ಮೈಸೂರು: ಟೂರ್ನಿಯುದ್ದಕ್ಕೂ ಆಕ್ರಮಣಕಾರಿ ಪ್ರದರ್ಶನ ನೀಡಿದ ಕರ್ನಾಟಕದ ಮಹಿಳಾ ತಂಡ ನ್ಯಾಷನಲ್ ಪ್ಯಾರಾ ಥ್ರೋ ಬಾಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಕೊಯಂತ್ತೂರಿನ ಹಿಂದೂಸ್ತಾನ್ ಕಾಲೇಜ್ ಆಫ್ ಆರ್ಟ್ಸ್ ಅಂಡ್ ಸೈನ್ಸ್ ಕಾಲೇಜಿನಲ್ಲಿ ನಡೆದ ಪ್ಯಾರಾ ಥ್ರೋ ಬಾಲ್ ಚಾಂಪಿಯನ್ ಶಿಪ್ನ ಫೈನಲ್ ಪಂದ್ಯದಲ್ಲಿ ಎದುರಾಳಿ ಗುಜರಾತ್ ತಂಡಕ್ಕೆ ಒಂದು ಅಂಕವನ್ನು ಬಿಟ್ಟು ಕೊಡದೆ ಕರ್ನಾಟಕ ತಂಡ ದಿಗ್ವಿಜಯ ಸಾಧಿಸಿ ಸಾಧನೆಗೈದಿದ್ದಾರೆ.
ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಗುಜರಾತ್, ಝಾರ್ಖಂಡ್, ಉತ್ತರಖಂಡ, ಕೇರಳ ವಿವಿಧ ರಾಜ್ಯಗಳ ೯ ತಂಡಗಳು ಚಾಂಪಿಯನ್ ಶಿಪ್ನಲ್ಲಿ ಪಾಲ್ಗೊಂಡಿದ್ದವು. ಆದರೆ, ಕರ್ನಾಟಕ ತಂಡದ ಆಕ್ರಮಣಕಾರಿ ಆಟ ಇತರೆ ತಂಡಗಳನ್ನು ಮಂಕು ಮಾಡಿತು. ತಂಡದ ನಾಯಕಿ ಜ್ಯೋತಿ, ಗೀತಾ ಮತ್ತು ಸರಸ್ವತಿ ಬೆಸ್ಟ್ ಸರ್ವಿಸ್ರ್ ಪ್ರಶಸ್ತಿಗೆ ಭಾಜನರಾಗಿ ಸಂಭ್ರಮಿಸಿದರು.
ಮಂಜುಳಾ ಬಜಂತ್ರಿ, ಮಂಜುಳಾ ಲಮಾಣಿ, ನಂದಿತಾ, ಫರ್ವಿನ್ ಮೆಹಬೂಬ್, ರಿಜ್ವಾನ್ ಜಮೇದಾರ್, ರೇಣುಕಾ, ಆಶಾ, ಸಂಗೀತ, ಗಾಯತ್ರಿ, ಆಸಿಂಬಿ, ಜಯಪ್ರದ ತಂಡದಲ್ಲಿದ್ದರು.
ಕೊಯಂತ್ತೂರಿನ ಹಿಂದೂಸ್ತಾನ್ ಕಾಲೇಜ್ ಆಫ್ ಆರ್ಟ್ಸ್ ಅಂಡ್ ಸೈನ್ಸ್ ಕಾಲೇಜಿನಲ್ಲಿ ನಡೆದ ನ್ಯಾಷನಲ್ ಪ್ಯಾರಾ ಥ್ರೋ ಬಾಲ್ ಚಾಂಪಿಯನ್ ಶಿಪ್ನಲ್ಲಿ ವಿಜೇತರಾದ ಕರ್ನಾಟಕ ಮಹಿಳಾ ತಂಡವನ್ನು ಚಿತ್ರದಲ್ಲಿ ಕಾಣಬಹುದು.
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು…
ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…