಸದಸ್ಯರುಗಳಿಗೆ ಬಿಜೆಪಿ ಟಿಕೆಟ್ ನೀಡಲಾಗಿತ್ತು. ಇವರೆಲ್ಲರನ್ನು ಗೆಲ್ಲಿಸಿಕೊಂಡು ಬರಲು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ನವರ ಮಾರ್ಗದರ್ಶನದಲ್ಲಿ ಶಾಸಕ ಎನ್ ಮಹೇಶ್ ಹಾಗೂ ಮಾಜಿ ಶಾಸಕ ನಂಜುಂಡಸ್ವಾಮಿ ಒಗ್ಗಟ್ಟು ಪ್ರದರ್ಶಿಸಿ ಸಂಘಟನೆಗೆ ಒತ್ತು ನೀಡಿದ್ದರಿಂದ ಉಪಚುನಾವಣೆ ಯಲ್ಲಿ 6 ಬಿಜೆಪಿ ಸದಸ್ಯರು ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಗೆ ಮುಖಭಂಗ : ನಗರಸಭೆ 7ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನ ಒಬ್ಬ ಅಭ್ಯರ್ಥಿ ಜಯ ಗಳಿಸಿ ಉಳಿದ 6 ಅಭ್ಯರ್ಥಿಗಳು ಪರಾಭವಗೊಂಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಸೇರಿದಂತೆ ಮೂವರು ಮಾಜಿ ಶಾಸಕರುಗಳಿಗೆ ಈ ಉಪಚುನಾವಣೆಯಲ್ಲಿ ಮುಖಭಂಗವಾಗಿದೆ.

ಬಣ ರಾಜಕೀಯ ಶಮನ : ಬಣ ರಾಜಕಾರಣದಿಂದಾಗಿ ಹಲವು ಗುಂಪುಗಳಾಗಿದ್ದ ಎಲ್ಲಾ ಬಣಗಳನ್ನು ಮಧುವನಹಳ್ಳಿ ರೆಸಾರ್ಟ ನಲ್ಲಿ ಒಂದುಗೂಡಿಸಿ ಒಗ್ಗಟ್ಟಿನ ಮಂತ್ರ ಜಪಿಸುವಂತೆ ಸೂಚನೆ ನೀಡಿದ್ದು ಬಿಜೆಪಿ ಗೆಲುವಿಗೆ ವರದಾನವಾಗಿದೆ .

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

10 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

18 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

18 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

18 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

21 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

21 hours ago