ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಂಜನಗೋಡಿಗೆ ಭೇಟಿ ನೀಡಿದ್ದು,ಶ್ರೀಕಂಠೇಶ್ವರ ದೇವಸ್ಥಾನದ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ, ನುಗು ಹಾಗೂ ಹೇಡಿಯಾಳ ಏತ ನೀರಾವರಿ ಯೋಜನೆಗೆ ಚಾಲನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದ್ದಾರೆ.
ನವೆಂಬರ್ 29 ರಂದು ನವದೆಹಲಿಗೆ ತೆರಳಲಿದ್ದು, ಹಿರಿಯ ವಕೀಲರಾದ ಶ್ರೀ ಮುಕುಲ್ ರೋಹಟಗಿಯವರನ್ನು ಭೇಟಿಯಾಗಲಿದ್ದು, ಗಡಿವಿಚಾರದ ಬಗ್ಗೆ ಚರ್ಚೆ ಹಾಗೂ ಕೇಂದ್ರ ಕೈಗಾರಿಕಾ ಸಚಿವರು, ಜಲಸಂಪನ್ಮೂಲ ಸಚಿವರನ್ನೂ ಸಹ ಭೇಟಿಯಾಗುವ ಉದ್ದೇಶವಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಂಡ್ಯ ಹಾಗೂ ಮೈಸೂರಿನಲ್ಲಿ ಭತ್ತ ಖರೀದಿ ಕೇಂದ್ರ :
ಭತ್ತ ಖರೀದಿ ಕೇಂದ್ರವನ್ನು ಮಂಗಳೂರಿನಲ್ಲಿ ಮಾತ್ರ ತೆರೆಯಲಾಗಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಮಂಗಳೂರಿನಲ್ಲಿ ಕುಚ್ಚಲಕ್ಕಿಯನ್ನು ಜನರು ಬಳಸುವುದರಿಂದ , ಈ ಭಾಗದಲ್ಲಿ ಕುಚ್ಚಲಕ್ಕಿಯ ಖರೀದಿ ಮಾಡಲಾಗುತ್ತಿದೆ.ಭತ್ತವನ್ನು ರಾಜ್ಯದೆಲ್ಲೆಡೆಯಿಂದ ಖರೀದಿಸಲಾಗುವುದು. ಉತ್ತರ ಕರ್ನಾಟಕದಲ್ಲಿ ಗಂಗಾವತಿ, ಸಿಂದನೂರು, ಮಂಡ್ಯ ಹಾಗೂ ಮೈಸೂರುಗಳಲ್ಲಿಯೂ ಖರೀದಿಸಲಾಗುವುದು ಎಂದರು.
ಸಂವಿಧಾನದ ಚೌಕಟ್ಟಿನೊಳಗೆ ಕ್ರಮ :
ಹಿಂದುಳಿದ ವರ್ಗದ ಮೀಸಲಾತಿಗೆ ಸಂಬಂಧಿಸಿದಂತೆ, ಎಲ್ಲ ಸಮುದಾಯಗಳ ಆಕಾಂಕ್ಷೆಗಳು ಹೆಚ್ಚಾಗಿದೆ. ಆದರೆ ಸಂವಿಧಾನದ ಚೌಕಟ್ಟಿನೊಳಗೆ ಎಲ್ಲ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಹಿಂದುಳಿದ ವರ್ಗ ಆಯೋಗವಿದೆ. ಸಮುದಾಯಗಳ ಮೀಸಲಾತಿ ಹೆಚ್ಚಳ ಮನವಿಯನ್ನು ಮೊದಲು ಪರಿಶೀಲಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ತನಿಖೆಯ ನಂತರ ವಿಷಯಗಳು ಸ್ಪಷ್ಟವಾಗಲಿವೆ :
ಬೆಂಗಳೂರಿನಲ್ಲಿ ವೆಬ್ ಸೈಟೊಂದರ ಮೂಲಕ ನಕಲಿ ಆಧಾರ್ ಕಾರ್ಡ್, ವೋಟರ್ ಐಡಿಯನ್ನು ಪಡೆಯಬಹುದು, ಮಂಗಳೂರಿನ ಬಾಂಬ್ ಪ್ರಕರಣದ ಪ್ರಮುಖ ಆರೋಪಿ ಶಾರೀಖ್ ಕೂಡ ಇಂತಹದೇ ನಕಲಿ ದಾಖಲೆಗಳನ್ನು ಪಡೆದಿರುವುದುಬೆಳಕಿಗೆ ಬಂದಿದೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಇಂತಹ ಬಹಳಷ್ಟು ವೆಬ್ಸೈಟ್ಗಳಿವೆ. ಮತ ಪರಿಷ್ಕರಣೆ ಹಾಗೂ ಮತದಾರರಿಗೆ ಸಂಬಂಧಿಸಿದಂತೆ ತನಿಖೆ ಈಗಾಗಲೇ ನಡೆಯುತ್ತಿದ್ದು, ತನಿಖೆಯ ನಂತರ ಈ ಎಲ್ಲ ವಿಷಯಗಳೂ ಸ್ಪಷ್ಟವಾಗಲಿವೆ ಎಂದರು.
