ಜಿಲ್ಲೆಗಳು

ನಂದಿತು ಹೋರಾಟದ ಪ್ರಖರ ದನಿ

ಮೈಸೂರು: ನಾಡಿನ ಹಿರಿಯ ಹೋರಾಟಗಾರ, ನಾಡು, ನುಡಿ, ಸಾಮಾಜಿಕ ಚಳವಳಿಗಳಲ್ಲಿ ಸದಾ ಸಕ್ರಿಯವಾಗಿರುತ್ತಿದ್ದ ಪ.ಮಲ್ಲೇಶ್ (88) ಗುರುವಾರ ನಿಧನರಾದರು.

ತಾವೇ ಸ್ಥಾಪಿಸಿದ್ದ ನೃಪತುಂಗ ಕನ್ನಡ ಶಾಲೆಯಲ್ಲಿ ಗುರುವಾರ ಮಧ್ಯಾಹ್ನದವರೆಗೂ ಇದ್ದ ಪ.ಮಲ್ಲೇಶ್ ಅವರು ಶನಿವಾರದ ಶಾಲೆಯ ಕಾರ್ಯಕ್ರಮದ ತಯಾರಿಯಲ್ಲಿದ್ದರು. ಏಕಾಏಕಿ ಕುಸಿದುಬಿದ್ದ ಅವರನ್ನು ಕೂಡಲೇ ಬಿಜಿಎಸ್ ಅಪೋಲೋ ಆಸ್ಪತ್ರೆ ದಾಖಲಿಸಿದರೂ ಸಂಜೆ 4ರ ಹೊತ್ತಿಗೆ ಕೊನೆಯುಸಿರೆಳೆದರು.

ಅವರಿಗೆ ಪುತ್ರ ಶಿವರಾಜು, ಪುತ್ರಿಯರಾದ ಅನುರಾಧ, ಸವಿತಾ ಹಾಗೂ ಮಯೂರ ಇದ್ದಾರೆ. ಮಲ್ಲೇಶ್ ಅವರ ಪತ್ನಿ ಸರ್ವಮಂಗಳ ಎರಡು ವರ್ಷಗಳ ಹಿಂದೆಯಷ್ಟೇ ನಿಧನರಾಗಿದ್ದರು.

