ನಂಜನಗೂಡು : ಎರಡು ವರ್ಷಗಳ ಹಿಂದೆ ರಸ್ತೆ ಅಫಘಾತದಲ್ಲಿ ಮೃತನಾದ ಮಗನ ಸಾವಿಗೆ ಕಾರಣನಾದ ಆರೋಪಿಯನ್ನು ಈವರೆಗೂ ಬಂಧಿಸಿಲ್ಲ ಎಂದು ಆರೋಪಿಸಿ ಇಲ್ಲಿನ ಪುರಸಭೆಯ ಮಾಜಿ ಸದಸ್ಯರಾದ, ಬಿಜೆಪಿ ಮುಖಂಡರಾದ ಮಹೇಶ್ ಕುಮಾರ್ ಹಾಗೂ ಸುಧಾ ಮಹೇಶ್ ಕುಮಾರ ನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. ಪಾನಮತ್ತನಾಗಿ ಕಾರು ಚಲಾಯಿಸಿ ತಮ್ಮ ಮಗನ ಬೈಕಿಗೆ ಹಿಂಬದಿಯಿಂದ ಗುದ್ದಿ ಅಪಘಾತವೆಸಗಿದ ದಿಲೀಪ ಜೈನ್ ಎಂಬಾತನನ್ನು ಬಂಧಿಸಿ ಮಗನ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಸ್ಥಳಕ್ಕೆ ಆಗಮಿಸಿದ ಡಿವೈಎಸ್ಪಿ ಗೋವಿಂದರಾಜು ಆರೋಪಿಯನ್ನು ಪತ್ತೆಹಚ್ಚಲು ಇಲಾಖೆ ಈವರೆಗೆ ಕೈಗೊಂಡಿದ್ದ ಕ್ರಮಗಳನ್ನು ವಿವರಿಸಿದರು. ಆದರೆ, ವಾಹನಗಳೇ ಓಡಾಡದ ಕೊರೊನಾ ಸಮಯದಲ್ಲಿ ಆರೋಪಿ ಇಲ್ಲಿಂದ ಪರಾರಿಯಾಗಲು ಯಾರು ಕಾರಣ? ಆತ ಪರಾರಿಯಾದ ತಿಂಗಳಲ್ಲಿ ಆತನ ಕುಟುಂಬವೇ ತವರಿಗೆ ತೆರಳಿದೆ. ಆತನನ್ನು ಬಂಧಿಸಲು ಇಲಾಖೆ ಬದ್ಧವಾಗಿದೆಯೇ ಎಂದು ದಂಪತಿ ಪ್ರಶ್ನಿಸಿದರು. ನಂತರ ಎಎಸ್ಪಿ ನಂದಿನಿ ಮತ್ತು ಮುಖಂಡ ಯು.ಎನ್.ಪದ್ಮನಾಭರಾವ್ ಆಗಮಿಸಿ ಪ್ರತಿಭಟನಾಕಾರರನ್ನು ಸಮಾಧಾನಿಸಲು ಯತ್ನಿಸಿದರು. 1 ತಿಂಗಳಲ್ಲಿ ಆರೋಪಿಯನ್ನು ಹೆಡೆಮುರಿ ಕಟ್ಟಿ ತರುವುದಾಗಿ ನಂದಿನಿಯವರು ನೀಡಿದ ಭರವಸೆ ಮೇರೆಗೆ ಪ್ರತಿಭಟನೆಯನ್ನು ಮಹೇಶ ಕುಮಾರ್ ದಂಪತಿ ವಾಪಸ್ ಪಡೆದರು.
ಪ್ರತಿಭಟನೆಗೆ ಪುರಸಭೆಯ ಮಾಜಿ ಸದಸ್ಯರಾದ ಬಿಜೆಪಿಯ ಮಂಗಳ(ಗಜಾ), ಕೆ.ಜಿ.ಆನಂದ, ಹಾಲಿ ಸದಸ್ಯ ಸತ್ಯನಾರಾಯಣ ಕದಂ, ಪ್ರದೀಪ, ನಂಜನಗೂಡು ವಕೀಲರ ಸಂಘದ ಅಧ್ಯಕ್ಷ ಸುರೇಶ, ಮುರಳಿ, ನಾಗರಾಜು, ಉಮೇಶ (ಮೋದಿ) ಮಂಜುನಾಥ, ಗೋಪಿ ಇತರರು ಭಾಗಿಯಾಗಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…