ಜಿಲ್ಲೆಗಳು

ನಂಜನಗೂಡು : ಮಗನ ಸಾವಿಗೆ ನ್ಯಾಯ ಕೋರಿ ದಂಪತಿ ಪ್ರತಿಭಟನೆ

ನಂಜನಗೂಡು :  ಎರಡು ವರ್ಷಗಳ ಹಿಂದೆ ರಸ್ತೆ ಅಫಘಾತದಲ್ಲಿ ಮೃತನಾದ ಮಗನ ಸಾವಿಗೆ ಕಾರಣನಾದ ಆರೋಪಿಯನ್ನು ಈವರೆಗೂ ಬಂಧಿಸಿಲ್ಲ ಎಂದು ಆರೋಪಿಸಿ ಇಲ್ಲಿನ ಪುರಸಭೆಯ ಮಾಜಿ ಸದಸ್ಯರಾದ, ಬಿಜೆಪಿ ಮುಖಂಡರಾದ ಮಹೇಶ್ ಕುಮಾರ್ ಹಾಗೂ ಸುಧಾ ಮಹೇಶ್ ಕುಮಾರ ನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. ಪಾನಮತ್ತನಾಗಿ ಕಾರು ಚಲಾಯಿಸಿ ತಮ್ಮ ಮಗನ ಬೈಕಿಗೆ ಹಿಂಬದಿಯಿಂದ ಗುದ್ದಿ ಅಪಘಾತವೆಸಗಿದ ದಿಲೀಪ ಜೈನ್ ಎಂಬಾತನನ್ನು ಬಂಧಿಸಿ ಮಗನ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಸ್ಥಳಕ್ಕೆ ಆಗಮಿಸಿದ ಡಿವೈಎಸ್‌ಪಿ ಗೋವಿಂದರಾಜು ಆರೋಪಿಯನ್ನು ಪತ್ತೆಹಚ್ಚಲು ಇಲಾಖೆ ಈವರೆಗೆ ಕೈಗೊಂಡಿದ್ದ ಕ್ರಮಗಳನ್ನು ವಿವರಿಸಿದರು. ಆದರೆ, ವಾಹನಗಳೇ ಓಡಾಡದ ಕೊರೊನಾ ಸಮಯದಲ್ಲಿ ಆರೋಪಿ ಇಲ್ಲಿಂದ ಪರಾರಿಯಾಗಲು ಯಾರು ಕಾರಣ? ಆತ ಪರಾರಿಯಾದ ತಿಂಗಳಲ್ಲಿ ಆತನ ಕುಟುಂಬವೇ ತವರಿಗೆ ತೆರಳಿದೆ. ಆತನನ್ನು ಬಂಧಿಸಲು ಇಲಾಖೆ ಬದ್ಧವಾಗಿದೆಯೇ ಎಂದು ದಂಪತಿ ಪ್ರಶ್ನಿಸಿದರು. ನಂತರ ಎಎಸ್‌ಪಿ ನಂದಿನಿ ಮತ್ತು ಮುಖಂಡ ಯು.ಎನ್.ಪದ್ಮನಾಭರಾವ್ ಆಗಮಿಸಿ ಪ್ರತಿಭಟನಾಕಾರರನ್ನು ಸಮಾಧಾನಿಸಲು ಯತ್ನಿಸಿದರು. 1 ತಿಂಗಳಲ್ಲಿ ಆರೋಪಿಯನ್ನು ಹೆಡೆಮುರಿ ಕಟ್ಟಿ ತರುವುದಾಗಿ ನಂದಿನಿಯವರು ನೀಡಿದ ಭರವಸೆ ಮೇರೆಗೆ ಪ್ರತಿಭಟನೆಯನ್ನು ಮಹೇಶ ಕುಮಾರ್ ದಂಪತಿ ವಾಪಸ್ ಪಡೆದರು.

ಪ್ರತಿಭಟನೆಗೆ ಪುರಸಭೆಯ ಮಾಜಿ ಸದಸ್ಯರಾದ ಬಿಜೆಪಿಯ ಮಂಗಳ(ಗಜಾ), ಕೆ.ಜಿ.ಆನಂದ, ಹಾಲಿ ಸದಸ್ಯ ಸತ್ಯನಾರಾಯಣ ಕದಂ, ಪ್ರದೀಪ, ನಂಜನಗೂಡು ವಕೀಲರ ಸಂಘದ ಅಧ್ಯಕ್ಷ ಸುರೇಶ, ಮುರಳಿ, ನಾಗರಾಜು, ಉಮೇಶ (ಮೋದಿ) ಮಂಜುನಾಥ, ಗೋಪಿ ಇತರರು ಭಾಗಿಯಾಗಿದ್ದರು.

 

 

andolanait

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

4 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

4 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

4 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

4 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

4 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

5 hours ago