ಜಿಲ್ಲೆಗಳು

ನಂಜನಗೂಡು : ಭಾರಿ ಮಳೆಗೆ ಕುಸಿದ ಮನೆ

ನಂಜನಗೂಡು ತಾಲ್ಲೂಕಿನ ಕಪ್ಪಸೋಗೆಯಲ್ಲಿ ಘಟನೆ

ಭಾರಿ ಮಳೆಗೆ ಕುಸಿದ ಮನೆ

ನಂಜನಗೂಡು: ತಾಲ್ಲೂಕಿನ ಕಪ್ಪಸೋಗೆ ಗ್ರಾಮದಲ್ಲಿ ಶುಕ್ರವಾರ ಸುರಿದ ಭಾರಿ ಮಳೆಗೆ ಮನೆಯೊಂದು ಕುಸಿದಿದ್ದು, ಮನೆ ಕಳೆದುಕೊಂಡ ಕುಟುಂಬ ಈಗ ಅತಂತ್ರವಾಗಿದೆ.

ಗ್ರಾಮದ ಒಂದನೇ ವಾರ್ಡ್ ನ ನಾಯಕ ಸಮುದಾಯದ ಬೀದಿಯಲ್ಲಿನ ದೇವಮ್ಮ ಅವರಿಗೆ ಸೇರಿದ ಮನೆಯ ಬಹುತೇಕ ಭಾಗ ಮಳೆಗೆ ಬಿದ್ದು ಹೋಗಿದ್ದು, ಮನೆ ಸಂಪೂರ್ಣ ಹಾನಿಯಾಗಿದೆ.

‘ಭಾರಿ ಮಳೆಗೆ ಶುಕ್ರವಾರ ರಾತ್ರಿ 1ಗಂಟೆ ಸುಮಾರಿಗೆ ಮನೆಯ ಎರಡು ಗೋಡೆಗಳು ಬಿದ್ದಿವೆ. ನಾನು, ತಾಯಿ ದೇವಮ್ಮ, ಅಜ್ಜಿ ಮೂವರು ಮಲಗಿದ್ದೇವು. ಗೋಡೆ ಮನೆಯ ಹೊರಭಾಗಕ್ಕೆ ಕುಸಿದು ಬಿದ್ದಿದ್ದೆ. ಹಾಗಾಗಿ ಅದೃಷ್ಟವಶಾತ್ ನಾವು ಬದುಕುಳಿದೆವು. ಇಲ್ಲದಿದ್ದರೆ ಪ್ರಾಣಾಪಾಯವಾಗುವ ಸಾಧ್ಯತೆ ಹೆಚ್ಚಿತ್ತು’ ಎಂದು ದೇವಮ್ಮ ಅವರ ಪುತ್ರ ಶಿವಕುಮಾರ್ ಆತಂಕ ವ್ಯಕ್ತಪಡಿಸಿದರು.

ಮನೆ ಕಳೆದುಕೊಂಡ ಗ್ರಾಮದ ದೇವಮ್ಮ ಅವರು ಕಡು ಬಡವರಾಗಿದ್ದು, ಈಗ ಮನೆ ಇಲ್ಲದೇ ಅತಂತ್ರರಾಗಿದ್ದಾರೆ. ಹಾಗಾಗಿ ತಕ್ಷಣವೇ ಕ್ಷೇತ್ರದ

ಶಾಸಕರು ಹಾಗೂ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಮನೆ ಮಂಜೂರು ಮಾಡಬೇಕು ಯುವ ಮುಖಂಡ ಮೂರ್ತಿ ರಾಮನಾಯಕ ಒತ್ತಾಯಿಸಿದ್ದಾರೆ.

ಮಳೆ ಬಂದ ಸಂದರ್ಭಗಳಲ್ಲಿ ಮನೆಯೊಳಗೆ ಮಳೆ ನೀರು ನುಗ್ಗುತ್ತಿತ್ತು. ಆ ಸಂದರ್ಭದಲ್ಲಿ ಮಲಗಲು ತೊಂದರೆಯಾಗುತ್ತಿತ್ತು. ಈ ಕುರಿತು ಗ್ರಾಮದ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಮನೆ ನಿರ್ಮಿಸಿಕೊಡಲಿಲ್ಲ ಎಂದು ದೇವಮ್ಮ ಬೇಸರ ವ್ಯಕಪಡಿಸಿದರು.

ಮನೆ ಕುಸಿದು ಬೀಳುವ ಮುನ್ನವೇ ಬಡ ಮಹಿಳೆಗೆ ಮನೆ ನಿರ್ಮಿಸಿಕೊಡದ ಗ್ರಾಮದ ಜನಪ್ರತಿನಿಧಿಗಳು, ಈಗ ಮನೆ ಬಿದ್ದು ಹೋದ ನಂತರ ಬಂದು ವಿಚಾರಿಸುತ್ತಿದ್ದಾರೆ. ಅಲ್ಲದೇ ನಾಲ್ಕಾರು ಮನೆ ಇರುವವರಿಗೆ ಮತ್ತೆ ಮನೆ ಕಟ್ಟಿಸಿಕೊಡುತ್ತಿದ್ದಾರೆ ಎಂದು ಗ್ರಾಮದ
ಕೆ.ಎಸ್‌. ಪುಟ್ಟರಾಜು, ಮಹೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.

andolanait

Recent Posts

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ : ಮಂಡ್ಯ ರಮೇಶ್, ಸಾಧು ಕೋಕಿಲಾ ಕೇಸ್‌ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ…

4 mins ago

ಯತೀಂದ್ರ ಸಿದ್ಧರಾಮಯ್ಯ ಅವಹೇಳನ ಪ್ರಕರಣ: ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲು

ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಬಿಜೆಪಿ ಐಟಿ…

3 hours ago

ಫೆಬ್ರವರಿ.13ರಿಂದ ಹಂಪಿ ಉತ್ಸವ-2026

ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…

3 hours ago

ಹನೂರು ಕ್ಷೇತ್ರದಲ್ಲಿ 15 ವರ್ಷಗಳಿಂದ ಆಗದೇ ಇದ್ದ ಅಭಿವೃದ್ಧಿ ಕಾರ್ಯ ನಾನು ಮಾಡಿ ತೋರಿಸಿದ್ದೇನೆ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…

4 hours ago

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್‌

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…

4 hours ago

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಮ್ಯಾಚ್‌ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಮ್ಯಾಚ್‌ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…

4 hours ago