ಪ್ರಗತಿಪರ ಚಿಂತಕ, ಸಮಾಜವಾದಿ ನಾಯಕ, ಕನ್ನಡಪರ ಹೋರಾಟಗಾರ, ರೈತ, ದಲಿತ ಚಳವಳಿಯ ಮುಂಚೂಣಿಯಲ್ಲಿದ್ದ ಪ.ಮಲ್ಲೇಶ್ ಅವರ ನಿಧನದಿಂದ ಮೈಸೂರು ಭಾಗದ ಹೋರಾಟದ ಮತ್ತೊಂದು ಕಿಚ್ಚು ನಂದಿ ಹೋಗಿದೆ.
ಹೋರಾಟ, ಚಳವಳಿಯನ್ನೇ ಉಸಿರಾಗಿಸಿಕೊಂಡಿದ್ದ ಗಾಂಧಿವಾದಿ, ಸಮಾಜಮುಖಿ ಚಿಂತನೆಯ ಪ್ರಖರ ವಾಗ್ಮಿ ಪ.ಮಲ್ಲೇಶ್ ಎಂದಿಗೂ ತಾವು ನಂಬಿದ ತತ್ವ ಸಿದ್ಧಾಂತಗಳೊಂದಿಗೆ ರಾಜಿಯಾಗಿರಲಿಲ್ಲ. ಆಚಾರ್ಯ ವಿನೋಬಾ ಬಾವೆ, ಜಯಪ್ರಕಾಶ್ ನಾರಾಯಣ್ (ಜೆಪಿ) ಅವರ ಚಳವಳಿಗಳಿಂದ ಪ್ರೇರೇಪಿತರಾಗಿ ಹೋರಾಟದ ಕಿಚ್ಚನ್ನು ಮೈಗೂಡಿಸಿಕೊಂಡು ಜೀವನದುದ್ದಕ್ಕೂ ತಮ್ಮ ಅಸ್ಮಿತೆಯನ್ನು ಉಳಿಸಿಕೊಂಡಿದ್ದರು.
ಸಮಾಜವಾದಿ ನಾಯಕ ರಾಮ್‌ಮನೋಹರ್ ಲೋಹಿಯಾ ಅವರ ಅನುಯಾಯಿಯಾಗಿದ್ದ ಮಲ್ಲೇಶ್ ಶಾಂತವೇರಿ ಗೋಪಾಲಗೌಡರ ಹೋರಾಟದಲ್ಲೂ ಗುರುತಿಸಿಕೊಂಡಿದ್ದರು. ರೈತ ಚಳವಳಿಯ ಅದ್ವರ್ಯ ಪ್ರೊ.ಎಂ.ಡಿ.ನಂಜುಂಡಸ್ವಾಮಿ, ಪ್ರಗತಿಪರ ಚಿಂತಕ, ಲೇಖಕ ಪಿ.ಲಂಕೇಶ್, ವಿಚಾರವಾದಿ ಪ್ರೊ.ಕೆ.ರಾಮದಾಸ್, ಲೇಖಕ ಪೂರ್ಣಚಂದ್ರ ತೇಜಸ್ವಿ, ಬಿ.ಎನ್.ಶ್ರೀರಾಮ್, ಡಾ.ಹಿ.ಶಿ.ರಾಮಚಂದ್ರೇಗೌಡ, ಕೆ.ನ.ಶಿವತೀರ್ಥನ್ ಮುಂತಾದವರೊಂದಿಗೆ ಒಡನಾಟ ಹೊಂದಿದ್ದ ಪ.ಮಲ್ಲೇಶ್ ಗೋಕಾಕ್ ಚಳವಳಿಯಲ್ಲಿ ಮೈಸೂರು ಭಾಗದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದರು.
ಕನ್ನಡ ಕ್ರಿಯಾ ಸಮಿತಿ ಸ್ಥಾಪಿಸಿ, ಕನ್ನಡಪರ ಹೋರಾಟಗಳಲ್ಲಿ ಪ್ರಮುಖವಾಗಿ ಭಾಗವಹಿಸುತ್ತಿದ್ದ ಅವರು, ಹಲವು ಹೋರಾಟಗಳನ್ನು ಮುನ್ನಡೆಸುವ ಜತೆಗೆ ಕನ್ನಡ ಮಾಧ್ಯಮದಲ್ಲೇ ಮಕ್ಕಳಿಗೆ ಶಿಕ್ಷಣ ದೊರೆುಂಬೇಕೆಂಬ ಒತ್ತಾಯಕ್ಕೆ ಧ್ವನಿಯಾಗಿದ್ದರಲ್ಲದೆ ಇದನ್ನು ಕಾರ್ಯಗತಗೊಳಿಸಿದ್ದರು. ಕನ್ನಡ ವಿಕಾಸ ಶೈಕ್ಷಣಿಕ, ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆ ಅಡಿಯಲ್ಲಿ ನೃಪತುಂಗ ಕನ್ನಡ ಶಾಲೆಯನ್ನು ಸ್ಥಾಪಿಸಿ ಕನ್ನಡ ಮಾಧ್ಯಮದಲ್ಲೇ ಪ್ರೌಢ ಶಾಲೆವರೆಗೂ ಶಿಕ್ಷಣ ನೀಡುತ್ತಿದ್ದರು. ಕನ್ನಡ ಮಾಧ್ಯಮದಲ್ಲೇ ವಿಜ್ಞಾನ ಬೋಧನೆಗೂ ಒತ್ತು ನೀಡಿ ಪದವಿಪೂರ್ವ ಕಾಲೇಜನ್ನೂ ಆರಂಭಿಸಿದ್ದರು.
ಶತಮಾನಗಳಿಗೂ ಹಳೆಯದಾದ ಎನ್‌ಟಿಎಂ ಶಾಲೆಯನ್ನು ಮುಚ್ಚಿ, ಆ ಜಾಗವನ್ನು ಶ್ರೀ ರಾಮಕೃಷ್ಣ ಆಶ್ರಮಕ್ಕೆ ನೀಡುವ ತೀರ್ಮಾನವಾದಾಗ ಇದರ ವಿರುದ್ಧ ಹೋರಾಟ ರೂಪಿಸಿ ಬೃಹತ್ ಚಳವಳಿಯನ್ನೂ ಮಾಡಿದ್ದರು.
ಪ.ಮಲ್ಲೇಶ್ ನೇರ ನಡೆ ನುಡಿಯ ಹೋರಾಟಗಾರರಾಗಿದ್ದರು. ನಿಷ್ಟುರವಾದಿಯೂ ಆಗಿದ್ದರು. ಕೆಲವೊಮ್ಮೆ ತಮ್ಮ ವಿವಾದಾತ್ಮಕ ಹೇಳಿಕೆಗೆ ಆಕ್ರೋಶ ವ್ಯಕ್ತವಾದಾಗ ಪಲಾಯನ ಮಾಡದೆ, ತಮ್ಮ ಹೇಳಿಕೆಯನ್ನು ಬಲವಾಗಿ ಸಮರ್ಥಿಸಿಕೊಳ್ಳುತ್ತಿದ್ದರು. ಇತ್ತೀಚೆಗೆ ಬ್ರಾಹ್ಮಣ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ತೀವ್ರ ರೀತಿಯ ಟೀಕೆ ಎದುರಿಸಿದ್ದರು.
ಪ್ರಶಸ್ತಿ, ಸನ್ಮಾನ, ಸರ್ಕಾರದ ಸ್ಥಾನಮಾನಗಳಿಂದ ದೂರ ಇದ್ದ ಮಲ್ಲೇಶ್, ಅನೇಕ ರಾಜಕಾರಣಿಗಳ ಆಪ್ತವಲಯದಲ್ಲೂ ಗುರುತಿಸಿಕೊಂಡಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮ್ಯಯ್ಯ ಅವರ ಆಪ್ತ ಸ್ನೇಹಿತರೂ ಆಗಿದ್ದರು.


