ಜಿಲ್ಲೆಗಳು

ಪ್ರೀತಂ ಸಮ್ಮುಖದಲ್ಲೇ ಹಾಸನಾಂಬೆ ದರ್ಶನ ಪಡೆದ ನಾಗೇಂದ್ರ

ಮೈಸೂರು: ಹಾಸನಾಂಬೆ ದೇವಾಲಯ ಭೇಟಿ ವಿಚಾರದಲ್ಲಿ ಗೊಂದಲ ಉಂಟಾಗಿ ದೇವತಾಮೂರ್ತಿ ದರ್ಶನ ದೊರೆಯದೆ ತೀವ್ರ ಅಸಮಾಧಾನಗೊಂಡಿದ್ದ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಅವರು ಹಾಸನ ಶಾಸಕ ಪ್ರೀತಂಗೌಡ ಸಮ್ಮುಖದಲ್ಲೇ ದೇವತಾಮೂರ್ತಿ ದರ್ಶನ ಪಡೆದರು.

ದರ್ಶನ ಪಡೆದು ಹೊರ ಬಂದ ನಂತರ ಮಾತನಾಡಿದ ಎಲ್.ನಾಗೇಂದ್ರ, ನನ್ನ ಆತ್ಮೀಯ ಸ್ನೇಹಿತ, ಶಾಸಕ ಪ್ರೀತಂಗೌಡ ಅವರು ನನಗೆ ದೇವಿಯ ದರ್ಶನ ಮಾಡಿಸಿದ್ದಾರೆ. ಭಾನುವಾರ ಸಮನ್ವಯತೆ ಕೊರತೆಯಿಂದ ಗೊಂದಲ ಉಂಟಾಗಿತ್ತು. ಹಾಗಾಗಿ ದೇವರ ದರ್ಶನಕ್ಕೆ ಬಂದಾಗ ನಿರಾಶೆಯಾಗಿತ್ತಾದರೂ ಇಂದು ಸಂತೋಷವಾಗಿದೆ ಎಂದು ಹೇಳಿದರು.

ಶಾಸಕ ಪ್ರೀತಂಗೌಡ ಮಾತನಾಡಿ, ಭಾನುವಾರ ಸಮನ್ವಯದ ಕೊರತೆಯಿಂದ ಸಮಸ್ಯೆ ಆಗಿತ್ತು. ನನ್ನ ಸಹೋದರ ಸಮಾನರಾದ ಶಾಸಕ ಎಲ್.ನಾಗೇಂದ್ರ ಅವರಲ್ಲಿ ಕ್ಷಮೆ ಕೋರುತ್ತೇನೆ. ಕೆಲಸದ ಒತ್ತಡದಿಂದ ಅಧಿಕಾರಿಗಳು ತಡೆಹಿಡಿದಿದ್ದರು. ಯಾವುದೇ ಪಕ್ಷದ ಚುನಾಯಿತ ಪ್ರತಿನಿಧಿ ಬಂದರೂ ಎಲ್ಲ ರೀತಿಯ ಸಹಕಾರವನ್ನು ಜಿಲ್ಲಾಡಳಿತ ನೀಡಿದೆ. ನನಗೆ ಯಾವುದೇ ಸ್ವಪ್ರತಿಷ್ಠೆ ಇಲ್ಲ. ಯಾರೂ ತಪ್ಪು ಮಾಡಬೇಕೆಂದು ಮಾಡಲ್ಲ. ಆಕಸ್ಮಿಕವಾಗಿ ಈ ಘಟನೆಯಾಗಿದೆ. ಇದನ್ನು ಇಲ್ಲಿಗೆ ಮುಕ್ತಾಯ ಮಾಡೋಣ ಎಂದರು.

ಎಲ್.ನಾಗೇಂದ್ರ ಅವರೊಂದಿಗೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಎಂ.ಜೆ.ಕಿರಣ್ ಗೌಡ, ದಿನೇಶ್ ಗೌಡ ಮೊದಲಾದವರು ದರ್ಶನ ಪಡೆದರು.

andolana

Recent Posts

ಫಲಾನುಭವಿಗಳ ಖಾತೆಗೆ ಜಮೆಯಾಗದ ಗೃಹಲಕ್ಷ್ಮೀ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಿಷ್ಟು.!

ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಗೃಹಲಕ್ಷ್ಮೀ ಯೋಜನೆ…

4 mins ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಸೋಮವಾರಪೇಟೆ ವಿದ್ಯುತ್‌ ವಿತರಣಾ ಉಪ ಕೇಂದ್ರದಿಂದ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಫೀಡರ್‌ ನಿರ್ವಹಣೆ ಕಾಮಗಾರಿ…

18 mins ago

ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ

ಎಚ್.ಡಿ.ಕೋಟೆ: ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿ…

40 mins ago

ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್‌ ಮೇಲೆ ಐಟಿ ದಾಳಿ

ಬೆಂಗಳೂರು: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್‌ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.…

1 hour ago

ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಹೊಸ ರೂಲ್ಸ್

ಬೆಂಗಳೂರು: ಈ ಬಾರಿ ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್‌ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. 1)…

1 hour ago

ಹುಣಸೂರು| ಅಪೆ ಆಟೋ ಕೆರೆಗೆ ಉರುಳಿ ಚಾಲಕ ಸಾವು

ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ಅಪೆ ಆಟೋವೊಂದು ಕೆರೆಗೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯಲ್ಲಿ…

2 hours ago