ಜಿಲ್ಲೆಗಳು

ನ್ಯಾಷನಲ್ ಪ್ಯಾರಾ ಥ್ರೋ ಬಾಲ್ ಚಾಂಪಿಯನ್ ಆಗಿ ಹೊರಹೊಮ್ಮಿದ : ಕರ್ನಾಟಕದ ಮಹಿಳಾ ತಂಡ

ಮೈಸೂರು: ಟೂರ್ನಿಯುದ್ದಕ್ಕೂ ಆಕ್ರಮಣಕಾರಿ ಪ್ರದರ್ಶನ ನೀಡಿದ ಕರ್ನಾಟಕದ ಮಹಿಳಾ ತಂಡ ನ್ಯಾಷನಲ್ ಪ್ಯಾರಾ ಥ್ರೋ ಬಾಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಕೊಯಂತ್ತೂರಿನ ಹಿಂದೂಸ್ತಾನ್ ಕಾಲೇಜ್ ಆಫ್ ಆರ್ಟ್ಸ್ ಅಂಡ್ ಸೈನ್ಸ್ ಕಾಲೇಜಿನಲ್ಲಿ ನಡೆದ ಪ್ಯಾರಾ ಥ್ರೋ ಬಾಲ್ ಚಾಂಪಿಯನ್ ಶಿಪ್‌ನ ಫೈನಲ್ ಪಂದ್ಯದಲ್ಲಿ ಎದುರಾಳಿ ಗುಜರಾತ್ ತಂಡಕ್ಕೆ ಒಂದು ಅಂಕವನ್ನು ಬಿಟ್ಟು ಕೊಡದೆ ಕರ್ನಾಟಕ ತಂಡ ದಿಗ್ವಿಜಯ ಸಾಧಿಸಿ ಸಾಧನೆಗೈದಿದ್ದಾರೆ.

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಗುಜರಾತ್, ಝಾರ್ಖಂಡ್, ಉತ್ತರಖಂಡ, ಕೇರಳ ವಿವಿಧ ರಾಜ್ಯಗಳ ೯ ತಂಡಗಳು ಚಾಂಪಿಯನ್ ಶಿಪ್‌ನಲ್ಲಿ ಪಾಲ್ಗೊಂಡಿದ್ದವು. ಆದರೆ, ಕರ್ನಾಟಕ ತಂಡದ ಆಕ್ರಮಣಕಾರಿ ಆಟ ಇತರೆ ತಂಡಗಳನ್ನು ಮಂಕು ಮಾಡಿತು. ತಂಡದ ನಾಯಕಿ ಜ್ಯೋತಿ, ಗೀತಾ ಮತ್ತು ಸರಸ್ವತಿ ಬೆಸ್ಟ್ ಸರ್ವಿಸ್‌ರ್ ಪ್ರಶಸ್ತಿಗೆ ಭಾಜನರಾಗಿ ಸಂಭ್ರಮಿಸಿದರು.

ಮಂಜುಳಾ ಬಜಂತ್ರಿ, ಮಂಜುಳಾ ಲಮಾಣಿ, ನಂದಿತಾ, ಫರ್ವಿನ್ ಮೆಹಬೂಬ್, ರಿಜ್ವಾನ್ ಜಮೇದಾರ್, ರೇಣುಕಾ, ಆಶಾ, ಸಂಗೀತ, ಗಾಯತ್ರಿ, ಆಸಿಂಬಿ, ಜಯಪ್ರದ ತಂಡದಲ್ಲಿದ್ದರು.

ಕೊಯಂತ್ತೂರಿನ ಹಿಂದೂಸ್ತಾನ್ ಕಾಲೇಜ್ ಆಫ್ ಆರ್ಟ್ಸ್ ಅಂಡ್ ಸೈನ್ಸ್ ಕಾಲೇಜಿನಲ್ಲಿ ನಡೆದ ನ್ಯಾಷನಲ್ ಪ್ಯಾರಾ ಥ್ರೋ ಬಾಲ್ ಚಾಂಪಿಯನ್ ಶಿಪ್‌ನಲ್ಲಿ ವಿಜೇತರಾದ ಕರ್ನಾಟಕ ಮಹಿಳಾ ತಂಡವನ್ನು ಚಿತ್ರದಲ್ಲಿ ಕಾಣಬಹುದು.

andolana

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

3 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

7 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

7 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

7 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

7 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

7 hours ago