ನಂಜನಗೂಡು: ತಾಲೂಕು ಬ್ರಾಹ್ಮಣ ಧರ್ಮ ಸಹಾಯಕ ಸಭಾ ವತಿಯಿಂದ ಈ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ ೯೦ ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುತ್ತಿದ್ದು, ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಶೇ ೯೦ ಕ್ಕಿಂತ ಹೆಚ್ಚು ಅಂಕ ಪಡೆದಿದ್ದಲ್ಲಿ ಭಾವಚಿತ್ರ, ಅಂಕಪಟ್ಟಿ ಹಾಗೂ ಆಧಾರ ಕಾರ್ಡ್ ಪ್ರತಿಯೊಡನೆ ಅ.೫ರೊಳಗೆ ತಾಲ್ಲೂಕು ಬ್ರಾಹ್ಮಣ ಧರ್ಮ ಸಹಾಯಕ ಸಭಾ ಅಧ್ಯಕ್ಷ ಆರ್.ಗೋವರ್ಧನ್ ಅವರಿಗೆ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಗಿರೀಶ (೭೮೯೨೪೫೬೮೭೦), ಉಮೇಶ (೯೯೪೫೬೨೨೧೬೪), ಶ್ರೀನಿವಾಸ್ (೭೬೭೬೯೬೯೬೯೪) ಅವರನ್ನು ಸಂಪರ್ಕಿಸಬಹುದು.





