ಜಿಲ್ಲೆಗಳು

ನಂಜನಗೂಡು : ಮಗನ ಸಾವಿಗೆ ನ್ಯಾಯ ಕೋರಿ ದಂಪತಿ ಪ್ರತಿಭಟನೆ

ನಂಜನಗೂಡು :  ಎರಡು ವರ್ಷಗಳ ಹಿಂದೆ ರಸ್ತೆ ಅಫಘಾತದಲ್ಲಿ ಮೃತನಾದ ಮಗನ ಸಾವಿಗೆ ಕಾರಣನಾದ ಆರೋಪಿಯನ್ನು ಈವರೆಗೂ ಬಂಧಿಸಿಲ್ಲ ಎಂದು ಆರೋಪಿಸಿ ಇಲ್ಲಿನ ಪುರಸಭೆಯ ಮಾಜಿ ಸದಸ್ಯರಾದ, ಬಿಜೆಪಿ ಮುಖಂಡರಾದ ಮಹೇಶ್ ಕುಮಾರ್ ಹಾಗೂ ಸುಧಾ ಮಹೇಶ್ ಕುಮಾರ ನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. ಪಾನಮತ್ತನಾಗಿ ಕಾರು ಚಲಾಯಿಸಿ ತಮ್ಮ ಮಗನ ಬೈಕಿಗೆ ಹಿಂಬದಿಯಿಂದ ಗುದ್ದಿ ಅಪಘಾತವೆಸಗಿದ ದಿಲೀಪ ಜೈನ್ ಎಂಬಾತನನ್ನು ಬಂಧಿಸಿ ಮಗನ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಸ್ಥಳಕ್ಕೆ ಆಗಮಿಸಿದ ಡಿವೈಎಸ್‌ಪಿ ಗೋವಿಂದರಾಜು ಆರೋಪಿಯನ್ನು ಪತ್ತೆಹಚ್ಚಲು ಇಲಾಖೆ ಈವರೆಗೆ ಕೈಗೊಂಡಿದ್ದ ಕ್ರಮಗಳನ್ನು ವಿವರಿಸಿದರು. ಆದರೆ, ವಾಹನಗಳೇ ಓಡಾಡದ ಕೊರೊನಾ ಸಮಯದಲ್ಲಿ ಆರೋಪಿ ಇಲ್ಲಿಂದ ಪರಾರಿಯಾಗಲು ಯಾರು ಕಾರಣ? ಆತ ಪರಾರಿಯಾದ ತಿಂಗಳಲ್ಲಿ ಆತನ ಕುಟುಂಬವೇ ತವರಿಗೆ ತೆರಳಿದೆ. ಆತನನ್ನು ಬಂಧಿಸಲು ಇಲಾಖೆ ಬದ್ಧವಾಗಿದೆಯೇ ಎಂದು ದಂಪತಿ ಪ್ರಶ್ನಿಸಿದರು. ನಂತರ ಎಎಸ್‌ಪಿ ನಂದಿನಿ ಮತ್ತು ಮುಖಂಡ ಯು.ಎನ್.ಪದ್ಮನಾಭರಾವ್ ಆಗಮಿಸಿ ಪ್ರತಿಭಟನಾಕಾರರನ್ನು ಸಮಾಧಾನಿಸಲು ಯತ್ನಿಸಿದರು. 1 ತಿಂಗಳಲ್ಲಿ ಆರೋಪಿಯನ್ನು ಹೆಡೆಮುರಿ ಕಟ್ಟಿ ತರುವುದಾಗಿ ನಂದಿನಿಯವರು ನೀಡಿದ ಭರವಸೆ ಮೇರೆಗೆ ಪ್ರತಿಭಟನೆಯನ್ನು ಮಹೇಶ ಕುಮಾರ್ ದಂಪತಿ ವಾಪಸ್ ಪಡೆದರು.

ಪ್ರತಿಭಟನೆಗೆ ಪುರಸಭೆಯ ಮಾಜಿ ಸದಸ್ಯರಾದ ಬಿಜೆಪಿಯ ಮಂಗಳ(ಗಜಾ), ಕೆ.ಜಿ.ಆನಂದ, ಹಾಲಿ ಸದಸ್ಯ ಸತ್ಯನಾರಾಯಣ ಕದಂ, ಪ್ರದೀಪ, ನಂಜನಗೂಡು ವಕೀಲರ ಸಂಘದ ಅಧ್ಯಕ್ಷ ಸುರೇಶ, ಮುರಳಿ, ನಾಗರಾಜು, ಉಮೇಶ (ಮೋದಿ) ಮಂಜುನಾಥ, ಗೋಪಿ ಇತರರು ಭಾಗಿಯಾಗಿದ್ದರು.

 

 

andolanait

Recent Posts

ಮಹಿಳಾ ಮೀಸಲಾತಿ ಕಾಯ್ದೆ ಏ.16 ರಿಂದಲೇ ಜಾರಿ

ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…

7 mins ago

ಮೈಸೂರು | ಚಿರತೆ ಸೆರೆ ; ನಿಟ್ಟುಸಿರುಬಿಟ್ಟ ಕುಟುಂಬಸ್ಥರು

ಮೈಸೂರು : ನಗರದ ಹೃದಯ ಭಾಗವಾದ ಸಿದ್ದಾರ್ಥ ನಗರದ ಸುರೇಶ್‌ ಎಂಬುವವರ ಮನೆಗೆ ಏಕಾಏಕಿ ನುಗ್ಗಿದ ಚಿರತೆಯನ್ನು ಅರಣ್ಯ ಇಲಾಖೆ…

16 mins ago

ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣ ರಾಜ್ಯಗಳಿಗೆ ಅನ್ಯಾಯ ; ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಕ್ಷೇಪ

ಮೈಸೂರು : ಡಿಲಿಮಿಟೇಶನ್ ಕಾಯ್ದೆ (ಕ್ಷೇತ್ರ ಪುನರ್ವಿಂಗಡಣೆ ಕಾಯ್ದೆ)ಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್…

26 mins ago

ಸಮೃದ್ಧೀಕರಿಸಿದ ಯುರೇನಿಯಂ ಹಸ್ತಾಂತರಿಸಲು ಇರಾನ್ ಒಪ್ಪಿದೆ : ಟ್ರಂಪ್

ವಾಷಿಂಗ್ಟನ್ : ಇರಾನ್ ತನ್ನ ಬಳಿಯಿರುವ ಸಮೃದ್ಧೀಕರಿಸಿದ ಯುರೇನಿಯಂ ಸಂಗ್ರಹವನ್ನು ಅಮೆರಿಕಕ್ಕೆ ಹಸ್ತಾಂತರಿಸಲು ಒಪ್ಪಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

36 mins ago

ಮೈೂಸೂರು ವಿ.ವಿ ಕುಲಪತಿ ವಿರುದ್ಧ ಎಫ್‌ಐಆರ್‌ ದಾಖಲಿಸಲು ಸೂಚನೆ

ಮೈಸೂರು : ಮೈಸೂರು ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗೆ ಜಾತಿ ಆಧಾರಿತ ಮಾನಸಿಕ ಕಿರುಕುಳ ನೀಡಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ…

1 hour ago

ಯೋಗೇಶ್ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು : ಯೋಗೇಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ಕೊನೆಗೂ ಶಿಕ್ಷೆ ಪ್ರಕಟವಾಗಿದೆ. 17ನೇ ಆರೋಪಿ ಕಾಂಗ್ರೆಸ್ ಶಾಸಕ ವಿನಯ್…

3 hours ago