ಮೈಸೂರು- ಆಷಾಢ ಮಾಸಕ್ಕೆ ತವರು ಮನೆಗೆ ಬಂದಾಗ ಪ್ರಿಯಕರನ ಜೊತೆ ಎಸ್ಕೇಪ್ ಆಗಿದ್ದ ನವವಧು ಈಗ ಸಾವಿಗೀಡಾಗಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ಸಂಭವಿಸಿದೆ.
ಮೈಸೂರಿನ ನಂಜನಗೂಡಿನ ಕಾರ್ಯ ಗ್ರಾಮದ 20 ವರ್ಷದ ವರ್ಷಿತ ಸಾವಿಗೆ ಶರಣಾದವಳು.
ಆಷಾಢ ಮಾಸಕ್ಕಾಗಿ ತವರು ಮನೆಗೆ ಬಂದ ನವವಧು ಪಕ್ಕದ ಮನೆಯಲ್ಲಿದ್ದ ಪ್ರಿಯಕರನ ಜೊತೆ ಪರಾರಿಯಾಗಿದ್ದಳು. ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿಕೊಂಡ ಪೊಲೀಸರು ಒಂದು ವಾರದಲ್ಲಿ ಪತ್ತೆ ಮಾಡಿ ಪ್ರಿಯಕರನಿಂದ ಬೇರ್ಪಡಿಸಿದ್ದರು. ಪ್ರಿಯಕರನ ಅಗಲಿಕೆಯಿಂದ ಮನನೊಂದ ನವವಧು ಈಗ ನೇಣಿಗೆ ಶರಣಾಗಿದ್ದಾಳೆ.
ವರ್ಷಿತಾ ತನ್ನ ಮನೆಯ ಪಕ್ಕದಲ್ಲಿದ್ದ ಕಿರಣ್ ಎಂಬಾತನನ್ನ ಪ್ರೀತಿಸುತ್ತಿದ್ದಳು.ಮಗಳ ಮನವೊಲಿಸಿದ ಪೋಷಕರು ಪ್ರಿಯಕರನಿಂದ ಬೇರೆ ಮಾಡಿ ಚಾಮರಾಜನಗರದ ಅಭಿಷೇಕ್ ಜೊತೆ ಮೇ 8 ರಂದು ಅದ್ದೂರಿಯಾಗಿ ವಿವಾಹ ಮಾಡಿದ್ದರು.
ಆಷಾಢ ಮಾಸ ಹಿನ್ನಲೆ ವರ್ಷಿತಾ ತವರು ಮನೆ ಕಾರ್ಯ ಗ್ರಾಮಕ್ಕೆ ಬಂದಿದ್ದಾಳೆ.ಈ ವೇಳೆ ಪಕ್ಕದ ಮನೆಯಲ್ಲಿದ್ದ ಪ್ರಿಯತಮ ಕಿರಣ್ ಜೊತೆ ಓಡಿಹೋಗಿದ್ದಾಳೆ. ವರ್ಷಿತಾ ಕಾಣೆಯಾದ ಬಗ್ಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರೇಮಿಗಳು ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದು ವಾಪಸ್ ಕರೆತಂದ ಪೊಲೀಸರು ಇಬ್ಬರಿಗೂ ಬುದ್ದಿವಾದ ಹೇಳಿ ಬೇರ್ಪಡಿಸಿದ್ದಾರೆ. ನಂತರ ವರ್ಷಿತಾ ಮೈಸೂರಿನಲ್ಲಿದ್ದ ಸಂಭಂಧಿಕರ ಮನೆಗೆ ಬಂದು 3 ದಿನ ಇದ್ದು ನಂತರ ರಾಂಪುರ ಗ್ರಾಮದಲ್ಲಿರುವ ತಾತನ ಮನೆಗೆ ಬಂದಿದ್ದಾಳೆ.
ಪ್ರಿಯಕರನ ಅಗಲಿಕೆಯಿಂದ ಮನನೊಂದಿದ್ದ ವರ್ಷಿತಾ ತಾತನ ಮನೆಯ ವಾಶ್ ರೂಂ ನಲ್ಲಿ ನೇಣಿಗೆ ಶರಣಾಗಿದ್ದಾಳೆ.
ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…