ಮೈಸೂರು : ನಾಡಗೀತೆ ಗಾಯನಕ್ಕೆ ಶೈಲಿಯ ದಾಟಿ ಮತ್ತು 2:30ನಿಮಿಷ ಕಾಲಮಿತಿಯನ್ನ ನಿಗದಿಪಡಿಸಿ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯನ್ನ ಅಧಿಕೃತಗೊಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರಿಗೆ ನಗರದ ನಿರೂಪಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಘಟಕರಾದ ಅಜಯ್ ಶಾಸ್ತ್ರಿ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.
ಮುಂದುವರಿದು, ಮೈಸೂರು ರಾಜ್ಯವಿದ್ದಾಗ ಬಸಪ್ಪಶಾಸ್ತ್ರಿಗಳು ರಚಿಸಿದ ಕಾಯೌ ಗೌರಿ ನಾಡಗೀತೆಯಾಗಿ ಎಲ್ಲೆಡೆ ಹಾಡಲಾಗುತ್ತಿತ್ತು, ನಂತರ ಕರ್ನಾಟಕ ರಾಜ್ಯ ರಚನೆಯಾದ ಬಳಿಕ ಕುವೆಂಪು ರವರು ರಚಿಸಿದ ಭಾರತಜನನೀಯ ತನುಜಾತೆ ಹಾಡುತ್ತಿದ್ದಾದರೂ ಅದು ಅಧಿಕೃತವಾಗಿ ರಾಜ್ಯ ಸರ್ಕಾರ ನಾಡಗೀತೆಯೆಂದು ಘೋಷಿಸಿರಲಿಲ್ಲ ರಾಷ್ಟ್ರಕವಿ ಕುವೆಂಪು ರವರು 1924ರಲ್ಲಿ ಭಾರತಜನನಿಯ ತನುಜಾತೆ ಗೀತೆಯನ್ನ ‘ಕಿಶೋರಚಂದ್ರವಾಣಿ’ ಎಂಬ ಕಾವ್ಯನಾಮದಡಿ ಬರೆದರು. ರಾಷ್ಟ್ರಕವಿ ಕುವೆಂಪು ರವರು ರಚಿಸಿರುವ ಭಾರತಜನನಿಯ ತನುಜಾತೆ ಗೀತೆಯನ್ನ ಮೈಸೂರು ಅನಂತಸ್ವಾಮಿ ರವರು ರಾಗಸಂಯೋಜಿಸಿ ರಾಜ್ಯದ ಎಲ್ಲೆಡೆ ಹಾಡುವ ಮೂಲಕ ಜನಸಮೂಹ ಹಾಡುವಂತೆ ಪ್ರೇರೇಪಿಸಿ ಜನಪ್ರಿಯಗೊಳಿಸಿದ್ದರು, 2004 ಫೆಬ್ರವರಿ 23ರಂದು ಕುವೆಂಪು ರವರ ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಭಾರತಜನನಿಯ ತನುಜಾತೆ ಗೀತೆಯನ್ನು ರಾಜ್ಯದ ಅಧಿಕೃತ ನಾಡಗೀತೆಯನ್ನಾಗಿ ನಿರ್ಧರಿಸಿ ಘೋಷಿಸಿತು.
ಇತ್ತೀಚಿನ ದಿನಗಳಲ್ಲಿ ಟ್ರಾಕ್ ಸಂಪ್ರದಾಯ ಬಂದ ಬಳಿಕ ನಾಡಗೀತೆಯನ್ನ ಯಾವ ಶೈಲಿಯ ರಾಗದಲ್ಲಿ ಹಾಡಬೇಕು, ದಾಟಿ ಮತ್ತು ಸಮಯ ನಿಗಧಿಯನ್ನು ಸಹ ರಾಜ್ಯ ಸರ್ಕಾರ ನಿಗಧಿಪಡಿಸಿರಲಿಲ್ಲ, ಇದೀಗ ಸಂಗೀತ ವಿದೂಷಿ ಎಚ್. ಆರ್ ಲೀಲಾವತಿ ರವರ ಅಧ್ಯಕ್ಷತೆಯಲ್ಲಿ ಸಮಿತಿ ಶಿಫಾರಸು ಮಾಡಿದ ಪ್ರಕಾರ ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಾಂಸ್ಕೃತಿಕ ವೇದಿಕೆಗಳಲ್ಲಿ ಶಾಲಾ ಕಾಲೇಜುಗಳಲ್ಲಿ ಹಾಡುವಾಗ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಲ್ಲಿ 2:30ನಿಮಿಷ ಇನ್ನೂ ಮುಂದೆ ನಾಡಗೀತೆಯನ್ನ ಹಾಡಬೇಕೆಂದು ಅಧಿಕೃತಗೊಳಿಸಿದೆ ನಮ್ಮ ಮೈಸೂರಿನ ಸಾಂಸ್ಕೃತಿಕತೆಗೆ ಕಲಾವಿದರ ತವರೂರಿಗೆ ಸಂದ ಗೌರವವಾಗಿದೆ, ಮೈಸೂರು ಕಲಾವಿದರ ಬಹಳ ವರ್ಷದ ಮಹದಾಸೆ ಈಡೇರಿದೆ ನಿರ್ಧಾರ ಕೈಗೊಂಡು ಅನುಮೋದನೆ ಮಾಡಿದೆ ಎಂದು ರಾಜ್ಯ ಸರ್ಕಾರಕ್ಕೆ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…