ಜಿಲ್ಲೆಗಳು

ನ್ಯಾಷನಲ್ ಪ್ಯಾರಾ ಥ್ರೋ ಬಾಲ್ ಚಾಂಪಿಯನ್ ಆಗಿ ಹೊರಹೊಮ್ಮಿದ : ಕರ್ನಾಟಕದ ಮಹಿಳಾ ತಂಡ

ಮೈಸೂರು: ಟೂರ್ನಿಯುದ್ದಕ್ಕೂ ಆಕ್ರಮಣಕಾರಿ ಪ್ರದರ್ಶನ ನೀಡಿದ ಕರ್ನಾಟಕದ ಮಹಿಳಾ ತಂಡ ನ್ಯಾಷನಲ್ ಪ್ಯಾರಾ ಥ್ರೋ ಬಾಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಕೊಯಂತ್ತೂರಿನ ಹಿಂದೂಸ್ತಾನ್ ಕಾಲೇಜ್ ಆಫ್ ಆರ್ಟ್ಸ್ ಅಂಡ್ ಸೈನ್ಸ್ ಕಾಲೇಜಿನಲ್ಲಿ ನಡೆದ ಪ್ಯಾರಾ ಥ್ರೋ ಬಾಲ್ ಚಾಂಪಿಯನ್ ಶಿಪ್‌ನ ಫೈನಲ್ ಪಂದ್ಯದಲ್ಲಿ ಎದುರಾಳಿ ಗುಜರಾತ್ ತಂಡಕ್ಕೆ ಒಂದು ಅಂಕವನ್ನು ಬಿಟ್ಟು ಕೊಡದೆ ಕರ್ನಾಟಕ ತಂಡ ದಿಗ್ವಿಜಯ ಸಾಧಿಸಿ ಸಾಧನೆಗೈದಿದ್ದಾರೆ.

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಗುಜರಾತ್, ಝಾರ್ಖಂಡ್, ಉತ್ತರಖಂಡ, ಕೇರಳ ವಿವಿಧ ರಾಜ್ಯಗಳ ೯ ತಂಡಗಳು ಚಾಂಪಿಯನ್ ಶಿಪ್‌ನಲ್ಲಿ ಪಾಲ್ಗೊಂಡಿದ್ದವು. ಆದರೆ, ಕರ್ನಾಟಕ ತಂಡದ ಆಕ್ರಮಣಕಾರಿ ಆಟ ಇತರೆ ತಂಡಗಳನ್ನು ಮಂಕು ಮಾಡಿತು. ತಂಡದ ನಾಯಕಿ ಜ್ಯೋತಿ, ಗೀತಾ ಮತ್ತು ಸರಸ್ವತಿ ಬೆಸ್ಟ್ ಸರ್ವಿಸ್‌ರ್ ಪ್ರಶಸ್ತಿಗೆ ಭಾಜನರಾಗಿ ಸಂಭ್ರಮಿಸಿದರು.

ಮಂಜುಳಾ ಬಜಂತ್ರಿ, ಮಂಜುಳಾ ಲಮಾಣಿ, ನಂದಿತಾ, ಫರ್ವಿನ್ ಮೆಹಬೂಬ್, ರಿಜ್ವಾನ್ ಜಮೇದಾರ್, ರೇಣುಕಾ, ಆಶಾ, ಸಂಗೀತ, ಗಾಯತ್ರಿ, ಆಸಿಂಬಿ, ಜಯಪ್ರದ ತಂಡದಲ್ಲಿದ್ದರು.

ಕೊಯಂತ್ತೂರಿನ ಹಿಂದೂಸ್ತಾನ್ ಕಾಲೇಜ್ ಆಫ್ ಆರ್ಟ್ಸ್ ಅಂಡ್ ಸೈನ್ಸ್ ಕಾಲೇಜಿನಲ್ಲಿ ನಡೆದ ನ್ಯಾಷನಲ್ ಪ್ಯಾರಾ ಥ್ರೋ ಬಾಲ್ ಚಾಂಪಿಯನ್ ಶಿಪ್‌ನಲ್ಲಿ ವಿಜೇತರಾದ ಕರ್ನಾಟಕ ಮಹಿಳಾ ತಂಡವನ್ನು ಚಿತ್ರದಲ್ಲಿ ಕಾಣಬಹುದು.

andolana

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

5 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

9 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

9 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

10 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

10 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

10 hours ago