ಜಿಲ್ಲೆಗಳು

ಪ್ರೀತಂ ಸಮ್ಮುಖದಲ್ಲೇ ಹಾಸನಾಂಬೆ ದರ್ಶನ ಪಡೆದ ನಾಗೇಂದ್ರ

ಮೈಸೂರು: ಹಾಸನಾಂಬೆ ದೇವಾಲಯ ಭೇಟಿ ವಿಚಾರದಲ್ಲಿ ಗೊಂದಲ ಉಂಟಾಗಿ ದೇವತಾಮೂರ್ತಿ ದರ್ಶನ ದೊರೆಯದೆ ತೀವ್ರ ಅಸಮಾಧಾನಗೊಂಡಿದ್ದ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಅವರು ಹಾಸನ ಶಾಸಕ ಪ್ರೀತಂಗೌಡ ಸಮ್ಮುಖದಲ್ಲೇ ದೇವತಾಮೂರ್ತಿ ದರ್ಶನ ಪಡೆದರು.

ದರ್ಶನ ಪಡೆದು ಹೊರ ಬಂದ ನಂತರ ಮಾತನಾಡಿದ ಎಲ್.ನಾಗೇಂದ್ರ, ನನ್ನ ಆತ್ಮೀಯ ಸ್ನೇಹಿತ, ಶಾಸಕ ಪ್ರೀತಂಗೌಡ ಅವರು ನನಗೆ ದೇವಿಯ ದರ್ಶನ ಮಾಡಿಸಿದ್ದಾರೆ. ಭಾನುವಾರ ಸಮನ್ವಯತೆ ಕೊರತೆಯಿಂದ ಗೊಂದಲ ಉಂಟಾಗಿತ್ತು. ಹಾಗಾಗಿ ದೇವರ ದರ್ಶನಕ್ಕೆ ಬಂದಾಗ ನಿರಾಶೆಯಾಗಿತ್ತಾದರೂ ಇಂದು ಸಂತೋಷವಾಗಿದೆ ಎಂದು ಹೇಳಿದರು.

ಶಾಸಕ ಪ್ರೀತಂಗೌಡ ಮಾತನಾಡಿ, ಭಾನುವಾರ ಸಮನ್ವಯದ ಕೊರತೆಯಿಂದ ಸಮಸ್ಯೆ ಆಗಿತ್ತು. ನನ್ನ ಸಹೋದರ ಸಮಾನರಾದ ಶಾಸಕ ಎಲ್.ನಾಗೇಂದ್ರ ಅವರಲ್ಲಿ ಕ್ಷಮೆ ಕೋರುತ್ತೇನೆ. ಕೆಲಸದ ಒತ್ತಡದಿಂದ ಅಧಿಕಾರಿಗಳು ತಡೆಹಿಡಿದಿದ್ದರು. ಯಾವುದೇ ಪಕ್ಷದ ಚುನಾಯಿತ ಪ್ರತಿನಿಧಿ ಬಂದರೂ ಎಲ್ಲ ರೀತಿಯ ಸಹಕಾರವನ್ನು ಜಿಲ್ಲಾಡಳಿತ ನೀಡಿದೆ. ನನಗೆ ಯಾವುದೇ ಸ್ವಪ್ರತಿಷ್ಠೆ ಇಲ್ಲ. ಯಾರೂ ತಪ್ಪು ಮಾಡಬೇಕೆಂದು ಮಾಡಲ್ಲ. ಆಕಸ್ಮಿಕವಾಗಿ ಈ ಘಟನೆಯಾಗಿದೆ. ಇದನ್ನು ಇಲ್ಲಿಗೆ ಮುಕ್ತಾಯ ಮಾಡೋಣ ಎಂದರು.

ಎಲ್.ನಾಗೇಂದ್ರ ಅವರೊಂದಿಗೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಎಂ.ಜೆ.ಕಿರಣ್ ಗೌಡ, ದಿನೇಶ್ ಗೌಡ ಮೊದಲಾದವರು ದರ್ಶನ ಪಡೆದರು.

andolana

Recent Posts

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

36 mins ago

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

4 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

4 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

5 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

5 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

5 hours ago