ಜಿಲ್ಲೆಗಳು

ನಗರ ಸಭೆ ಉಪ ಚುನಾವಣೆಯಲ್ಲಿ ಎನ್ ಮಹೇಶ್ ಬೆಂಬಲಿಗರ ಮೇಲುಗೈ

ಕೊಳ್ಳೇಗಾಲ : ನಗರಸಭೆ 7 ವಾರ್ಡ್ ಗಳಿಗೆ ನಡೆದ ಉಪ ಚುನಾವಣೆ ಯಲ್ಲಿ ಎನ್ ಮಹೇಶ್ ಬೆಂಬಲಿಗರು ಜಯ ಗಳಿಸಿದ್ದಾರೆ..

ಉಪಚುನಾವಣೆ ಮಾಸ್ಟರ್ ಮೈಂಡ್ ಎಂದೇ ಪ್ರಸಿದ್ಧಿ ಪಡೆದಿರುವ ಸಚಿವ ವಿ ಸೋಮಣ್ಣ ರವರ ಎಲ್ಲಚುನಾವಣಾ ತಂತ್ರಗಳು ನಗರಸಭೆ ಉಪಚುನಾವಣೆ ಯಶಸ್ಸು ಕಂಡಿದೆ.

ಬಿಎಸ್ಪಿ ಪಕ್ಷದಿಂದ ಚುನಾಯಿತರಾಗಿ ಆಯ್ಕೆಯಾಗಿದ್ದ ಸದಸ್ಯರುಗಳು ನಗರಸಭೆಗೆ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಬಿಎಸ್ ಪಿ ಪಕ್ಷದಿಂದ ಸ್ಪರ್ಧಿಸಿದ್ದ ಜಯಮೇರಿ ಅವರನ್ನು ಬೆಂಬಲಿಸಲಿಲ್ಲ ಎಂದು ಜಿಲ್ಲಾಧಿಕಾರಿಗಳ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆ ಜಿಲ್ಲಾಧಿಕಾರಿಗಳ ಕೋರ್ಟ್ ನಲ್ಲಿ 7 ಬಿಎಸ್ಪಿ ಸದಸ್ಯರನ್ನು ಅನರ್ಹಗೊಳಿಸಲಾಗಿತ್ತು. ಅನರ್ಹ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು ಸಹ ಜಿಲ್ಲಾಧಿಕಾರಿಗಳ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದರಿಂದ ಇವರ ಸದಸ್ಯತ್ವ ವಜಾಗೊಂಡಿತ್ತು. ಸದಸ್ಯತ್ವ ವಜಾಗೊಂಡ ಹಿನ್ನೆಲೆ ನಡೆದ ಕೊಳ್ಳೇಗಾಲ ನಗರಸಭೆ ಉಪಚುನಾವಣೆ 7ಸ್ಥಾನಗಳಿಗೆ ಶಾಸಕ ಎನ್ ಮಹೇಶ್ ಬೆಂಬಲಿತ ಸದಸ್ಯರುಗಳಿಗೆ ಬಿಜೆಪಿ ಟಿಕೆಟ್ ನೀಡಲಾಗಿತ್ತು. ಇವರೆಲ್ಲರನ್ನು ಗೆಲ್ಲಿಸಿಕೊಂಡು ಬರಲು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ನವರ ಮಾರ್ಗದರ್ಶನದಲ್ಲಿ ಶಾಸಕ ಎನ್ ಮಹೇಶ್ ಹಾಗೂ ಮಾಜಿ ಶಾಸಕ ನಂಜುಂಡಸ್ವಾಮಿ ಒಗ್ಗಟ್ಟು ಪ್ರದರ್ಶಿಸಿ ಸಂಘಟನೆಗೆ ಒತ್ತು ನೀಡಿದ್ದರಿಂದ ಉಪಚುನಾವಣೆ ಯಲ್ಲಿ 6 ಬಿಜೆಪಿ ಸದಸ್ಯರು ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಗೆ ಮುಖಭಂಗ : ನಗರಸಭೆ 7ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನ ಒಬ್ಬ ಅಭ್ಯರ್ಥಿ ಜಯ ಗಳಿಸಿ ಉಳಿದ 6 ಅಭ್ಯರ್ಥಿಗಳು ಪರಾಭವಗೊಂಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಸೇರಿದಂತೆ ಮೂವರು ಮಾಜಿ ಶಾಸಕರುಗಳಿಗೆ ಈ ಉಪಚುನಾವಣೆಯಲ್ಲಿ ಮುಖಭಂಗವಾಗಿದೆ.

ಬಣ ರಾಜಕೀಯ ಶಮನ : ಬಣ ರಾಜಕಾರಣದಿಂದಾಗಿ ಹಲವು ಗುಂಪುಗಳಾಗಿದ್ದ ಎಲ್ಲಾ ಬಣಗಳನ್ನು ಮಧುವನಹಳ್ಳಿ ರೆಸಾರ್ಟ ನಲ್ಲಿ ಒಂದುಗೂಡಿಸಿ ಒಗ್ಗಟ್ಟಿನ ಮಂತ್ರ ಜಪಿಸುವಂತೆ ಸೂಚನೆ ನೀಡಿದ್ದು ಬಿಜೆಪಿ ಗೆಲುವಿಗೆ ವರದಾನವಾಗಿದೆ .

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

9 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago