ಮಡಿಕೇರಿ: ಇಲ್ಲಿನ ರಾಜಾಸೀಟ್ ಉದ್ಯಾನದಲ್ಲಿ ಡಿ. 10 ಹಾಗೂ 11ರಂದು ಕೂರ್ಗ್ ಕಾಫಿ ಉತ್ಸವವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.
ಕೊಡಗು ಜಿಲ್ಲಾಡಳಿತ, ಕಾಫಿ ಮಂಡಳಿ ಹಾಗೂ ತೋಟಗಾರಿಕಾ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಈ ಉತ್ಸವದಲ್ಲಿ ಖಾಸಗಿ ಸಂಸ್ಥೆಗಳು ಕಾಫಿಯ ಮೌಲ್ಯವರ್ಧಿತ ಉತ್ಪನ್ನಗಳನ್ನು ಪ್ರದರ್ಶಿಸಲಿದ್ದಾರೆ ಎಂದು ಅವರು ಇಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕೊಡಗಿನ ಕಾಫಿ ಬಳಕೆಯನ್ನು ಮತ್ತಷ್ಟು ಹೆಚ್ಚಿಸಲು ಆಯೋಜಿಸಿರುವ ಈ ಉತ್ಸವದಲ್ಲಿ ಎಲ್ಲ ಕಾಫಿ ಪಾಲುದಾರರನ್ನು ಒಂದೇ ಸೂರಿನಡಿ ತರಲಾಗುವುದು ಎಂದರು.
ಅತ್ಯುತ್ತಮ ಕಾಫಿ ಬ್ರಾಂಡ್ ಗಳು, ಸ್ವಸಹಾಯ ಗುಂಪುಗಳ ಕಾಫಿ ಉತ್ಪನ್ನಗಳು, ಬ್ರೂಯಿಂಗ್ ಯಂತ್ರೋಪಕರಣಗಳು ಪ್ರದರ್ಶನದಲ್ಲಿ ಇರಲಿವೆ ಎಂದು ಹೇಳಿದರು.
ಡಿ.24 ಮತ್ತು 25 ರಂದು ಜೇನುಮೇಳ ಹಾಗೂ ಜನವರಿ ಎರಡನೇ ವಾರದಲ್ಲಿ ವೈನ್ ಮೇಳ ಆಯೋಜಿಸಲು ಚಿಂತನೆ ನಡೆಸಲಾಗಿದೆ ಎಂದು ನುಡಿದರು.
ಇದೇ ವೇಳೆ ಕೂರ್ಗ್ ಕಾಫಿ ಉತ್ಸವದ ವಿಡಿಯೊವನ್ನು ಇದೇ ವೇಳೆ ಅವರು ಬಿಡುಗಡೆ ಮಾಡಿದರು.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…