ವಿಪಕ್ಷಗಳ ಸಹಕಾರ :
ಗಡಿ ವಿಚಾರಗಳ ಬಗ್ಗೆ ವಿಪಕ್ಷಗಳ ಸಹಕಾರವಿದೆಯೇ ಎಂಬುದಕ್ಕೆ ಉತ್ತರ ನೀಡಿ, ರಾಜ್ಯ ಗಡಿ, ನೆಲ, ಜಲಗಳ ವಿಚಾರದಲ್ಲಿ ವಿಪಕ್ಷಗಳು ಸಹಕಾರ ನೀಡುತ್ತಿವೆ. ಆದರೆ ರಾಜಕಾರಣದಲ್ಲಿ ಅವರವರ ರಾಜಕಾರಣವನ್ನು ಎಲ್ಲ ಪಕ್ಷಗಳೂ ಮಾಡುತ್ತವೆ ಎಂದರು.
ಮೈಸೂರಿನ ಪಾರಂಪರಿಕ ಕಟ್ಟಡಗಳ ದುರಸ್ತಿ ಬಗ್ಗೆ ಚರ್ಚಿಸಿ ತೀರ್ಮಾನ :
ಮೈಸೂರಿನಲ್ಲಿ ವಿಮಾನ ನಿಲ್ದಾಣದ ಅಭಿವೃದ್ಧಿ ಅನುದಾನ ನೀಡಲಾಗಿದೆ. ಆದರೆ ಮೈಸೂರಿನಲ್ಲಿನ ಪಾರಂಪರಿಕ ಕಟ್ಟಡಗಳು ಒಂದೊಂದಾಗಿ ಕುಸಿಯುತ್ತಿರುವ ಬಗ್ಗೆ ಉತ್ತರಿಸಿ, ಈ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ಪಡೆದು, ಕಟ್ಟಡಗಳ ದುರಸ್ತಿಗಾಗಿ ಹಣಕಾಸಿನ ವ್ಯವಸ್ಥೆಗಳ ಬಗ್ಗೆ ಅವಲೋಕಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಏಕರೂಪ ನಾಗರಿಕ ಸಂಹಿತೆ :
ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದಾಗಿ ಭಾಜಪ ಪಕ್ಷ 30 ವರ್ಷಗಳಿಂದಲೂ ಹೇಳುತ್ತಿದೆ. ಕೆಲವು ರಾಜ್ಯಗಳಲ್ಲಿ ಈ ಸಂಹಿತೆಯನ್ನು ಜಾರಿಗೆ ತರಲು ಸಮಿತಿಗಳನ್ನು ರಚಿಸಿದ್ದಾರೆ. ವಿವಿಧ ರಾಜ್ಯಗಳಲ್ಲಿ ಈ ಬಗೆಗಿನ ಬೆಳವಣಿಗೆ, ಸಂವಿಧಾನದಲ್ಲಿನ ಅವಕಾಶಗಳ ಸಂಪೂರ್ಣ ಮಾಹಿತಿಯನ್ನು ಪಡೆದು, ನಂತರ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಚಿವ ಗೋವಿಂದ ಕಾರಜೋಳ, ಶಾಸಕ ಹರ್ಷವರ್ಧನ್,ಸಂಸದ ಶ್ರೀ ನಿವಾಸ ಪ್ರಸಾದ್, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 140 ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಜಮೀನೊಂದರಲ್ಲಿ ಉಪಟಳ ನೀಡುತಿದ್ದ ಹುಲಿಯನ್ನು ಅರಣ್ಯ ಇಲಾಖೆ…