ನೃಪತುಂಗ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಪ.ಮಲ್ಲೇಶ್ ಅವರ ಪಾರ್ಥಿವ ಶರೀರವನ್ನು ರಾಮಕೃಷ್ಣನಗರದ ನೃಪತುಂಗ ಕನ್ನಡ ಶಾಲೆಯಲ್ಲಿ ಶುಕ್ರವಾರ ಬೆಳಿಗ್ಗೆ ೯.೦೦ ರಿಂದ ೧೦ ಗಂಟೆವರೆಗೆ ಇಡಲಾಗುತ್ತದೆ. ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಸ.ರ.ಸುದರ್ಶನ ತಿಳಿಸಿದ್ದಾರೆ.

andolanait

Recent Posts

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…

9 mins ago

ಅಸ್ಸಾಂನಲ್ಲಿ ಘೋರ ದುರಂತ: ರೈಲು ಡಿಕ್ಕಿಯಾಗಿ 7 ಆನೆಗಳು ಸಾವು

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…

59 mins ago

ಬುರುಡೆ ಗ್ಯಾಂಗ್‌ನಲ್ಲಿ ಬಿರುಕು: ಏನಾಗಿದೆ ಗೊತ್ತಾ?

ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…

1 hour ago

ದ್ವೇಷ ಭಾಷಣ ಪ್ರತಿಬಂಧನ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…

1 hour ago

ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…

2 hours ago

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರ ನಿಷೇಧ ಕಾನೂನು ಸ್ವಾಗತಾರ್ಹ

ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…

2 hours ago