ಜಿಲ್ಲೆಗಳು

ಆಷಾಢ ಮಾಸಕ್ಕೆ ತವರಿಗೆ ಬಂದಿದ್ದ ನವವಧು ಪ್ರಿಯಕರನ ಜೊತೆ ಎಸ್ಕೇಪ್ – ಈಗ ಸಾವಿಗೆ ಶರಣು

ಮೈಸೂರು- ಆಷಾಢ ಮಾಸಕ್ಕೆ ತವರು ಮನೆಗೆ ಬಂದಾಗ ಪ್ರಿಯಕರನ ಜೊತೆ ಎಸ್ಕೇಪ್ ಆಗಿದ್ದ ನವವಧು ಈಗ ಸಾವಿಗೀಡಾಗಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ಸಂಭವಿಸಿದೆ.

ಮೈಸೂರಿನ ನಂಜನಗೂಡಿನ ಕಾರ್ಯ ಗ್ರಾಮದ 20 ವರ್ಷದ ವರ್ಷಿತ ಸಾವಿಗೆ ಶರಣಾದವಳು.

ಆಷಾಢ ಮಾಸಕ್ಕಾಗಿ ತವರು ಮನೆಗೆ ಬಂದ ನವವಧು ಪಕ್ಕದ ಮನೆಯಲ್ಲಿದ್ದ ಪ್ರಿಯಕರನ ಜೊತೆ ಪರಾರಿಯಾಗಿದ್ದಳು. ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿಕೊಂಡ ಪೊಲೀಸರು ಒಂದು ವಾರದಲ್ಲಿ ಪತ್ತೆ ಮಾಡಿ ಪ್ರಿಯಕರನಿಂದ ಬೇರ್ಪಡಿಸಿದ್ದರು. ಪ್ರಿಯಕರನ ಅಗಲಿಕೆಯಿಂದ ಮನನೊಂದ ನವವಧು ಈಗ ನೇಣಿಗೆ ಶರಣಾಗಿದ್ದಾಳೆ.

ವರ್ಷಿತಾ ತನ್ನ ಮನೆಯ ಪಕ್ಕದಲ್ಲಿದ್ದ ಕಿರಣ್ ಎಂಬಾತನನ್ನ ಪ್ರೀತಿಸುತ್ತಿದ್ದಳು.ಮಗಳ ಮನವೊಲಿಸಿದ ಪೋಷಕರು ಪ್ರಿಯಕರನಿಂದ ಬೇರೆ ಮಾಡಿ ಚಾಮರಾಜನಗರದ ಅಭಿಷೇಕ್ ಜೊತೆ ಮೇ 8 ರಂದು ಅದ್ದೂರಿಯಾಗಿ ವಿವಾಹ ಮಾಡಿದ್ದರು.

ಆಷಾಢ ಮಾಸ ಹಿನ್ನಲೆ ವರ್ಷಿತಾ ತವರು ಮನೆ ಕಾರ್ಯ ಗ್ರಾಮಕ್ಕೆ ಬಂದಿದ್ದಾಳೆ.ಈ ವೇಳೆ ಪಕ್ಕದ ಮನೆಯಲ್ಲಿದ್ದ ಪ್ರಿಯತಮ ಕಿರಣ್ ಜೊತೆ ಓಡಿಹೋಗಿದ್ದಾಳೆ. ವರ್ಷಿತಾ ಕಾಣೆಯಾದ ಬಗ್ಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರೇಮಿಗಳು ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದು ವಾಪಸ್ ಕರೆತಂದ ಪೊಲೀಸರು ಇಬ್ಬರಿಗೂ ಬುದ್ದಿವಾದ ಹೇಳಿ ಬೇರ್ಪಡಿಸಿದ್ದಾರೆ. ನಂತರ ವರ್ಷಿತಾ ಮೈಸೂರಿನಲ್ಲಿದ್ದ ಸಂಭಂಧಿಕರ ಮನೆಗೆ ಬಂದು 3 ದಿನ ಇದ್ದು ನಂತರ ರಾಂಪುರ ಗ್ರಾಮದಲ್ಲಿರುವ ತಾತನ ಮನೆಗೆ ಬಂದಿದ್ದಾಳೆ.

ಪ್ರಿಯಕರನ ಅಗಲಿಕೆಯಿಂದ ಮನನೊಂದಿದ್ದ ವರ್ಷಿತಾ ತಾತನ ಮನೆಯ ವಾಶ್ ರೂಂ ನಲ್ಲಿ ನೇಣಿಗೆ ಶರಣಾಗಿದ್ದಾಳೆ.

ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

andolanait

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

5 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

5 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

5 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

5 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

5 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

6 hours ago