ಮೈಸೂರು: ನಂಜನಗೂಡು ಶ್ರೀ ನಂಜುಂಡೇಶ್ವರ ಒಂದೇ ತಿಂಗಳಿನಲ್ಲಿ ಕೋಟ್ಯಧೀಶ್ವರನಾಗಿದ್ದಾನೆ. ದೇವಾಲಯದ ದಾಸೋಹ ಭವನದಲ್ಲಿ ಶುಕ್ರವಾರ 34 ನಂಜುಂಡೇಶ್ವರನ ಹುಂಡಿಗಳ ಎಣಿಕೆ ಕಾರ್ಯ ನಡೆದಿದ್ದು, 1,35,58,975 ರೂ. ಸಂಗ್ರಹವಾಗಿದೆ.
ಇದರಲ್ಲಿ 131 ಗ್ರಾಂ ಚಿನ್ನ, 4 ಕೆಜಿ 100 ಗ್ರಾಂ ಬೆಳ್ಳಿ, 35 ವಿದೇಶಿ ಕರೆನ್ಸಿ ನಂಜುಂಡೇಶ್ವರನಿಗೆ ಕಾಣಿಕೆಯಾಗಿ ಬಂದಿದೆ. ಪ್ರತಿ ತಿಂಗಳು ಹುಂಡಿ ಎಣಿಕೆಯಲ್ಲಿ ನಿಷೇಧಿತ ನೋಟು ಪತ್ತೆಯಾಗುತ್ತಿತ್ತು. ಆದರೆ, ಈಗ ಎಣಿಕೆ ಮಾಡಿದಾಗ ಅಂತಹ ನೋಟುಗಳು ಕಂಡುಬಂದಿಲ್ಲ. ಹುಂಡಿ ಎಣಿಕೆ ಕಾರ್ಯದಲ್ಲಿ ಸ್ವಸಹಾಯ ಸಂಘದ ಮಹಿಳೆಯರು ಹಾಗೂ ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು.
ನಂಜನಗೂಡು ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಕೋಟ್ಯಂತರ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…