ಜಿಲ್ಲೆಗಳು

ಪ್ರೀತಂ ಸಮ್ಮುಖದಲ್ಲೇ ಹಾಸನಾಂಬೆ ದರ್ಶನ ಪಡೆದ ನಾಗೇಂದ್ರ

ಮೈಸೂರು: ಹಾಸನಾಂಬೆ ದೇವಾಲಯ ಭೇಟಿ ವಿಚಾರದಲ್ಲಿ ಗೊಂದಲ ಉಂಟಾಗಿ ದೇವತಾಮೂರ್ತಿ ದರ್ಶನ ದೊರೆಯದೆ ತೀವ್ರ ಅಸಮಾಧಾನಗೊಂಡಿದ್ದ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಅವರು ಹಾಸನ ಶಾಸಕ ಪ್ರೀತಂಗೌಡ ಸಮ್ಮುಖದಲ್ಲೇ ದೇವತಾಮೂರ್ತಿ ದರ್ಶನ ಪಡೆದರು.

ದರ್ಶನ ಪಡೆದು ಹೊರ ಬಂದ ನಂತರ ಮಾತನಾಡಿದ ಎಲ್.ನಾಗೇಂದ್ರ, ನನ್ನ ಆತ್ಮೀಯ ಸ್ನೇಹಿತ, ಶಾಸಕ ಪ್ರೀತಂಗೌಡ ಅವರು ನನಗೆ ದೇವಿಯ ದರ್ಶನ ಮಾಡಿಸಿದ್ದಾರೆ. ಭಾನುವಾರ ಸಮನ್ವಯತೆ ಕೊರತೆಯಿಂದ ಗೊಂದಲ ಉಂಟಾಗಿತ್ತು. ಹಾಗಾಗಿ ದೇವರ ದರ್ಶನಕ್ಕೆ ಬಂದಾಗ ನಿರಾಶೆಯಾಗಿತ್ತಾದರೂ ಇಂದು ಸಂತೋಷವಾಗಿದೆ ಎಂದು ಹೇಳಿದರು.

ಶಾಸಕ ಪ್ರೀತಂಗೌಡ ಮಾತನಾಡಿ, ಭಾನುವಾರ ಸಮನ್ವಯದ ಕೊರತೆಯಿಂದ ಸಮಸ್ಯೆ ಆಗಿತ್ತು. ನನ್ನ ಸಹೋದರ ಸಮಾನರಾದ ಶಾಸಕ ಎಲ್.ನಾಗೇಂದ್ರ ಅವರಲ್ಲಿ ಕ್ಷಮೆ ಕೋರುತ್ತೇನೆ. ಕೆಲಸದ ಒತ್ತಡದಿಂದ ಅಧಿಕಾರಿಗಳು ತಡೆಹಿಡಿದಿದ್ದರು. ಯಾವುದೇ ಪಕ್ಷದ ಚುನಾಯಿತ ಪ್ರತಿನಿಧಿ ಬಂದರೂ ಎಲ್ಲ ರೀತಿಯ ಸಹಕಾರವನ್ನು ಜಿಲ್ಲಾಡಳಿತ ನೀಡಿದೆ. ನನಗೆ ಯಾವುದೇ ಸ್ವಪ್ರತಿಷ್ಠೆ ಇಲ್ಲ. ಯಾರೂ ತಪ್ಪು ಮಾಡಬೇಕೆಂದು ಮಾಡಲ್ಲ. ಆಕಸ್ಮಿಕವಾಗಿ ಈ ಘಟನೆಯಾಗಿದೆ. ಇದನ್ನು ಇಲ್ಲಿಗೆ ಮುಕ್ತಾಯ ಮಾಡೋಣ ಎಂದರು.

ಎಲ್.ನಾಗೇಂದ್ರ ಅವರೊಂದಿಗೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಎಂ.ಜೆ.ಕಿರಣ್ ಗೌಡ, ದಿನೇಶ್ ಗೌಡ ಮೊದಲಾದವರು ದರ್ಶನ ಪಡೆದರು.

andolana

Recent Posts

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

4 mins ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

12 mins ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

1 hour ago

ಅಜ್ಜೀಪುರ ಸಫಾರಿ ಕೇಂದ್ರದಲ್ಲಿ ಬಿಳಿ ಬಣ್ಣದ ಜಿಂಕೆ ದರ್ಶನ

ಹನೂರು : ಅಜ್ಜೀಪುರದ ಬಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ದರ್ಶನ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.…

2 hours ago

ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು : ಸಚಿವ ಖಂಡ್ರೆ ಆಕ್ರೋಶ

ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ…

3 hours ago

ಸಿಎಂ ಬದಲಾವಣೆ ಸಮಯ ಬಂದಿದೆ: ವಿಜಯೇಂದ್ರ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…

4 hours ago