ಮಡಿಕೇರಿ: ಇಲ್ಲಿನ ರಾಜಾಸೀಟ್ ಉದ್ಯಾನದಲ್ಲಿ ಡಿ. 10 ಹಾಗೂ 11ರಂದು ಕೂರ್ಗ್ ಕಾಫಿ ಉತ್ಸವವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.
ಕೊಡಗು ಜಿಲ್ಲಾಡಳಿತ, ಕಾಫಿ ಮಂಡಳಿ ಹಾಗೂ ತೋಟಗಾರಿಕಾ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಈ ಉತ್ಸವದಲ್ಲಿ ಖಾಸಗಿ ಸಂಸ್ಥೆಗಳು ಕಾಫಿಯ ಮೌಲ್ಯವರ್ಧಿತ ಉತ್ಪನ್ನಗಳನ್ನು ಪ್ರದರ್ಶಿಸಲಿದ್ದಾರೆ ಎಂದು ಅವರು ಇಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕೊಡಗಿನ ಕಾಫಿ ಬಳಕೆಯನ್ನು ಮತ್ತಷ್ಟು ಹೆಚ್ಚಿಸಲು ಆಯೋಜಿಸಿರುವ ಈ ಉತ್ಸವದಲ್ಲಿ ಎಲ್ಲ ಕಾಫಿ ಪಾಲುದಾರರನ್ನು ಒಂದೇ ಸೂರಿನಡಿ ತರಲಾಗುವುದು ಎಂದರು.
ಅತ್ಯುತ್ತಮ ಕಾಫಿ ಬ್ರಾಂಡ್ ಗಳು, ಸ್ವಸಹಾಯ ಗುಂಪುಗಳ ಕಾಫಿ ಉತ್ಪನ್ನಗಳು, ಬ್ರೂಯಿಂಗ್ ಯಂತ್ರೋಪಕರಣಗಳು ಪ್ರದರ್ಶನದಲ್ಲಿ ಇರಲಿವೆ ಎಂದು ಹೇಳಿದರು.
ಡಿ.24 ಮತ್ತು 25 ರಂದು ಜೇನುಮೇಳ ಹಾಗೂ ಜನವರಿ ಎರಡನೇ ವಾರದಲ್ಲಿ ವೈನ್ ಮೇಳ ಆಯೋಜಿಸಲು ಚಿಂತನೆ ನಡೆಸಲಾಗಿದೆ ಎಂದು ನುಡಿದರು.
ಇದೇ ವೇಳೆ ಕೂರ್ಗ್ ಕಾಫಿ ಉತ್ಸವದ ವಿಡಿಯೊವನ್ನು ಇದೇ ವೇಳೆ ಅವರು ಬಿಡುಗಡೆ ಮಾಡಿದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…