Mysore
27
few clouds

Social Media

ಸೋಮವಾರ, 13 ಏಪ್ರಿಲ 2026
Light
Dark

ನಂಜನಗೂಡು : ಸಾಲಕ್ಕೆ ಹೆದರಿ ಶಿಕ್ಷಕ ಸಾವಿಗೆ ಶರಣು

ನಂಜನಗೂಡು : ಪಟ್ಟಣದ ದೇವಿರಮ್ಮನಹಳ್ಳಿ ಬಳಿ ಇರುವ ರಾಮಸ್ವಾಮಿ ಲೇಔಟ್ ನಿವಾಸಿ ಹಾಗೂ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ 47 ವರ್ಷದ ಶಂಭುಲಿಂಗ ಎಂಬುವವರು ಸಾಲಕ್ಕೆಹೆದರಿ ಸಾವಿಗೆ ಶರಣಾಗಿದ್ದಾರೆ.

ಎಂದಿನಂತೆ ಕೆಲಸ ಮುಗಿಸಿಕೊಂಡು ಗುರುವಾರ ಸಂಜೆ ಮನೆಗೆ ಬಂದಿದ್ದ ಶಿಕ್ಷಕ ಶಂಭುಲಿಂಗ ಸ್ವಾಮಿಸಂಜೆ ಮನೆಯಿಂದ ಹೊರ ಹೋದವರು ಮತ್ತೆ ಬರಲಿಲ್ಲ. ರಾತ್ರಿ ಮನೆ ಸಮೀಪದ ಕಾರ್ ಶೆಡ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ  ಶರಣಾಗಿದ್ದಾರೆ

ರಾತ್ರಿಯಾದರೂ ಮನೆಗೆ ಬಾರದ ಕಾರಣ ಮನೆಯವರು ಹುಡುಕಾಟ ನಡೆಸಿದ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ,ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೋಯ್ದಲಾದರೂ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ

ಕಳೆದ ಒಂದು ತಿಂಗಳ ಹಿಂದೆ ಬೆಳ್ಳಂಬೆಳಗ್ಗೆ ಕೊರಿಯರ್ ಪಾರ್ಸೆಲ್ ಕೊಡುವ ನೆಪದಲ್ಲಿ ದುಷ್ಕರ್ಮಿಗಳು ಮನೆಗೆ ನುಗ್ಗಿ ಮೃತ ಶಂಭುಲಿಂಗ ಅವರ ಪತ್ನಿ ದಾಕ್ಷಾಯಿಣಿ ಅವರ ಕೈ ಕಾಲು ಕಟ್ಟಿ ನಗನಾಣ್ಯ ದೋಚಿ ಪರಾರಿಯಾಗಿದ್ದ ಘಟನೆಯನ್ನು ಇಲ್ಲಿ ಸ್ಮರಿಸಬಹುದು. ಮೃತ ಶಿಕ್ಷಕ ಕೋಟ್ಯಂತರ ರೂಪಾಯಿ ಚೀಟಿ ಹಾಗೂ ಹಣಕಾಸು ವ್ಯವಹಾರ ನಡೆಸುತ್ತಿದ್ದ ಕಾರಣ ಈ ದರೋಡೆ ಪ್ರಕರಣವೂ ಕೂಡ ತೀವ್ರ ಚರ್ಚೆಗೆ ಗ್ರಾಸವಾಗಿತ್ತು

ಇದೀಗ ಶಿಕ್ಷಕ ಶಂಭುಲಿಂಗು ಸ್ಥಿತಿವಂತರಾಗಿದ್ದರೂ ಆತ್ಮಹತ್ಯೆಗೆ ಶರಣಾಗಿರುವುದು ಹಲವಾರು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ನಂಜನಗೂಡು ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!