ಜಿಲ್ಲೆಗಳು

ಆಷಾಢ ಮಾಸಕ್ಕೆ ತವರಿಗೆ ಬಂದಿದ್ದ ನವವಧು ಪ್ರಿಯಕರನ ಜೊತೆ ಎಸ್ಕೇಪ್ – ಈಗ ಸಾವಿಗೆ ಶರಣು

ಮೈಸೂರು- ಆಷಾಢ ಮಾಸಕ್ಕೆ ತವರು ಮನೆಗೆ ಬಂದಾಗ ಪ್ರಿಯಕರನ ಜೊತೆ ಎಸ್ಕೇಪ್ ಆಗಿದ್ದ ನವವಧು ಈಗ ಸಾವಿಗೀಡಾಗಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ಸಂಭವಿಸಿದೆ.

ಮೈಸೂರಿನ ನಂಜನಗೂಡಿನ ಕಾರ್ಯ ಗ್ರಾಮದ 20 ವರ್ಷದ ವರ್ಷಿತ ಸಾವಿಗೆ ಶರಣಾದವಳು.

ಆಷಾಢ ಮಾಸಕ್ಕಾಗಿ ತವರು ಮನೆಗೆ ಬಂದ ನವವಧು ಪಕ್ಕದ ಮನೆಯಲ್ಲಿದ್ದ ಪ್ರಿಯಕರನ ಜೊತೆ ಪರಾರಿಯಾಗಿದ್ದಳು. ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿಕೊಂಡ ಪೊಲೀಸರು ಒಂದು ವಾರದಲ್ಲಿ ಪತ್ತೆ ಮಾಡಿ ಪ್ರಿಯಕರನಿಂದ ಬೇರ್ಪಡಿಸಿದ್ದರು. ಪ್ರಿಯಕರನ ಅಗಲಿಕೆಯಿಂದ ಮನನೊಂದ ನವವಧು ಈಗ ನೇಣಿಗೆ ಶರಣಾಗಿದ್ದಾಳೆ.

ವರ್ಷಿತಾ ತನ್ನ ಮನೆಯ ಪಕ್ಕದಲ್ಲಿದ್ದ ಕಿರಣ್ ಎಂಬಾತನನ್ನ ಪ್ರೀತಿಸುತ್ತಿದ್ದಳು.ಮಗಳ ಮನವೊಲಿಸಿದ ಪೋಷಕರು ಪ್ರಿಯಕರನಿಂದ ಬೇರೆ ಮಾಡಿ ಚಾಮರಾಜನಗರದ ಅಭಿಷೇಕ್ ಜೊತೆ ಮೇ 8 ರಂದು ಅದ್ದೂರಿಯಾಗಿ ವಿವಾಹ ಮಾಡಿದ್ದರು.

ಆಷಾಢ ಮಾಸ ಹಿನ್ನಲೆ ವರ್ಷಿತಾ ತವರು ಮನೆ ಕಾರ್ಯ ಗ್ರಾಮಕ್ಕೆ ಬಂದಿದ್ದಾಳೆ.ಈ ವೇಳೆ ಪಕ್ಕದ ಮನೆಯಲ್ಲಿದ್ದ ಪ್ರಿಯತಮ ಕಿರಣ್ ಜೊತೆ ಓಡಿಹೋಗಿದ್ದಾಳೆ. ವರ್ಷಿತಾ ಕಾಣೆಯಾದ ಬಗ್ಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರೇಮಿಗಳು ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದು ವಾಪಸ್ ಕರೆತಂದ ಪೊಲೀಸರು ಇಬ್ಬರಿಗೂ ಬುದ್ದಿವಾದ ಹೇಳಿ ಬೇರ್ಪಡಿಸಿದ್ದಾರೆ. ನಂತರ ವರ್ಷಿತಾ ಮೈಸೂರಿನಲ್ಲಿದ್ದ ಸಂಭಂಧಿಕರ ಮನೆಗೆ ಬಂದು 3 ದಿನ ಇದ್ದು ನಂತರ ರಾಂಪುರ ಗ್ರಾಮದಲ್ಲಿರುವ ತಾತನ ಮನೆಗೆ ಬಂದಿದ್ದಾಳೆ.

ಪ್ರಿಯಕರನ ಅಗಲಿಕೆಯಿಂದ ಮನನೊಂದಿದ್ದ ವರ್ಷಿತಾ ತಾತನ ಮನೆಯ ವಾಶ್ ರೂಂ ನಲ್ಲಿ ನೇಣಿಗೆ ಶರಣಾಗಿದ್ದಾಳೆ.

ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

andolanait

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

7 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

9 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

9 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

9 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

9 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

10 hours ago