ನಂಜನಗೂಡು : ಪಟ್ಟಣದ ದೇವಿರಮ್ಮನಹಳ್ಳಿ ಬಳಿ ಇರುವ ರಾಮಸ್ವಾಮಿ ಲೇಔಟ್ ನಿವಾಸಿ ಹಾಗೂ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ 47 ವರ್ಷದ ಶಂಭುಲಿಂಗ ಎಂಬುವವರು ಸಾಲಕ್ಕೆಹೆದರಿ ಸಾವಿಗೆ ಶರಣಾಗಿದ್ದಾರೆ.
ಎಂದಿನಂತೆ ಕೆಲಸ ಮುಗಿಸಿಕೊಂಡು ಗುರುವಾರ ಸಂಜೆ ಮನೆಗೆ ಬಂದಿದ್ದ ಶಿಕ್ಷಕ ಶಂಭುಲಿಂಗ ಸ್ವಾಮಿಸಂಜೆ ಮನೆಯಿಂದ ಹೊರ ಹೋದವರು ಮತ್ತೆ ಬರಲಿಲ್ಲ. ರಾತ್ರಿ ಮನೆ ಸಮೀಪದ ಕಾರ್ ಶೆಡ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ
ರಾತ್ರಿಯಾದರೂ ಮನೆಗೆ ಬಾರದ ಕಾರಣ ಮನೆಯವರು ಹುಡುಕಾಟ ನಡೆಸಿದ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ,ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೋಯ್ದಲಾದರೂ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ
ಕಳೆದ ಒಂದು ತಿಂಗಳ ಹಿಂದೆ ಬೆಳ್ಳಂಬೆಳಗ್ಗೆ ಕೊರಿಯರ್ ಪಾರ್ಸೆಲ್ ಕೊಡುವ ನೆಪದಲ್ಲಿ ದುಷ್ಕರ್ಮಿಗಳು ಮನೆಗೆ ನುಗ್ಗಿ ಮೃತ ಶಂಭುಲಿಂಗ ಅವರ ಪತ್ನಿ ದಾಕ್ಷಾಯಿಣಿ ಅವರ ಕೈ ಕಾಲು ಕಟ್ಟಿ ನಗನಾಣ್ಯ ದೋಚಿ ಪರಾರಿಯಾಗಿದ್ದ ಘಟನೆಯನ್ನು ಇಲ್ಲಿ ಸ್ಮರಿಸಬಹುದು. ಮೃತ ಶಿಕ್ಷಕ ಕೋಟ್ಯಂತರ ರೂಪಾಯಿ ಚೀಟಿ ಹಾಗೂ ಹಣಕಾಸು ವ್ಯವಹಾರ ನಡೆಸುತ್ತಿದ್ದ ಕಾರಣ ಈ ದರೋಡೆ ಪ್ರಕರಣವೂ ಕೂಡ ತೀವ್ರ ಚರ್ಚೆಗೆ ಗ್ರಾಸವಾಗಿತ್ತು
ಇದೀಗ ಶಿಕ್ಷಕ ಶಂಭುಲಿಂಗು ಸ್ಥಿತಿವಂತರಾಗಿದ್ದರೂ ಆತ್ಮಹತ್ಯೆಗೆ ಶರಣಾಗಿರುವುದು ಹಲವಾರು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ನಂಜನಗೂಡು ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…