ಜಿಲ್ಲೆಗಳು

ನಂಜನಗೂಡು : ಮಗನ ಸಾವಿಗೆ ನ್ಯಾಯ ಕೋರಿ ದಂಪತಿ ಪ್ರತಿಭಟನೆ

ನಂಜನಗೂಡು :  ಎರಡು ವರ್ಷಗಳ ಹಿಂದೆ ರಸ್ತೆ ಅಫಘಾತದಲ್ಲಿ ಮೃತನಾದ ಮಗನ ಸಾವಿಗೆ ಕಾರಣನಾದ ಆರೋಪಿಯನ್ನು ಈವರೆಗೂ ಬಂಧಿಸಿಲ್ಲ ಎಂದು ಆರೋಪಿಸಿ ಇಲ್ಲಿನ ಪುರಸಭೆಯ ಮಾಜಿ ಸದಸ್ಯರಾದ, ಬಿಜೆಪಿ ಮುಖಂಡರಾದ ಮಹೇಶ್ ಕುಮಾರ್ ಹಾಗೂ ಸುಧಾ ಮಹೇಶ್ ಕುಮಾರ ನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. ಪಾನಮತ್ತನಾಗಿ ಕಾರು ಚಲಾಯಿಸಿ ತಮ್ಮ ಮಗನ ಬೈಕಿಗೆ ಹಿಂಬದಿಯಿಂದ ಗುದ್ದಿ ಅಪಘಾತವೆಸಗಿದ ದಿಲೀಪ ಜೈನ್ ಎಂಬಾತನನ್ನು ಬಂಧಿಸಿ ಮಗನ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಸ್ಥಳಕ್ಕೆ ಆಗಮಿಸಿದ ಡಿವೈಎಸ್‌ಪಿ ಗೋವಿಂದರಾಜು ಆರೋಪಿಯನ್ನು ಪತ್ತೆಹಚ್ಚಲು ಇಲಾಖೆ ಈವರೆಗೆ ಕೈಗೊಂಡಿದ್ದ ಕ್ರಮಗಳನ್ನು ವಿವರಿಸಿದರು. ಆದರೆ, ವಾಹನಗಳೇ ಓಡಾಡದ ಕೊರೊನಾ ಸಮಯದಲ್ಲಿ ಆರೋಪಿ ಇಲ್ಲಿಂದ ಪರಾರಿಯಾಗಲು ಯಾರು ಕಾರಣ? ಆತ ಪರಾರಿಯಾದ ತಿಂಗಳಲ್ಲಿ ಆತನ ಕುಟುಂಬವೇ ತವರಿಗೆ ತೆರಳಿದೆ. ಆತನನ್ನು ಬಂಧಿಸಲು ಇಲಾಖೆ ಬದ್ಧವಾಗಿದೆಯೇ ಎಂದು ದಂಪತಿ ಪ್ರಶ್ನಿಸಿದರು. ನಂತರ ಎಎಸ್‌ಪಿ ನಂದಿನಿ ಮತ್ತು ಮುಖಂಡ ಯು.ಎನ್.ಪದ್ಮನಾಭರಾವ್ ಆಗಮಿಸಿ ಪ್ರತಿಭಟನಾಕಾರರನ್ನು ಸಮಾಧಾನಿಸಲು ಯತ್ನಿಸಿದರು. 1 ತಿಂಗಳಲ್ಲಿ ಆರೋಪಿಯನ್ನು ಹೆಡೆಮುರಿ ಕಟ್ಟಿ ತರುವುದಾಗಿ ನಂದಿನಿಯವರು ನೀಡಿದ ಭರವಸೆ ಮೇರೆಗೆ ಪ್ರತಿಭಟನೆಯನ್ನು ಮಹೇಶ ಕುಮಾರ್ ದಂಪತಿ ವಾಪಸ್ ಪಡೆದರು.

ಪ್ರತಿಭಟನೆಗೆ ಪುರಸಭೆಯ ಮಾಜಿ ಸದಸ್ಯರಾದ ಬಿಜೆಪಿಯ ಮಂಗಳ(ಗಜಾ), ಕೆ.ಜಿ.ಆನಂದ, ಹಾಲಿ ಸದಸ್ಯ ಸತ್ಯನಾರಾಯಣ ಕದಂ, ಪ್ರದೀಪ, ನಂಜನಗೂಡು ವಕೀಲರ ಸಂಘದ ಅಧ್ಯಕ್ಷ ಸುರೇಶ, ಮುರಳಿ, ನಾಗರಾಜು, ಉಮೇಶ (ಮೋದಿ) ಮಂಜುನಾಥ, ಗೋಪಿ ಇತರರು ಭಾಗಿಯಾಗಿದ್ದರು.

 

 

andolanait

Recent Posts

ನಮಗೂ ಸಚಿವ ಸ್ಥಾನ ಕೊಡಿ: ಸಂಪುಟ ಪುನಾರಚನೆಗೆ 24 ಎಂಎಲ್‌ಸಿಗಳಿಂದ ಪತ್ರ

ಬೆಂಗಳೂರು: ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಒತ್ತಾಯ ಮಾಡಿ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದ ಬೆನ್ನಲ್ಲೇ, ಇದೀಗ 24…

10 mins ago

ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ. ಈವರೆಗೂ ವಹಿಸಿದ ಎಲ್ಲಾ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಿ, ಅದನ್ನು ಸಾಬೀತು ಪಡಿಸಿದ್ದೇನೆ ಎಂದು…

15 mins ago

ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರದಲ್ಲಿ ಎಲ್ಲರೂ ಸೇರಿ ಚರ್ಚೆ ಮಾಡುತ್ತೇವೆ: ಎಚ್.ಡಿ.ದೇವೇಗೌಡ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿಗಳ ಚುನಾವಣೆಗಳಲ್ಲಿ ಎನ್‌ಡಿಎ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬ…

19 mins ago

ವಿರಾಜಪೇಟೆಯಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

ವಿರಾಜಪೇಟೆ: ವಿರಾಜಪೇಟೆಯಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇಂದು ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ…

25 mins ago

ನನ್ನ ಇಲಾಖೆಯಲ್ಲಿ 4 ಸಾವಿರ ಹುದ್ದೆಗಳಿಗೆ ನೇಮಕಾತಿ: ಸಚಿವ ಪರಮೇಶ್ವರ್‌

ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್‌ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್‌…

2 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು…

2 hours ago