ಜಿಲ್ಲೆಗಳು

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಈ ಬಗ್ಗೆ ಬಹಿರಂಗವಾಗಿ ಚರ್ಚಿಸುವುದು ಸೂಕ್ತವಲ್ಲ -ಸಿಎಂ ಬೊಮ್ಮಾಯಿ

ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಂಜನಗೋಡಿಗೆ ಭೇಟಿ ನೀಡಿದ್ದು,ಶ್ರೀಕಂಠೇಶ್ವರ ದೇವಸ್ಥಾನದ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ, ನುಗು ಹಾಗೂ ಹೇಡಿಯಾಳ ಏತ ನೀರಾವರಿ ಯೋಜನೆಗೆ ಚಾಲನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದ್ದಾರೆ.


ನವೆಂಬರ್ 29 ರಂದು ನವದೆಹಲಿಗೆ ತೆರಳಲಿದ್ದು, ಹಿರಿಯ ವಕೀಲರಾದ ಶ್ರೀ ಮುಕುಲ್ ರೋಹಟಗಿಯವರನ್ನು ಭೇಟಿಯಾಗಲಿದ್ದು, ಗಡಿವಿಚಾರದ ಬಗ್ಗೆ ಚರ್ಚೆ ಹಾಗೂ ಕೇಂದ್ರ ಕೈಗಾರಿಕಾ ಸಚಿವರು, ಜಲಸಂಪನ್ಮೂಲ ಸಚಿವರನ್ನೂ ಸಹ ಭೇಟಿಯಾಗುವ ಉದ್ದೇಶವಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು  ಮಹಾರಾಷ್ಟ್ರದೊಂದಿಗಿನ ಗಡಿವಿವಾದಕ್ಕೆ ಸಂಬಂಧಪಟ್ಟಂತೆ ಇದೇ 30 ರಂದು ಸರ್ವೋಚ್ಛ ನ್ಯಾಯಾಲಯದಲ್ಲಿ ವಿಚಾರಣೆ ಇದೆ. ಕರ್ನಾಟಕ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಮೂರ್ತಿಗಳಾದ ಶಿವರಾಜಪಾಟೀಲ್ ಅವರನ್ನು ನೇಮಿಸಲಾಗಿದ್ದು, ಸಭೆ ಕೂಡ ನಡೆಸಲಾಗಿದೆ. ನವೆಂಬರ್ 30 ರಂದು ಗಡಿ ವಿಚಾರದ ಬಗ್ಗೆ ಕಾನೂನು ಸಮರಕ್ಕೆ ರಾಜ್ಯ ಸಿದ್ಧವಿದ್ದು, ರಾಜ್ಯದ ನಿಲುವು, ಕಾನೂನುಗಳ ಬಗ್ಗೆ ವಾದ ಮಂಡಿಸಲಾಗುವುದು. ಮಹಾರಾಷ್ಟ್ರದ ಗಡಿಭಾಗದ ಗ್ರಾಮದ ಜನರು, ಕರ್ನಾಟಕಕ್ಕೆ ಸೇರುವುದಾಗಿ ಮನವಿ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಷಯ ಸದ್ಯಕ್ಕೆ ನ್ಯಾಯಾಲಯದಲ್ಲಿರುವುದರಿಂದ ಈ ವಿಷಯದ ಕುರಿತು ಬಹಿರಂಗವಾಗಿ ಚರ್ಚಿಸುವುದು ಸೂಕ್ತವಲ್ಲ ಎಂದರು.

ಮಂಡ್ಯ ಹಾಗೂ ಮೈಸೂರಿನಲ್ಲಿ ಭತ್ತ ಖರೀದಿ ಕೇಂದ್ರ :
ಭತ್ತ ಖರೀದಿ ಕೇಂದ್ರವನ್ನು ಮಂಗಳೂರಿನಲ್ಲಿ ಮಾತ್ರ ತೆರೆಯಲಾಗಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಮಂಗಳೂರಿನಲ್ಲಿ ಕುಚ್ಚಲಕ್ಕಿಯನ್ನು ಜನರು ಬಳಸುವುದರಿಂದ , ಈ ಭಾಗದಲ್ಲಿ ಕುಚ್ಚಲಕ್ಕಿಯ ಖರೀದಿ ಮಾಡಲಾಗುತ್ತಿದೆ.ಭತ್ತವನ್ನು ರಾಜ್ಯದೆಲ್ಲೆಡೆಯಿಂದ ಖರೀದಿಸಲಾಗುವುದು. ಉತ್ತರ ಕರ್ನಾಟಕದಲ್ಲಿ ಗಂಗಾವತಿ, ಸಿಂದನೂರು, ಮಂಡ್ಯ ಹಾಗೂ ಮೈಸೂರುಗಳಲ್ಲಿಯೂ ಖರೀದಿಸಲಾಗುವುದು ಎಂದರು.

