ನಂಜನಗೂಡು ತಾಲ್ಲೂಕಿನ ಕಪ್ಪಸೋಗೆಯಲ್ಲಿ ಘಟನೆ
ಭಾರಿ ಮಳೆಗೆ ಕುಸಿದ ಮನೆ
ನಂಜನಗೂಡು: ತಾಲ್ಲೂಕಿನ ಕಪ್ಪಸೋಗೆ ಗ್ರಾಮದಲ್ಲಿ ಶುಕ್ರವಾರ ಸುರಿದ ಭಾರಿ ಮಳೆಗೆ ಮನೆಯೊಂದು ಕುಸಿದಿದ್ದು, ಮನೆ ಕಳೆದುಕೊಂಡ ಕುಟುಂಬ ಈಗ ಅತಂತ್ರವಾಗಿದೆ.
ಗ್ರಾಮದ ಒಂದನೇ ವಾರ್ಡ್ ನ ನಾಯಕ ಸಮುದಾಯದ ಬೀದಿಯಲ್ಲಿನ ದೇವಮ್ಮ ಅವರಿಗೆ ಸೇರಿದ ಮನೆಯ ಬಹುತೇಕ ಭಾಗ ಮಳೆಗೆ ಬಿದ್ದು ಹೋಗಿದ್ದು, ಮನೆ ಸಂಪೂರ್ಣ ಹಾನಿಯಾಗಿದೆ.
‘ಭಾರಿ ಮಳೆಗೆ ಶುಕ್ರವಾರ ರಾತ್ರಿ 1ಗಂಟೆ ಸುಮಾರಿಗೆ ಮನೆಯ ಎರಡು ಗೋಡೆಗಳು ಬಿದ್ದಿವೆ. ನಾನು, ತಾಯಿ ದೇವಮ್ಮ, ಅಜ್ಜಿ ಮೂವರು ಮಲಗಿದ್ದೇವು. ಗೋಡೆ ಮನೆಯ ಹೊರಭಾಗಕ್ಕೆ ಕುಸಿದು ಬಿದ್ದಿದ್ದೆ. ಹಾಗಾಗಿ ಅದೃಷ್ಟವಶಾತ್ ನಾವು ಬದುಕುಳಿದೆವು. ಇಲ್ಲದಿದ್ದರೆ ಪ್ರಾಣಾಪಾಯವಾಗುವ ಸಾಧ್ಯತೆ ಹೆಚ್ಚಿತ್ತು’ ಎಂದು ದೇವಮ್ಮ ಅವರ ಪುತ್ರ ಶಿವಕುಮಾರ್ ಆತಂಕ ವ್ಯಕ್ತಪಡಿಸಿದರು.
ಮನೆ ಕಳೆದುಕೊಂಡ ಗ್ರಾಮದ ದೇವಮ್ಮ ಅವರು ಕಡು ಬಡವರಾಗಿದ್ದು, ಈಗ ಮನೆ ಇಲ್ಲದೇ ಅತಂತ್ರರಾಗಿದ್ದಾರೆ. ಹಾಗಾಗಿ ತಕ್ಷಣವೇ ಕ್ಷೇತ್ರದ
ಶಾಸಕರು ಹಾಗೂ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಮನೆ ಮಂಜೂರು ಮಾಡಬೇಕು ಯುವ ಮುಖಂಡ ಮೂರ್ತಿ ರಾಮನಾಯಕ ಒತ್ತಾಯಿಸಿದ್ದಾರೆ.
ಮಳೆ ಬಂದ ಸಂದರ್ಭಗಳಲ್ಲಿ ಮನೆಯೊಳಗೆ ಮಳೆ ನೀರು ನುಗ್ಗುತ್ತಿತ್ತು. ಆ ಸಂದರ್ಭದಲ್ಲಿ ಮಲಗಲು ತೊಂದರೆಯಾಗುತ್ತಿತ್ತು. ಈ ಕುರಿತು ಗ್ರಾಮದ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಮನೆ ನಿರ್ಮಿಸಿಕೊಡಲಿಲ್ಲ ಎಂದು ದೇವಮ್ಮ ಬೇಸರ ವ್ಯಕಪಡಿಸಿದರು.
ಮನೆ ಕುಸಿದು ಬೀಳುವ ಮುನ್ನವೇ ಬಡ ಮಹಿಳೆಗೆ ಮನೆ ನಿರ್ಮಿಸಿಕೊಡದ ಗ್ರಾಮದ ಜನಪ್ರತಿನಿಧಿಗಳು, ಈಗ ಮನೆ ಬಿದ್ದು ಹೋದ ನಂತರ ಬಂದು ವಿಚಾರಿಸುತ್ತಿದ್ದಾರೆ. ಅಲ್ಲದೇ ನಾಲ್ಕಾರು ಮನೆ ಇರುವವರಿಗೆ ಮತ್ತೆ ಮನೆ ಕಟ್ಟಿಸಿಕೊಡುತ್ತಿದ್ದಾರೆ ಎಂದು ಗ್ರಾಮದ
ಕೆ.ಎಸ್. ಪುಟ್ಟರಾಜು, ಮಹೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.
ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…
ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…
ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…
ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…
ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…