• ಶ್ರೀಧರ್ ಆರ್.ಭಟ್
ನಂಜನಗೂಡು: 13 ವರ್ಷಗಳ ಹಿಂದೆ ಮೈಸೂರು ವಿಭಾಗದಿಂದ ಚಾಮರಾಜ ನಗರದ ಕೆಎಸ್ಆರ್ಟಿಸಿ ವಿಭಾಗಕ್ಕೆ ವಲಸೆ ಹೋಗಿದ್ದ ರಾಜ್ಯ ರಸ್ತೆ ಸಾರಿಗೆ ನಿಗಮದ ನಂಜನಗೂಡು ಘಟಕ ಇದೀಗ ಮತ್ತೆ ಮೈಸೂರು ವಿಭಾಗಕ್ಕೆ ಸೇರ್ಪಡೆಯಾಗುವುದರೊಂದಿಗೆ ತವರಿಗೆ ಮರಳಿದಂತಾಗಿದೆ.
2011ರಲ್ಲಿ ಚಾಮರಾಜನಗರದಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಕಾರ್ಯಾಲಯ ಹೊಸದಾಗಿ ಆರಂಭವಾದಾಗ ಮೈಸೂರು ಜಿಲ್ಲೆಯ ನಂಜನಗೂಡಿನ ಸಾರಿಗೆ ಡಿಪೊವನ್ನು ಅಲ್ಲಿಗೆ ಸೇರಿಸಲಾಗಿತ್ತು. ಆ ದಿನದಿಂದಲೂ ‘ಜಿಲ್ಲೆ ಮೈಸೂರು, ಸಾರಿಗೆ ಘಟಕ ಮಾತ್ರ ಚಾಮರಾಜನಗರಕ್ಕೆ ಏಕೆ? ನಮ್ಮನ್ನು ಮೈಸೂರು ವಿಭಾಗಕ್ಕೆ ಸೇರಿಸಿ’ ಎಂಬ ಕೂಗು ಪ್ರಯಾಣಿಕರಿಂದ ಕೇಳಿಬರುತ್ತಲೇ ಇತ್ತು.
ಹೊಸ ಬಸ್ ಬಾರದೆಯೇ ಹಳೆ ಬಸ್ ಗಳಿಂದಲೇ ಸ್ಥಾಪಿತವಾದ ರಾಜ್ಯದ ಏಕೈಕ ಸಾರಿಗೆ ಡಿಪೋ ಎಂಬ ಹಣೆಪಟ್ಟಿ ಹೊಂದಿದ್ದ ಇಲ್ಲಿನ ಡಿಪೊ ಚಾಮರಾಜನಗರ ವಿಭಾಗಕ್ಕೆ ಸೇರ್ಪಡೆಯಾದ ನಂತರವೂ ಹೊಸ ಬಸ್ ಇಲ್ಲದೆಯೇ ಪ್ರಯಾಣಿಕರ ಸೇವೆಯಲ್ಲಿ ಸಾಕಷ್ಟು ಸೊರಗಿತ್ತು.
ತಾಲ್ಲೂಕಿನ ಕೊರೊನಾ ನಂತರವಂತೂ ಕೆಟ್ಟು ಹೋದ ಬಸ್ಗಳು ಗುಜರಿಗೆ ಹರಾಜಾಗುವುದರೊಂದಿಗೆ ಶೇ.50ರಷ್ಟು ಬಸ್ ಗಳು ಇಲ್ಲಿ ಕಡಿಮೆಯಾಗಿ ಜಿಲ್ಲಾ ಕೇಂದ್ರ ಮೈಸೂರು ಹಾಗೂ ಗ್ರಾಮೀಣ ಭಾಗಗಳಿಗೆ ಬಸ್ ಸೌಕರ್ಯ ಕಲ್ಪಿಸಲಾಗದೆ ಸ್ಥಳೀಯ ಸಾರಿಗೆ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ಪ್ರಯಾಣಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಜನಪ್ರತಿನಿಧಿಗಳು ಸಿಕ್ಕಾಗಲೆಲ್ಲಾ ‘ನಮ್ಮೂರಿಗೆ ಬಸ್ ಬರುತ್ತಿಲ್ಲ ಬಸ್
ಕಳಿಸಿ’ ಎಂಬಬೇಡಿಕೆ ಮುಖ್ಯಮಂತ್ರಿಗಳು ಪ್ರತಿನಿಧಿಸುವ ವರುಣ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರದಾ ದ್ಯಂತ ಕೇಳಿ ಬರುತ್ತಿದ್ದರೂ ಬಸ್ಗಳ ಕೊರತೆಯಿಂದಾಗಿ ಜನಪ್ರತಿನಿಧಿಗಳು ಸೌಕರ್ಯಕಲ್ಪಿಸಲಾಗದೆ ಮೌನವಾಗಿದ್ದರು.
ಇದೀಗ ಜನವರಿ 1ರಿಂದ ನಂಜನಗೂಡು ಸಾರಿಗೆ ಡಿಪೊ ಮೈಸೂರು ವಿಭಾಗಕ್ಕೆ ಸೇರ್ಪಡೆಯಾಗುವುದರೊಂದಿಗೆ ಹೊಸ ಬಸ್ಗಳು ಮತ್ತು ಮೈಸೂರು ನಗರದ ವಿವಿಧ ಡಿಪೊಗಳಿಂದ ನಂಜನಗೂಡಿಗೆ ಬಸ್ ಸೌಲಭ್ಯ ನೀಡಲು ಚಿಂತಿಸಲಾಗಿದೆ. ಸದ್ಯದಲ್ಲೇ ಮೈಸೂರಿಗೆ ದಾಂಗುಡಿ ಇಡುವ ವಿದ್ಯುತ್ ಚಾಲಿತ ಬಸ್ಗಳ ಸೇವೆಯೂ ನಂಜನಗೂಡು ಪ್ರಯಾಣಿಕರಿಗೆ ದೊರೆಯಲಿದ್ದು, ನಂಜನಗೂಡು-ಮೈಸೂರು ಮಧ್ಯದ ಪ್ರಯಾಣಿಕರ ಗೋಳು ನಿವಾರಣೆಯಾಗಲಿದೆ ಎನ್ನಲಾಗಿದೆ.
ಅಲ್ಲಲ್ಲಿ ನಿಂತು ದುರಸ್ತಿಯಾಗುತ್ತಲೇ ಸಂಚರಿಸುವ 130 ಬಸ್ ಗಳು, 400ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಹೊಂದಿದ್ದ ಈ ಡಿಪೊದಲ್ಲಿ 60ಕ್ಕೂ ಹೆಚ್ಚು ಚಾಲಕರು, ನಿರ್ವಾಹಕರು, 20 ಮೆಕ್ಯಾನಿಕ್, 30ಕ್ಕೂ ಹೆಚ್ಚು ಸಿಬ್ಬಂದಿ ಕೊರತೆ ಇದ್ದು, ಅದು ಭರ್ತಿಯಾಗಿ ಹೊಸ ಬಸ್ಗಳು ಬಂದರೆ ನಂಜನಗೂಡು ಡಿಪೊ ಪರಿಪೂರ್ಣವಾಗಲಿದೆ ಎಂದು ಮಂಜುನಾಥ ನಿವೃತ್ತ ಸಾರಿಗೆ ನಿಗಮ ಸಿಬ್ಬಂದಿ ಹೇಳಿಕೆ ನೀಡಿದ್ದಾರೆ.
6 ತಿಂಗಳ ಸತತ ಪ್ರಯತ್ನದಿಂದ ಇದು ಸಾಧ್ಯವಾಗಿದೆ. ಚಾಮರಾಜನಗರ ಸಾರಿಗೆ ವಿಭಾಗದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಯಾಗುವ ಸಾರಿಗೆ ಡಿಪೊದಿಂದಾಗಿ ಹೊಸ ಬಸ್ಗಳ ಸೇವೆ ತಾಲ್ಲೂಕಿನ ಜನತೆಗೆ ಸಿಗಲಿದೆ. ವಿದ್ಯುತ್ ಚಾಲಿತ ಬಸ್ಗಳು ದಕ್ಷಿಣ ಕಾಶಿಗೆ ಬರುವುದರಿಂದ ನಮ್ಮ ಜನರ ಬಹುಕಾಲದ ಬೇಡಿಕೆ ಈಡೇರಿಂದಂತಾಗಿದೆ. ನಮ್ಮ ಆರು ತಿಂಗಳ ಪ್ರಯತ್ನದ ಫಲವಿದು. ಅದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಆಭಾರಿಯಾಗಿದ್ದೇನೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.
ನಿತ್ಯ 130 ಬಸ್ಗಳು 124 ಶೆಡ್ಯೂಲ್ಗಳಲ್ಲಿ ಸಂಚರಿಸುತ್ತಿರುವುದರಿಂದ ಸಾರಿಗೆ ನಿಗಮಕ್ಕೆ ಪ್ರತಿನಿತ್ಯ ಸರಾಸರಿ 19 ಲಕ್ಷ ರೂ. ಆದಾಯವಿದೆ. ದೈನಂದಿನ ಪಾಸುಗಳಿಂದಲೇ ದಿನಕ್ಕೆ 20 ಸಾವಿರ ರೂ. ಸಂದಾಯವಾಗುತ್ತಿದೆ. ಹೊಸ ಬಸ್ಗಳ ಆಗಮನದೊಂದಿಗೆ ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯ ದೊರೆಯುವುದರಿಂದ ಆದಾಯದಲ್ಲಿ ಏರಿಕೆಯಾಗಲಿದೆ ಎಂದು ನಂಜನಗೂಡು ಕೆಎಸ್ಆರ್ಟಿಸಿ ವ್ಯವಸ್ಥಾಪಕ ಪಿ.ತ್ಯಾಗರಾಜ್ ಹೇಳಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…