ನಂಜನಗೂಡು : ಎರಡು ವರ್ಷಗಳ ಹಿಂದೆ ರಸ್ತೆ ಅಫಘಾತದಲ್ಲಿ ಮೃತನಾದ ಮಗನ ಸಾವಿಗೆ ಕಾರಣನಾದ ಆರೋಪಿಯನ್ನು ಈವರೆಗೂ ಬಂಧಿಸಿಲ್ಲ ಎಂದು ಆರೋಪಿಸಿ ಇಲ್ಲಿನ ಪುರಸಭೆಯ ಮಾಜಿ ಸದಸ್ಯರಾದ, ಬಿಜೆಪಿ ಮುಖಂಡರಾದ ಮಹೇಶ್ ಕುಮಾರ್ ಹಾಗೂ ಸುಧಾ ಮಹೇಶ್ ಕುಮಾರ ನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. ಪಾನಮತ್ತನಾಗಿ ಕಾರು ಚಲಾಯಿಸಿ ತಮ್ಮ ಮಗನ ಬೈಕಿಗೆ ಹಿಂಬದಿಯಿಂದ ಗುದ್ದಿ ಅಪಘಾತವೆಸಗಿದ ದಿಲೀಪ ಜೈನ್ ಎಂಬಾತನನ್ನು ಬಂಧಿಸಿ ಮಗನ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಸ್ಥಳಕ್ಕೆ ಆಗಮಿಸಿದ ಡಿವೈಎಸ್ಪಿ ಗೋವಿಂದರಾಜು ಆರೋಪಿಯನ್ನು ಪತ್ತೆಹಚ್ಚಲು ಇಲಾಖೆ ಈವರೆಗೆ ಕೈಗೊಂಡಿದ್ದ ಕ್ರಮಗಳನ್ನು ವಿವರಿಸಿದರು. ಆದರೆ, ವಾಹನಗಳೇ ಓಡಾಡದ ಕೊರೊನಾ ಸಮಯದಲ್ಲಿ ಆರೋಪಿ ಇಲ್ಲಿಂದ ಪರಾರಿಯಾಗಲು ಯಾರು ಕಾರಣ? ಆತ ಪರಾರಿಯಾದ ತಿಂಗಳಲ್ಲಿ ಆತನ ಕುಟುಂಬವೇ ತವರಿಗೆ ತೆರಳಿದೆ. ಆತನನ್ನು ಬಂಧಿಸಲು ಇಲಾಖೆ ಬದ್ಧವಾಗಿದೆಯೇ ಎಂದು ದಂಪತಿ ಪ್ರಶ್ನಿಸಿದರು. ನಂತರ ಎಎಸ್ಪಿ ನಂದಿನಿ ಮತ್ತು ಮುಖಂಡ ಯು.ಎನ್.ಪದ್ಮನಾಭರಾವ್ ಆಗಮಿಸಿ ಪ್ರತಿಭಟನಾಕಾರರನ್ನು ಸಮಾಧಾನಿಸಲು ಯತ್ನಿಸಿದರು. 1 ತಿಂಗಳಲ್ಲಿ ಆರೋಪಿಯನ್ನು ಹೆಡೆಮುರಿ ಕಟ್ಟಿ ತರುವುದಾಗಿ ನಂದಿನಿಯವರು ನೀಡಿದ ಭರವಸೆ ಮೇರೆಗೆ ಪ್ರತಿಭಟನೆಯನ್ನು ಮಹೇಶ ಕುಮಾರ್ ದಂಪತಿ ವಾಪಸ್ ಪಡೆದರು.
ಪ್ರತಿಭಟನೆಗೆ ಪುರಸಭೆಯ ಮಾಜಿ ಸದಸ್ಯರಾದ ಬಿಜೆಪಿಯ ಮಂಗಳ(ಗಜಾ), ಕೆ.ಜಿ.ಆನಂದ, ಹಾಲಿ ಸದಸ್ಯ ಸತ್ಯನಾರಾಯಣ ಕದಂ, ಪ್ರದೀಪ, ನಂಜನಗೂಡು ವಕೀಲರ ಸಂಘದ ಅಧ್ಯಕ್ಷ ಸುರೇಶ, ಮುರಳಿ, ನಾಗರಾಜು, ಉಮೇಶ (ಮೋದಿ) ಮಂಜುನಾಥ, ಗೋಪಿ ಇತರರು ಭಾಗಿಯಾಗಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…