ಮೈಸೂರು: ಹಾಸನಾಂಬೆ ದೇವಾಲಯ ಭೇಟಿ ವಿಚಾರದಲ್ಲಿ ಗೊಂದಲ ಉಂಟಾಗಿ ದೇವತಾಮೂರ್ತಿ ದರ್ಶನ ದೊರೆಯದೆ ತೀವ್ರ ಅಸಮಾಧಾನಗೊಂಡಿದ್ದ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಅವರು ಹಾಸನ ಶಾಸಕ ಪ್ರೀತಂಗೌಡ ಸಮ್ಮುಖದಲ್ಲೇ ದೇವತಾಮೂರ್ತಿ ದರ್ಶನ ಪಡೆದರು.
ದರ್ಶನ ಪಡೆದು ಹೊರ ಬಂದ ನಂತರ ಮಾತನಾಡಿದ ಎಲ್.ನಾಗೇಂದ್ರ, ನನ್ನ ಆತ್ಮೀಯ ಸ್ನೇಹಿತ, ಶಾಸಕ ಪ್ರೀತಂಗೌಡ ಅವರು ನನಗೆ ದೇವಿಯ ದರ್ಶನ ಮಾಡಿಸಿದ್ದಾರೆ. ಭಾನುವಾರ ಸಮನ್ವಯತೆ ಕೊರತೆಯಿಂದ ಗೊಂದಲ ಉಂಟಾಗಿತ್ತು. ಹಾಗಾಗಿ ದೇವರ ದರ್ಶನಕ್ಕೆ ಬಂದಾಗ ನಿರಾಶೆಯಾಗಿತ್ತಾದರೂ ಇಂದು ಸಂತೋಷವಾಗಿದೆ ಎಂದು ಹೇಳಿದರು.
ಶಾಸಕ ಪ್ರೀತಂಗೌಡ ಮಾತನಾಡಿ, ಭಾನುವಾರ ಸಮನ್ವಯದ ಕೊರತೆಯಿಂದ ಸಮಸ್ಯೆ ಆಗಿತ್ತು. ನನ್ನ ಸಹೋದರ ಸಮಾನರಾದ ಶಾಸಕ ಎಲ್.ನಾಗೇಂದ್ರ ಅವರಲ್ಲಿ ಕ್ಷಮೆ ಕೋರುತ್ತೇನೆ. ಕೆಲಸದ ಒತ್ತಡದಿಂದ ಅಧಿಕಾರಿಗಳು ತಡೆಹಿಡಿದಿದ್ದರು. ಯಾವುದೇ ಪಕ್ಷದ ಚುನಾಯಿತ ಪ್ರತಿನಿಧಿ ಬಂದರೂ ಎಲ್ಲ ರೀತಿಯ ಸಹಕಾರವನ್ನು ಜಿಲ್ಲಾಡಳಿತ ನೀಡಿದೆ. ನನಗೆ ಯಾವುದೇ ಸ್ವಪ್ರತಿಷ್ಠೆ ಇಲ್ಲ. ಯಾರೂ ತಪ್ಪು ಮಾಡಬೇಕೆಂದು ಮಾಡಲ್ಲ. ಆಕಸ್ಮಿಕವಾಗಿ ಈ ಘಟನೆಯಾಗಿದೆ. ಇದನ್ನು ಇಲ್ಲಿಗೆ ಮುಕ್ತಾಯ ಮಾಡೋಣ ಎಂದರು.
ಎಲ್.ನಾಗೇಂದ್ರ ಅವರೊಂದಿಗೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಎಂ.ಜೆ.ಕಿರಣ್ ಗೌಡ, ದಿನೇಶ್ ಗೌಡ ಮೊದಲಾದವರು ದರ್ಶನ ಪಡೆದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…