ಸಂವಿಧಾನದ ಚೌಕಟ್ಟಿನೊಳಗೆ ಕ್ರಮ :
ಹಿಂದುಳಿದ ವರ್ಗದ ಮೀಸಲಾತಿಗೆ ಸಂಬಂಧಿಸಿದಂತೆ, ಎಲ್ಲ ಸಮುದಾಯಗಳ ಆಕಾಂಕ್ಷೆಗಳು ಹೆಚ್ಚಾಗಿದೆ. ಆದರೆ ಸಂವಿಧಾನದ ಚೌಕಟ್ಟಿನೊಳಗೆ ಎಲ್ಲ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಹಿಂದುಳಿದ ವರ್ಗ ಆಯೋಗವಿದೆ. ಸಮುದಾಯಗಳ ಮೀಸಲಾತಿ ಹೆಚ್ಚಳ ಮನವಿಯನ್ನು ಮೊದಲು ಪರಿಶೀಲಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ತನಿಖೆಯ ನಂತರ ವಿಷಯಗಳು ಸ್ಪಷ್ಟವಾಗಲಿವೆ :
ಬೆಂಗಳೂರಿನಲ್ಲಿ ವೆಬ್ ಸೈಟೊಂದರ ಮೂಲಕ ನಕಲಿ ಆಧಾರ್ ಕಾರ್ಡ್, ವೋಟರ್ ಐಡಿಯನ್ನು ಪಡೆಯಬಹುದು, ಮಂಗಳೂರಿನ ಬಾಂಬ್ ಪ್ರಕರಣದ ಪ್ರಮುಖ ಆರೋಪಿ ಶಾರೀಖ್ ಕೂಡ ಇಂತಹದೇ ನಕಲಿ ದಾಖಲೆಗಳನ್ನು ಪಡೆದಿರುವುದುಬೆಳಕಿಗೆ ಬಂದಿದೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಇಂತಹ ಬಹಳಷ್ಟು ವೆಬ್ಸೈಟ್ಗಳಿವೆ. ಮತ ಪರಿಷ್ಕರಣೆ ಹಾಗೂ ಮತದಾರರಿಗೆ ಸಂಬಂಧಿಸಿದಂತೆ ತನಿಖೆ ಈಗಾಗಲೇ ನಡೆಯುತ್ತಿದ್ದು, ತನಿಖೆಯ ನಂತರ ಈ ಎಲ್ಲ ವಿಷಯಗಳೂ ಸ್ಪಷ್ಟವಾಗಲಿವೆ ಎಂದರು.

ವಿಪಕ್ಷಗಳ ಸಹಕಾರ :
ಗಡಿ ವಿಚಾರಗಳ ಬಗ್ಗೆ ವಿಪಕ್ಷಗಳ ಸಹಕಾರವಿದೆಯೇ ಎಂಬುದಕ್ಕೆ ಉತ್ತರ ನೀಡಿ, ರಾಜ್ಯ ಗಡಿ, ನೆಲ, ಜಲಗಳ ವಿಚಾರದಲ್ಲಿ ವಿಪಕ್ಷಗಳು ಸಹಕಾರ ನೀಡುತ್ತಿವೆ. ಆದರೆ ರಾಜಕಾರಣದಲ್ಲಿ ಅವರವರ ರಾಜಕಾರಣವನ್ನು ಎಲ್ಲ ಪಕ್ಷಗಳೂ ಮಾಡುತ್ತವೆ ಎಂದರು.

ಮೈಸೂರಿನ ಪಾರಂಪರಿಕ ಕಟ್ಟಡಗಳ ದುರಸ್ತಿ ಬಗ್ಗೆ ಚರ್ಚಿಸಿ ತೀರ್ಮಾನ :
ಮೈಸೂರಿನಲ್ಲಿ ವಿಮಾನ ನಿಲ್ದಾಣದ ಅಭಿವೃದ್ಧಿ ಅನುದಾನ ನೀಡಲಾಗಿದೆ. ಆದರೆ ಮೈಸೂರಿನಲ್ಲಿನ ಪಾರಂಪರಿಕ ಕಟ್ಟಡಗಳು ಒಂದೊಂದಾಗಿ ಕುಸಿಯುತ್ತಿರುವ ಬಗ್ಗೆ ಉತ್ತರಿಸಿ, ಈ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ಪಡೆದು, ಕಟ್ಟಡಗಳ ದುರಸ್ತಿಗಾಗಿ ಹಣಕಾಸಿನ ವ್ಯವಸ್ಥೆಗಳ ಬಗ್ಗೆ ಅವಲೋಕಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಏಕರೂಪ ನಾಗರಿಕ ಸಂಹಿತೆ :
ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದಾಗಿ ಭಾಜಪ ಪಕ್ಷ 30 ವರ್ಷಗಳಿಂದಲೂ ಹೇಳುತ್ತಿದೆ. ಕೆಲವು ರಾಜ್ಯಗಳಲ್ಲಿ ಈ ಸಂಹಿತೆಯನ್ನು ಜಾರಿಗೆ ತರಲು ಸಮಿತಿಗಳನ್ನು ರಚಿಸಿದ್ದಾರೆ. ವಿವಿಧ ರಾಜ್ಯಗಳಲ್ಲಿ ಈ ಬಗೆಗಿನ ಬೆಳವಣಿಗೆ, ಸಂವಿಧಾನದಲ್ಲಿನ ಅವಕಾಶಗಳ ಸಂಪೂರ್ಣ ಮಾಹಿತಿಯನ್ನು ಪಡೆದು, ನಂತರ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಚಿವ ಗೋವಿಂದ ಕಾರಜೋಳ, ಶಾಸಕ ಹರ್ಷವರ್ಧನ್,ಸಂಸದ ಶ್ರೀ ನಿವಾಸ ಪ್ರಸಾದ್, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

 

andolanait

Recent Posts

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

22 mins ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

33 mins ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

43 mins ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

1 hour ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

1 hour ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

2 hours ago