ಮಡಿಕೇರಿ: ಇಲ್ಲಿನ ರಾಜಾಸೀಟ್ ಉದ್ಯಾನದಲ್ಲಿ ಡಿ. 10 ಹಾಗೂ 11ರಂದು ಕೂರ್ಗ್ ಕಾಫಿ ಉತ್ಸವವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.
ಕೊಡಗು ಜಿಲ್ಲಾಡಳಿತ, ಕಾಫಿ ಮಂಡಳಿ ಹಾಗೂ ತೋಟಗಾರಿಕಾ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಈ ಉತ್ಸವದಲ್ಲಿ ಖಾಸಗಿ ಸಂಸ್ಥೆಗಳು ಕಾಫಿಯ ಮೌಲ್ಯವರ್ಧಿತ ಉತ್ಪನ್ನಗಳನ್ನು ಪ್ರದರ್ಶಿಸಲಿದ್ದಾರೆ ಎಂದು ಅವರು ಇಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕೊಡಗಿನ ಕಾಫಿ ಬಳಕೆಯನ್ನು ಮತ್ತಷ್ಟು ಹೆಚ್ಚಿಸಲು ಆಯೋಜಿಸಿರುವ ಈ ಉತ್ಸವದಲ್ಲಿ ಎಲ್ಲ ಕಾಫಿ ಪಾಲುದಾರರನ್ನು ಒಂದೇ ಸೂರಿನಡಿ ತರಲಾಗುವುದು ಎಂದರು.
ಅತ್ಯುತ್ತಮ ಕಾಫಿ ಬ್ರಾಂಡ್ ಗಳು, ಸ್ವಸಹಾಯ ಗುಂಪುಗಳ ಕಾಫಿ ಉತ್ಪನ್ನಗಳು, ಬ್ರೂಯಿಂಗ್ ಯಂತ್ರೋಪಕರಣಗಳು ಪ್ರದರ್ಶನದಲ್ಲಿ ಇರಲಿವೆ ಎಂದು ಹೇಳಿದರು.
ಡಿ.24 ಮತ್ತು 25 ರಂದು ಜೇನುಮೇಳ ಹಾಗೂ ಜನವರಿ ಎರಡನೇ ವಾರದಲ್ಲಿ ವೈನ್ ಮೇಳ ಆಯೋಜಿಸಲು ಚಿಂತನೆ ನಡೆಸಲಾಗಿದೆ ಎಂದು ನುಡಿದರು.
ಇದೇ ವೇಳೆ ಕೂರ್ಗ್ ಕಾಫಿ ಉತ್ಸವದ ವಿಡಿಯೊವನ್ನು ಇದೇ ವೇಳೆ ಅವರು ಬಿಡುಗಡೆ ಮಾಡಿದರು.
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…
ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…
ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ…