ಜಿಲ್ಲೆಗಳು

ನಾಲೆಯ ರಸ್ತೆಯಲ್ಲಿ ತ್ಯಾಜ್ಯದ ರಾಶಿ; ನೀರು ಕಲುಷಿತ

ಕಬಿನಿ ಬಲದಂಡೆ ನಾಲೆಯ ರಸ್ತೆಯುದ್ದಕ್ಕೂ ಮದ್ಯದ ಅಂಗಡಿಯ ತ್ಯಾಜ್ಯ; ಕ್ರಮ ಕೈಗೊಳ್ಳದ ಅಧಿಕಾರಿಗಳು

-ಶ್ರೀಧರ ಆರ್.ಭಟ್ಟ

ನಂಜನಗೂಡು: ತಾಲ್ಲೂಕಿನ ಹುಲ್ಲಹಳ್ಳಿ ಸಮೀಪದ ಕಬಿನಿ ಬಲದಂಡೆ ನಾಲೆಯ ಎಡ, ಬಲ ಸೇರಿದಂತೆ ನಾಲಾ ರಸ್ತೆಯುದ್ದಕ್ಕೂ ತ್ಯಾಜ್ಯಗಳು ಬಿದ್ದು ಕೊಳೆತು ನಾರಲಾರಂಭಿಸಿದೆ.
ಈ ತ್ಯಾಜ್ಯ ಪಕ್ಕದ ಕಬಿನಿ ನಾಲೆಗೂ ಸೇರಿ ನಾಲೆಯ ನೀರು ಸಹ ಕಲುಷಿತವಾಗುತ್ತಿದೆ. ವಿಶೇಷವೆಂದರೆ ಇಷ್ಟೊಂದು ಪ್ರಮಾಣದ ತ್ಯಾಜ್ಯ ಕೇವಲ ಮದ್ಯದ ಅಂಗಡಿಯದ್ದೇ ಆಗಿರುವುದು. ಇದು ಅಬಕಾರಿ ಲಾಬಿಗೆ ಸಾಕ್ಷಿ ಎನ್ನಲಾಗಿದೆ. ಜನಸಾಮಾನ್ಯರಿಗೆ ಮದ್ಯ ಕುಡಿಸಿ ಬದುಕು ಹಾಳು ಮಾಡುವ ಮದ್ಯದ ದೊರೆಗಳು ಈಗ ನಾಲಾ ಬದಿ ಮತ್ತು ರಸ್ತೆಯಲ್ಲಿ ತ್ಯಾಜ್ಯ ಸುರಿಯುವುದರ ಮೂಲಕ ಪರಿಸರ ನಾಶದೊಂದಿಗೆ ಮೂಕ ಪ್ರಾಣಿಗಳ ಜೀವಕ್ಕೆ ಕುತ್ತು ತರಲಾರಂಭಿಸಿದ್ದಾರೆ.

ರಾಶಿ ರಾಶಿ ತ್ಯಾಜ್ಯ ಕೊಳೆತು ನಾರುತ್ತಿದ್ದರೂ ನೀರಾವರಿ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕಂಡೂಕಾಣದಂತೆ ಕಣ್ಮುಚ್ಚಿ ಕುಳಿತಿರುವುದು ದುರಂತ. ಖಾಲಿಯಾದ ಮದ್ಯದ ಪ್ಯಾಕೆಟ್‌ಗಳು ಮಳೆ ಬಂದರೆ ಕೊಳೆತು ನಾರುತ್ತವೆ. ಬಿಸಿಲಾದರೆ ಗಾಳಿಗೆ ಹಾರಿ ಹೋಗಿ ಅಕ್ಕಪಕ್ಕದ ಜಮೀನುಗಳಿಗೆ ಸೇರಿ ಆ ರೈತರಿಗೆ ತೊಂದರೆ ನೀಡುತ್ತವೆ.

ಕೊಳೆತು ನಾರುತ್ತಿರುವ ಈ ಮದ್ಯದ ಪ್ಲಾಸ್ಟಿಕ್ ತ್ಯಾಜ್ಯ ಸೇವಿಸಿ ಮೂಕ ಪ್ರಾಣಿಗಳಾದ ಹಸು, ಎಮ್ಮೆ, ಕರು, ಮೇಕೆಗಳು ಬಲಿಯಾಗುತ್ತಿರುವ ಘಟನೆಗಳು ವರದಿಯಾಗತೊಡಗಿವೆ.
ಕಾರ್ಯ ಗ್ರಾಮದ ಸಮೀಪವಿರುವ ಹುಲ್ಲಹಳ್ಳಿ ಹೋಬಳಿ ಕೇಂದ್ರದ ಮದ್ಯದ ಅಂಗಡಿಯ ಮಾಲೀಕರ ದುರ್ನಡತೆಯಿಂದ ಕಾರ್ಯ ಗ್ರಾಮದ ಬಲದಂಡೆ ನಾಲೆಯ ಏರಿ ಸಂಪೂರ್ಣವಾಗಿ ಮದ್ಯದ ಪ್ಲಾಸ್ಟಿಕ್ ತ್ಯಾಜ್ಯದ ಸಂಗ್ರಹ ಸ್ಥಳವಾಗಿ ಮಾರ್ಪಾಡಾಗಿದೆ.
ಹುಲ್ಲಹಳ್ಳಿಯ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಕಾರ್ಯ ಗ್ರಾಮದ ಸುತ್ತಮುತ್ತಲ ಜಮೀನುಗಳ ರೈತರು ಮದ್ಯದಂಗಡಿಯ ಪ್ಲಾಸ್ಟಿಕ್ ಕೊಳೆತ ತ್ಯಾಜ್ಯವನ್ನು ತಡೆಹಿಡಿಯಲು ಸಾಕಷ್ಟು ಬಾರಿ ಮನವಿ ಮಾಡಿದ್ದಾರೆ. ಹಾಗೆೆುೀಂ ದುಗ್ಗಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಈ ತ್ಯಾಜ್ಯ ಸುರಿಯುತ್ತಿರುವವರ ಮೇಲೆ ಕಾನೂನು ಕ್ರಮ ಜರುಗಿಸಲು ಅಧಿಕಾರಿಗಳಿಗೆ ತಾಲ್ಲೂಕನ್ನು ಆವರಿಸಿಕೊಂಡಿರುವ ಅಬಕಾರಿ ಲಾಬಿಯ ಭಯ ಎನ್ನುತ್ತಾರೆ ಅಧಿಕಾರಿಗಳು.

ಅಧಿಕಾರಿಗಳ ಭಯ, ನಿರ್ಲಕ್ಷ್ಯ ನಡೆಯಿಂದ ಮೂಕ ಪ್ರಾಣಿಗಳು ಮತ್ತು ರೈತಾಪಿ ವರ್ಗ ವ್ಯಥೆ ಪಡುವಂತಾಗಿದೆ. ಇನ್ನಾದರೂ ಸಂಬಂಧಪಟ್ಟ ಉನ್ನತ ಮಟ್ಟದ ಅಧಿಕಾರಿಗಳು ಕಾರ್ಯ ಗ್ರಾಮದ ಬಲದಂಡೆ ನಾಲೆಯ ಏರಿ ಮೇಲೆ ಸಂಗ್ರಹವಾಗಿರುವ ಟನ್ ಗಟ್ಟಲೆ ಮದ್ಯದ ಅಂಗಡಿಯ ಪ್ಲಾಸ್ಟಿಕ್ ತ್ಯಾಜ್ಯವನ್ನು ತೆರವುಗೊಳಿಸಿ ರೈತರು ಮತ್ತು ಮೂಕ ಪ್ರಾಣಿಗಳ ಜೀವನವನ್ನು ರಕ್ಷಿಸಬೇಕಿದೆ.

ಈ ತ್ಯಾಜ್ಯದ ರಾಶಿಯಲ್ಲಿ ಆಹಾರ ಅರಸಿ ಬರುವ ಹಸು, ಕರುಗಳು, ಮೇಕೆಗಳು ಅದನ್ನು ತಿನ್ನುವುದರಿಂದ ಅವುಗಳ ಜೀವಕ್ಕೆ ಸಂಚಕಾರ ಎದುರಾಗಿದೆ. ದುಗ್ಗಹಳ್ಳಿ ಗ್ರಾಪಂ ಪಿಡಿಒ ಮತ್ತು ಅಧಿಕಾರಿಗಳು, ಕಬಿನಿ ನಾಲೆ  ವ್ಯಾಪ್ತಿಯ ಅಧಿಕಾರಿಗಳು ಇತ್ತ ಗಮನಹರಿಸಿ ತ್ಯಾಜ್ಯ ಬಿಸಾಡುವವರ ಮದ್ಯದ ಅಂಗಡಿಯವರ ವಿರುದ್ಧ ಕ್ರಮ ಕೈಗೊಳ್ಳಬೇಕು.
– ಬಸವರಾಜು, ಪಿಎಸಿಸಿಎಸ್‌ ಬ್ಯಾಂಕ್‌ ಮಾಜಿ ಅಧ್ಯಕ್ಷರು.

andolanait

Recent Posts

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

11 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

23 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

8 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

9 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

15 hours ago