ನಂಜನಗೂಡು : ಪಟ್ಟಣದ ದೇವಿರಮ್ಮನಹಳ್ಳಿ ಬಳಿ ಇರುವ ರಾಮಸ್ವಾಮಿ ಲೇಔಟ್ ನಿವಾಸಿ ಹಾಗೂ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ 47 ವರ್ಷದ ಶಂಭುಲಿಂಗ ಎಂಬುವವರು ಸಾಲಕ್ಕೆಹೆದರಿ ಸಾವಿಗೆ ಶರಣಾಗಿದ್ದಾರೆ.
ಎಂದಿನಂತೆ ಕೆಲಸ ಮುಗಿಸಿಕೊಂಡು ಗುರುವಾರ ಸಂಜೆ ಮನೆಗೆ ಬಂದಿದ್ದ ಶಿಕ್ಷಕ ಶಂಭುಲಿಂಗ ಸ್ವಾಮಿಸಂಜೆ ಮನೆಯಿಂದ ಹೊರ ಹೋದವರು ಮತ್ತೆ ಬರಲಿಲ್ಲ. ರಾತ್ರಿ ಮನೆ ಸಮೀಪದ ಕಾರ್ ಶೆಡ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ
ರಾತ್ರಿಯಾದರೂ ಮನೆಗೆ ಬಾರದ ಕಾರಣ ಮನೆಯವರು ಹುಡುಕಾಟ ನಡೆಸಿದ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ,ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೋಯ್ದಲಾದರೂ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ
ಕಳೆದ ಒಂದು ತಿಂಗಳ ಹಿಂದೆ ಬೆಳ್ಳಂಬೆಳಗ್ಗೆ ಕೊರಿಯರ್ ಪಾರ್ಸೆಲ್ ಕೊಡುವ ನೆಪದಲ್ಲಿ ದುಷ್ಕರ್ಮಿಗಳು ಮನೆಗೆ ನುಗ್ಗಿ ಮೃತ ಶಂಭುಲಿಂಗ ಅವರ ಪತ್ನಿ ದಾಕ್ಷಾಯಿಣಿ ಅವರ ಕೈ ಕಾಲು ಕಟ್ಟಿ ನಗನಾಣ್ಯ ದೋಚಿ ಪರಾರಿಯಾಗಿದ್ದ ಘಟನೆಯನ್ನು ಇಲ್ಲಿ ಸ್ಮರಿಸಬಹುದು. ಮೃತ ಶಿಕ್ಷಕ ಕೋಟ್ಯಂತರ ರೂಪಾಯಿ ಚೀಟಿ ಹಾಗೂ ಹಣಕಾಸು ವ್ಯವಹಾರ ನಡೆಸುತ್ತಿದ್ದ ಕಾರಣ ಈ ದರೋಡೆ ಪ್ರಕರಣವೂ ಕೂಡ ತೀವ್ರ ಚರ್ಚೆಗೆ ಗ್ರಾಸವಾಗಿತ್ತು
ಇದೀಗ ಶಿಕ್ಷಕ ಶಂಭುಲಿಂಗು ಸ್ಥಿತಿವಂತರಾಗಿದ್ದರೂ ಆತ್ಮಹತ್ಯೆಗೆ ಶರಣಾಗಿರುವುದು ಹಲವಾರು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ನಂಜನಗೂಡು ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…