ಮಡಿಕೇರಿ: ಇಲ್ಲಿನ ರಾಜಾಸೀಟ್ ಉದ್ಯಾನದಲ್ಲಿ ಡಿ. 10 ಹಾಗೂ 11ರಂದು ಕೂರ್ಗ್ ಕಾಫಿ ಉತ್ಸವವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.
ಕೊಡಗು ಜಿಲ್ಲಾಡಳಿತ, ಕಾಫಿ ಮಂಡಳಿ ಹಾಗೂ ತೋಟಗಾರಿಕಾ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಈ ಉತ್ಸವದಲ್ಲಿ ಖಾಸಗಿ ಸಂಸ್ಥೆಗಳು ಕಾಫಿಯ ಮೌಲ್ಯವರ್ಧಿತ ಉತ್ಪನ್ನಗಳನ್ನು ಪ್ರದರ್ಶಿಸಲಿದ್ದಾರೆ ಎಂದು ಅವರು ಇಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕೊಡಗಿನ ಕಾಫಿ ಬಳಕೆಯನ್ನು ಮತ್ತಷ್ಟು ಹೆಚ್ಚಿಸಲು ಆಯೋಜಿಸಿರುವ ಈ ಉತ್ಸವದಲ್ಲಿ ಎಲ್ಲ ಕಾಫಿ ಪಾಲುದಾರರನ್ನು ಒಂದೇ ಸೂರಿನಡಿ ತರಲಾಗುವುದು ಎಂದರು.
ಅತ್ಯುತ್ತಮ ಕಾಫಿ ಬ್ರಾಂಡ್ ಗಳು, ಸ್ವಸಹಾಯ ಗುಂಪುಗಳ ಕಾಫಿ ಉತ್ಪನ್ನಗಳು, ಬ್ರೂಯಿಂಗ್ ಯಂತ್ರೋಪಕರಣಗಳು ಪ್ರದರ್ಶನದಲ್ಲಿ ಇರಲಿವೆ ಎಂದು ಹೇಳಿದರು.
ಡಿ.24 ಮತ್ತು 25 ರಂದು ಜೇನುಮೇಳ ಹಾಗೂ ಜನವರಿ ಎರಡನೇ ವಾರದಲ್ಲಿ ವೈನ್ ಮೇಳ ಆಯೋಜಿಸಲು ಚಿಂತನೆ ನಡೆಸಲಾಗಿದೆ ಎಂದು ನುಡಿದರು.
ಇದೇ ವೇಳೆ ಕೂರ್ಗ್ ಕಾಫಿ ಉತ್ಸವದ ವಿಡಿಯೊವನ್ನು ಇದೇ ವೇಳೆ ಅವರು ಬಿಡುಗಡೆ ಮಾಡಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…