ನಂಜನಗೂಡು ತಾಲ್ಲೂಕಿನ ಕಪ್ಪಸೋಗೆಯಲ್ಲಿ ಘಟನೆ
ಭಾರಿ ಮಳೆಗೆ ಕುಸಿದ ಮನೆ
ನಂಜನಗೂಡು: ತಾಲ್ಲೂಕಿನ ಕಪ್ಪಸೋಗೆ ಗ್ರಾಮದಲ್ಲಿ ಶುಕ್ರವಾರ ಸುರಿದ ಭಾರಿ ಮಳೆಗೆ ಮನೆಯೊಂದು ಕುಸಿದಿದ್ದು, ಮನೆ ಕಳೆದುಕೊಂಡ ಕುಟುಂಬ ಈಗ ಅತಂತ್ರವಾಗಿದೆ.
ಗ್ರಾಮದ ಒಂದನೇ ವಾರ್ಡ್ ನ ನಾಯಕ ಸಮುದಾಯದ ಬೀದಿಯಲ್ಲಿನ ದೇವಮ್ಮ ಅವರಿಗೆ ಸೇರಿದ ಮನೆಯ ಬಹುತೇಕ ಭಾಗ ಮಳೆಗೆ ಬಿದ್ದು ಹೋಗಿದ್ದು, ಮನೆ ಸಂಪೂರ್ಣ ಹಾನಿಯಾಗಿದೆ.
‘ಭಾರಿ ಮಳೆಗೆ ಶುಕ್ರವಾರ ರಾತ್ರಿ 1ಗಂಟೆ ಸುಮಾರಿಗೆ ಮನೆಯ ಎರಡು ಗೋಡೆಗಳು ಬಿದ್ದಿವೆ. ನಾನು, ತಾಯಿ ದೇವಮ್ಮ, ಅಜ್ಜಿ ಮೂವರು ಮಲಗಿದ್ದೇವು. ಗೋಡೆ ಮನೆಯ ಹೊರಭಾಗಕ್ಕೆ ಕುಸಿದು ಬಿದ್ದಿದ್ದೆ. ಹಾಗಾಗಿ ಅದೃಷ್ಟವಶಾತ್ ನಾವು ಬದುಕುಳಿದೆವು. ಇಲ್ಲದಿದ್ದರೆ ಪ್ರಾಣಾಪಾಯವಾಗುವ ಸಾಧ್ಯತೆ ಹೆಚ್ಚಿತ್ತು’ ಎಂದು ದೇವಮ್ಮ ಅವರ ಪುತ್ರ ಶಿವಕುಮಾರ್ ಆತಂಕ ವ್ಯಕ್ತಪಡಿಸಿದರು.
ಮನೆ ಕಳೆದುಕೊಂಡ ಗ್ರಾಮದ ದೇವಮ್ಮ ಅವರು ಕಡು ಬಡವರಾಗಿದ್ದು, ಈಗ ಮನೆ ಇಲ್ಲದೇ ಅತಂತ್ರರಾಗಿದ್ದಾರೆ. ಹಾಗಾಗಿ ತಕ್ಷಣವೇ ಕ್ಷೇತ್ರದ
ಶಾಸಕರು ಹಾಗೂ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಮನೆ ಮಂಜೂರು ಮಾಡಬೇಕು ಯುವ ಮುಖಂಡ ಮೂರ್ತಿ ರಾಮನಾಯಕ ಒತ್ತಾಯಿಸಿದ್ದಾರೆ.
ಮಳೆ ಬಂದ ಸಂದರ್ಭಗಳಲ್ಲಿ ಮನೆಯೊಳಗೆ ಮಳೆ ನೀರು ನುಗ್ಗುತ್ತಿತ್ತು. ಆ ಸಂದರ್ಭದಲ್ಲಿ ಮಲಗಲು ತೊಂದರೆಯಾಗುತ್ತಿತ್ತು. ಈ ಕುರಿತು ಗ್ರಾಮದ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಮನೆ ನಿರ್ಮಿಸಿಕೊಡಲಿಲ್ಲ ಎಂದು ದೇವಮ್ಮ ಬೇಸರ ವ್ಯಕಪಡಿಸಿದರು.
ಮನೆ ಕುಸಿದು ಬೀಳುವ ಮುನ್ನವೇ ಬಡ ಮಹಿಳೆಗೆ ಮನೆ ನಿರ್ಮಿಸಿಕೊಡದ ಗ್ರಾಮದ ಜನಪ್ರತಿನಿಧಿಗಳು, ಈಗ ಮನೆ ಬಿದ್ದು ಹೋದ ನಂತರ ಬಂದು ವಿಚಾರಿಸುತ್ತಿದ್ದಾರೆ. ಅಲ್ಲದೇ ನಾಲ್ಕಾರು ಮನೆ ಇರುವವರಿಗೆ ಮತ್ತೆ ಮನೆ ಕಟ್ಟಿಸಿಕೊಡುತ್ತಿದ್ದಾರೆ ಎಂದು ಗ್ರಾಮದ
ಕೆ.ಎಸ್. ಪುಟ್ಟರಾಜು, ಮಹೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…