ಜಿಲ್ಲೆಗಳು

ನಂಜನಗೂಡು : ಮಗನ ಸಾವಿಗೆ ನ್ಯಾಯ ಕೋರಿ ದಂಪತಿ ಪ್ರತಿಭಟನೆ

ನಂಜನಗೂಡು :  ಎರಡು ವರ್ಷಗಳ ಹಿಂದೆ ರಸ್ತೆ ಅಫಘಾತದಲ್ಲಿ ಮೃತನಾದ ಮಗನ ಸಾವಿಗೆ ಕಾರಣನಾದ ಆರೋಪಿಯನ್ನು ಈವರೆಗೂ ಬಂಧಿಸಿಲ್ಲ ಎಂದು ಆರೋಪಿಸಿ ಇಲ್ಲಿನ ಪುರಸಭೆಯ ಮಾಜಿ ಸದಸ್ಯರಾದ, ಬಿಜೆಪಿ ಮುಖಂಡರಾದ ಮಹೇಶ್ ಕುಮಾರ್ ಹಾಗೂ ಸುಧಾ ಮಹೇಶ್ ಕುಮಾರ ನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. ಪಾನಮತ್ತನಾಗಿ ಕಾರು ಚಲಾಯಿಸಿ ತಮ್ಮ ಮಗನ ಬೈಕಿಗೆ ಹಿಂಬದಿಯಿಂದ ಗುದ್ದಿ ಅಪಘಾತವೆಸಗಿದ ದಿಲೀಪ ಜೈನ್ ಎಂಬಾತನನ್ನು ಬಂಧಿಸಿ ಮಗನ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಸ್ಥಳಕ್ಕೆ ಆಗಮಿಸಿದ ಡಿವೈಎಸ್‌ಪಿ ಗೋವಿಂದರಾಜು ಆರೋಪಿಯನ್ನು ಪತ್ತೆಹಚ್ಚಲು ಇಲಾಖೆ ಈವರೆಗೆ ಕೈಗೊಂಡಿದ್ದ ಕ್ರಮಗಳನ್ನು ವಿವರಿಸಿದರು. ಆದರೆ, ವಾಹನಗಳೇ ಓಡಾಡದ ಕೊರೊನಾ ಸಮಯದಲ್ಲಿ ಆರೋಪಿ ಇಲ್ಲಿಂದ ಪರಾರಿಯಾಗಲು ಯಾರು ಕಾರಣ? ಆತ ಪರಾರಿಯಾದ ತಿಂಗಳಲ್ಲಿ ಆತನ ಕುಟುಂಬವೇ ತವರಿಗೆ ತೆರಳಿದೆ. ಆತನನ್ನು ಬಂಧಿಸಲು ಇಲಾಖೆ ಬದ್ಧವಾಗಿದೆಯೇ ಎಂದು ದಂಪತಿ ಪ್ರಶ್ನಿಸಿದರು. ನಂತರ ಎಎಸ್‌ಪಿ ನಂದಿನಿ ಮತ್ತು ಮುಖಂಡ ಯು.ಎನ್.ಪದ್ಮನಾಭರಾವ್ ಆಗಮಿಸಿ ಪ್ರತಿಭಟನಾಕಾರರನ್ನು ಸಮಾಧಾನಿಸಲು ಯತ್ನಿಸಿದರು. 1 ತಿಂಗಳಲ್ಲಿ ಆರೋಪಿಯನ್ನು ಹೆಡೆಮುರಿ ಕಟ್ಟಿ ತರುವುದಾಗಿ ನಂದಿನಿಯವರು ನೀಡಿದ ಭರವಸೆ ಮೇರೆಗೆ ಪ್ರತಿಭಟನೆಯನ್ನು ಮಹೇಶ ಕುಮಾರ್ ದಂಪತಿ ವಾಪಸ್ ಪಡೆದರು.

ಪ್ರತಿಭಟನೆಗೆ ಪುರಸಭೆಯ ಮಾಜಿ ಸದಸ್ಯರಾದ ಬಿಜೆಪಿಯ ಮಂಗಳ(ಗಜಾ), ಕೆ.ಜಿ.ಆನಂದ, ಹಾಲಿ ಸದಸ್ಯ ಸತ್ಯನಾರಾಯಣ ಕದಂ, ಪ್ರದೀಪ, ನಂಜನಗೂಡು ವಕೀಲರ ಸಂಘದ ಅಧ್ಯಕ್ಷ ಸುರೇಶ, ಮುರಳಿ, ನಾಗರಾಜು, ಉಮೇಶ (ಮೋದಿ) ಮಂಜುನಾಥ, ಗೋಪಿ ಇತರರು ಭಾಗಿಯಾಗಿದ್ದರು.

 

 

andolanait

Recent Posts

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

6 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

9 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

11 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

11 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

12 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

15 hours ago